news kadaba desk

ಮೈಸೂರು: ಬೋನಿಗೆ ಬಿದ್ದ ಮತ್ತೊಂದು ಚಿರತೆ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ವರದಿಯಾಗಿದೆ. ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಗಾಗಿದ್ದರು. ಚಿರತೆಯನ್ನು ಹಿಡಿಯಲು ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆಯನ್ನು ಸೆರೆ ಹಿಡಿದರು. ಸೆರೆಯಾದ ಚಿರತೆಗೆ ಸುಮಾರು 8 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಆರ್​ಎಫ್​​ಓ […]

ಮೈಸೂರು: ಬೋನಿಗೆ ಬಿದ್ದ ಮತ್ತೊಂದು ಚಿರತೆ Read More »

ಕರ್ನಾಟಕ

ಕಾಡಾನೆ ಹಾವಳಿ ಹಿನ್ನೆಲೆ ➤ ಸೆರೆಗೆ ಸಜ್ಜಾದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಡಿ. 27. ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆಗಳ ಸೆರೆಗೆ ಅರಣ್ಯ ಇಲಾಖೆ ಸಜ್ಜಾಗಿದೆ. ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳಾದ ಧನಂಜಯ, ಪ್ರಶಾಂತ, ಸುಗ್ರೀವ, ಮತ್ತಿಗೋಡು ಸಾಕಾನೆ ಶಿಬಿರದಿಂದ ಅಭಿಮನ್ಯ, ಭೀಮ ಆನೆಗಳು ಈಗಾಗಲೇ ಕರಡಿಗೋಡು ಗ್ರಾಮಕ್ಕೆ ಬಂದಿದ್ದು, ಕರಡಿಗೋಡು ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ತೋಟದಲ್ಲಿ ಬೀಡುಬಿಟ್ಟು, ಕೃಷಿ ಫಸಲು ನಾಶ ಮಾಡುತ್ತಿದ್ದ ಹಾಗೂ ಮಾನವನ ಮೇಲೆ ದಾಳಿಗೆ ಮುಂದಾಗುತ್ತಿದ್ದ ಕಾಡಾನೆಗಳನ್ನು ಸೆರೆ ಹಿಡಿಯಲು ಸಾಕಾನೆಗಳ ಜೊತೆ ಅರಣ್ಯಧಿಕಾರಿಗಳು ಸಜ್ಜಾಗಿದ್ದಾರೆ.

ಕಾಡಾನೆ ಹಾವಳಿ ಹಿನ್ನೆಲೆ ➤ ಸೆರೆಗೆ ಸಜ್ಜಾದ ಅರಣ್ಯ ಇಲಾಖೆ Read More »

ಕರ್ನಾಟಕ
Death, deadbody, Waterfall

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಯುವಕಯೋರ್ವ ಊಟ‌ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕನಕಪುರದ ಪ್ರೈಡ್ ಹೋಟೆಲ್‌ವೊಂದರಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಪ್ರೀತಂ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ​ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 27. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ವರದಿಯಾಗಿದೆ. ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಸ್ಕೂಟಿಗೆ ಬಲಿಯಾಗಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.    

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಡಿ. 27. ಒಂದು ವರ್ಷದ ಹೆಣ್ಣು ಮಗುವಿನ ಗಂಟಲಲ್ಲಿ ಚಾಕಲೇಟ್ ಸಿಲುಕಿ‌ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸತಾರದಲ್ಲಿ ವರದಿಯಾಗಿದೆ. ಮೃತಪಟ್ಟ ಮಗುವನ್ನು ಶಾರ್ವರಿ ಸುಧೀರ್ ಜಾಧವ್ ಎಂದು ಗುರುತಿಸಲಾಗಿದೆ. ಮಗು ಚಾಕೊಲೇಟ್​ ನುಂಗಿ ಒದ್ದಾಡಿ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದು, ಇದನ್ನು ಕಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಕುಟುಂಬದ ರೋಧನ ಮುಗಿಲು ಮುಟ್ಟಿದೆ.  

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 27. ಯುವಕನೋರ್ವ ಮಗಳ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಬಿಎಸ್ ಎಫ್ ಯೋಧನೋರ್ವನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.   ನದಿಯಾಡ್‌ನ ಚಕ್ಲಾಸಿ ಗ್ರಾಮದಲ್ಲಿ ಬಿಎಸ್‌ಎಫ್‌ ಯೋಧರೊಬ್ಬರ ಅಪ್ರಾಪ್ತ ಮಗಳ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಯೋಧ ಬಾಲಕನ‌ ಮನೆಗೆ ತೆರಳಿ ಪ್ರಶ್ನಿಸಿದ್ದು, ಈ ವೇಳೆ ಬಾಲಕನ ಕುಟುಂಬಸ್ಥರು ಕೊಡಲಿ ಹಾಗೂ ದೊಣ್ಣೆಗಳಿಂದ ಯೋಧ ಮತ್ತು ಅವರ

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 27. ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕಲ್ಮಂಜ ಗ್ರಾಮದಲ್ಲಿ ವರದಿಯಾಗಿದೆ. ರಬ್ಬರ್ ಸ್ಮೋಕ್ ಹೌಸ್ ನಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು, ಸುಮಾರು 7,000 ಕ್ಕಿಂತ ಅಧಿಕ ತೆಂಗಿನಕಾಯಿ, 2 ಕ್ವಿಂಟಾಲ್ ಗಿಂತಲೂ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದ್ದಲ್ಲದೇ ಬೆಂಕಿಯ ತೀವ್ರತೆಗೆ ಕೊಟ್ಟಿಗೆಯ ಛಾವಣಿ ಹಾಗೂ ಗೋಡೆಗೂ ಹಾನಿ ಉಂಟಾಗಿದ್ದು, ಸುಮಾರು 3 ಲಕ್ಷ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯ ಲಕ್ಷ್ಮೀದೇವಿ ನಗರದಲ್ಲಿ ವರದಿಯಾಗಿದೆ. ಗಾಯಾಳುಗಳನ್ನು ಬಾಲಕಿ ನೂರಿನ್ ಫಲಕ್ ಮತ್ತು ಈಕೆ ತಂದೆ ಫಕ್ರುದ್ದೀನ್‌ ಎಂದು ಗುರುತಿಸಲಾಗಿದೆ. ಬಿಬಿಎಂಪಿಯ ಆರಂಭಿಕ ವರದಿಗಳ ಪ್ರಕಾರ, ನೂರಿನ್ ಫಲಕ್ ಎಂಬ ಬಾಲಕಿಯು ತನ್ನ ತಂದೆಯ ಜೊತೆ ಹೊರಗೆ ಹೋಗುತ್ತಿದ್ದಾಗ ನಾಯಿಯು ಆಕೆಯನ್ನು ಹಿಂಬಾಲಿಸಿ ದಾಳಿ ಮಾಡಿದ್ದು, ಇದನ್ನು ತಪ್ಪಿಸಲು

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಂತೆಯೇ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶೀ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗುತ್ತದೆ. ಪ್ರತೀ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಕರೋನ ಪರೀಕ್ಷೆಗೆ ಒಳಪಡುತ್ತಾರೆ. ಪ್ರತಿ ವಿಮಾನದಲ್ಲಿ ಅಂತಹ ಪ್ರಯಾಣಿಕರನ್ನು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳು ಗುರುತಿಸುತ್ತವೆ. ಕೊರೋನಾ ಮಾದರಿಯನ್ನು ಸಲ್ಲಿಸಿದ ನಂತರವೇ, ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ. ಪ್ರವೇಶದ ಸ್ಥಳದಲ್ಲಿ ಎಲ್ಲಾ ಪ್ರಯಾಣಿಕರಿಗೆ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ Read More »

ಕರಾವಳಿ
Scroll to Top