news kadaba desk

ಭಟ್ಕಳ : ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಕುಂದಾಪುಕ್ಕೆ ವರ್ಗಾವಣೆ

(ನ್ಯೂಸ್  ಕಡಬ) newskadaba.com ಭಟ್ಕಳ, ಡಿ.30.  ಭಟ್ಕಳದ ಡಿವೈಸ್ಪಿ ಕೆ.ಯು. ಬೆಳ್ಳಿಯಪ್ಪ ಅವರನ್ನು ಕುಂದಾಪುರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷಾಗಳ ಕಾಲ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಪೊಲೀಸ್ ವಲಯದಲ್ಲಿ ಎಲ್ಲರ ಪ್ರೀತಿ,ವಿಶ್ವಾಸವನ್ನು ಸಂಪಾದಿಸಿಕೊಂಡಿದ್ದರು. ಇದೀಗ ಭಟ್ಕಳ ಡಿವೈಎಸ್ಪಿಯಾಗಿ ವರ್ಗಾವಣೆ ಗೊಂಡಿರುವ ಶ್ರೀಕಾಂತ್ ರವರು ಒಂದೆರಡು ದಿನಗಳಲ್ಲಿ ಆಧಿಕಾರ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಭಟ್ಕಳ : ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಕುಂದಾಪುಕ್ಕೆ ವರ್ಗಾವಣೆ Read More »

ಕರಾವಳಿ

ಮಕ್ಕಳಿಗೆ ಮಧುಮೇಹ ಖಾಯಿಲೆ ➤ ಮಕ್ಕಳನ್ನು ನದಿಗೆಸೆದು ದಂಪತಿ ಆತ್ಮಹತ್ಯೆ

(ನ್ಯೂಸ್  ಕಡಬ) newskadaba.com ಚೆನ್ನೈ, ಡಿ. 30. ಮಧುಮೇಹ ಅಥವಾ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ದಂಪತಿ ತಮ್ಮಿಬ್ಬರು ಅಪ್ರಾಪ್ತ ಮಕ್ಕಳನ್ನು ನದಿಗೆ ದೂಡಿ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಮೃತರನ್ನು ಯುವರಾಜ್ (41), ಅವರ ಪತ್ನಿ ವನ್ವಿಜಿ (38) ಮತ್ತು ಅವರ ಮಕ್ಕಳಾದ ನಿತಿಶಾ (7), ಅಪ್ಸರಾ (4) ಎಂದು ಗುರುತಿಸಲಾಗಿದೆ. ದನ ಮೇಯಿಸುವವರು ನದಿಯಲ್ಲಿ ನಾಲ್ಕು ಶವ ತೇಲುತ್ತಿರುವುದನ್ನು ನೋಡಿ ಆತಂಕಗೊಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಸ್ಥಳೀಯ ಈಜುಗಾರರ ನೆರವಿನಿಂದ ಪೊಲೀಸರು

ಮಕ್ಕಳಿಗೆ ಮಧುಮೇಹ ಖಾಯಿಲೆ ➤ ಮಕ್ಕಳನ್ನು ನದಿಗೆಸೆದು ದಂಪತಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನೆ ದಾಳಿ- ಮಹಿಳೆ ಮೃತ್ಯು..!

(ನ್ಯೂಸ್  ಕಡಬ) newskadaba.com ಹುಣಸೂರು, ಡಿ. 30. ಮಹಿಳೆಯ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಯಜಮಾನ ಸಿದ್ದೇಗೌಡರ ಪತ್ನಿ ಚಿಕ್ಕಮ್ಮ (57) ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ ಎನ್ನಲಾಗಿದೆ. ಸ್ಥಳಕ್ಕೆ ಶಾಸಕ ಜಿ.ಟಿ.ದೇವೆಗೌಡ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಆನೆಯನ್ನು ಶೀಘ್ರವಾಗಿ ಹಿಡಿಯುಂತೆ

ಆನೆ ದಾಳಿ- ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆ ಏರಿಕೆ

(ನ್ಯೂಸ್ ಕಡಬ) newskadaba.com ಚಂಡೀಗಢ, ಡಿ. 30. ದೇಶದಲ್ಲಿ ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಅಧ್ಯಯನವೊಂದು ಮಾಹಿತಿ ನೀಡಿದೆ. ದೇಶದಲ್ಲಿ ಅಳಿವಿನಂಚಿನಲ್ಲಿದ್ದ ಬಿಗ್ ಕ್ಯಾಟ್ಸ್ ಎಂಬ ಸಂತತಿಯು ಇದೀಗ ಏರಿಕೆಯತ್ತ ಸಾಗಿದ್ದು, ಹಿಮಚಿರತೆಗಳ ಕುರಿತು ನಡೆದ ಮೊದಲ ಅಧ್ಯಯನದಲ್ಲಿ ಈ ಮಹತ್ವದ ಅಂಶ ಬೆಳಕಿಗೆ ಬಂದಿದ ಎನ್ನಲಾಗಿದೆ. ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆ ಲಾಹೌಲ್-ಸ್ಪಿತಿಯಲ್ಲಿ ಅಳಿವಿನಂಚಿನಲ್ಲಿರುವ ಪ್ರಭೇದಗಳ ಸರ್ವೆಗಾಗಿ ನೇಮಕವಾಗಿದ್ದ ತಜ್ಞರ ತಂಡ ಈ ಕುರಿತು ಅಧ್ಯಯನ ನಡೆಸಿದೆ.

ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..!

(ನ್ಯೂಸ್  ಕಡಬ) newskadaba.com ಉಳ್ಳಾಲ, ಡಿ. 30. ತಲೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಆಶ್ವಿತ್ ಎಂದು ಗುರುತಿಸಲಾಗಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮದಲ್ಲಿ ಆರನೇ ತರಗತಿ ಓದುತ್ತಿದ್ದ ಬಾಲಕ ಮೆದುಳು ಜ್ವರದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತ ಬಾಲಕನ ತಂದೆ ಎರಡು ವರ್ಷಗಳ ಹಿಂದೆ ಅವಘಡವೊಂದರಲ್ಲಿ ಮೃತಪಟ್ಟಿದ್ದರು. ಆಶ್ವಿನ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿಗೆ ಪಾತ್ರನಾಗಿದ್ದ ಎಂದು ತಿಳಿದು ಬಂದಿದೆ.  

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನ್ನೂ 15,000 ಶಿಕ್ಷಕರ ನೇಮಕ ➤ ಸಿಎಂ ಬೊಮ್ಮಾಯಿ

(ನ್ಯೂಸ್  ಕಡಬ) newskadaba.com ಬೆಳಗಾವಿ, ಡಿ. 30. ಪ್ರಸ್ತುತ ಈ ವರ್ಷ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಚಾಲನೆ ನೀಡಲಾಗಿದ್ದು, ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಕುರಿತು ಪರಿಷತ್‌ನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆ ವೇಳೆ ಉತ್ತರಿಸಿದ ಅವರು, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಿಸಲು ಚಾಲನೆ ನೀಡಲಾಗಿದೆ. ಇನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು

ಇನ್ನೂ 15,000 ಶಿಕ್ಷಕರ ನೇಮಕ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಕಲ್ಲು ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸರೋಜ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಕುಟುಂಬಸ್ಥರು ಮಂಜುನಾಥ್ ಬಾಳಪ್ಪ ಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಪ್ಪ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ ಹಾಗೂ ಕಾಶಿನಾಥ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆದರೆ ಪ್ರಮುಖ

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ ➤ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 30. ಆಕ್ಸಿಜನ್ ಸಿಲಿಂಡರ್ ಒಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಯ ಹೊರಗೆ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಸ್ಪತ್ರೆ ಹಾಗೂ ಸಮೀಪದ ಮನೆಗಳ ಗಾಜುಗಳು ಒಡೆದುಹೋಗಿದ್ದು, ಹಾಗೆಯೇ ಎರಡು ದೇಹಗಳು ಸಂಪೂರ್ಣ ಛಿದ್ರವಾಗಿದೆ ಎನ್ನಲಾಗಿದೆ. ಘಟನೆಯಿಂದಾಗಿ ಹಲವಾರು ಆಮ್ಲಜನಕ ಸಿಲಿಂಡರ್ ಗಳನ್ನು ಸಾಗಿಸುವ ಟ್ರಕ್ ಕೂಡ ರಸ್ತೆಯ ಮಧ್ಯದಲ್ಲಿ ನಿಂತಿರುವುದು ಕಂಡುಬಂದಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ

ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ ➤ ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥ

(ನ್ಯೂಸ್  ಕಡಬ) newskadaba.com ಯಾದಗಿರಿ, ಡಿ. 30. ಮೈ ಮೇಲೆ ಬಿಸಿ ಸಾಂಬಾರ್ ಬಿದ್ದು ಮೂವರು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿಯ ಜಿಲ್ಲೆಯ ಸುರಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ನೀಡುವ ಸಂದರ್ಭ  ಬಿಸಿ ಸಾಂಬಾರ್ ಮೈಮೇಲೆ ಬಿದ್ದಿದ್ದು, ತಕ್ಷಣವೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಶಾಲಾ ಸಿಬ್ಬಂದಿಗಳ ನಿರ್ಲಕ್ಷತನದಿಂದ ಈ ಘಟನೆ ನಡೆದಿದೆ ಎಂದು ಪೋಷಕರು

ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 30. ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಮೃತರನ್ನು ವಂಸತ ರೈ (52) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಡುತ್ತಿದ್ದ ಇವರ ಮೃತದೇಹವು ಇಂದು ಬೆಳಗ್ಗೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

ವಿಟ್ಲ: ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top