news kadaba desk

ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ       

(ನ್ಯೂಸ್ ಕಡಬ)newskadaba.comಸುಳ್ಯ, ಆ.07. ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಕಂಡುಬಂದಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದ್ದು, ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.

ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ        Read More »

ಕರಾವಳಿ

ಬಂಟ್ವಾಳ: ಮನೆಯ ಬಾಗಿಲು ಒಡೆದು ಚಿನ್ನಾಭರಣ, ನಗದು ಕಳವು     ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.comಬಂಟ್ವಾಳ, ಆ.07. ಮನೆಮಂದಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಚಿನ್ನದ ಆಭರಣಗಳ ಸಹಿತ ನಗದನ್ನು ದೋಚಿದ ಘಟನೆ ವರದಿಯಾಗಿದೆ. ಅಗರಿ ನಿವಾಸಿ ಜಗನ್ನಾಥ್ ರವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದ್ದು, ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್‌ ಹಾಗೂ ಇಬ್ಬರು ಮಕ್ಕಳು ಮಾತ್ರ ಅಗರಿಯ ಮನೆಯಲ್ಲಿ ವಾಸವಾಗಿದ್ದರು.ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಮರಳಿ ಮನೆಗೆ ಬಂದಾಗ

ಬಂಟ್ವಾಳ: ಮನೆಯ ಬಾಗಿಲು ಒಡೆದು ಚಿನ್ನಾಭರಣ, ನಗದು ಕಳವು     ಪ್ರಕರಣ ದಾಖಲು Read More »

ಕರ್ನಾಟಕ

ದ.ಕ. ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಸಂಚರಿಸಲು ಅನುಮತಿ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

ದ.ಕ. ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಸಂಚರಿಸಲು ಅನುಮತಿ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ Read More »

ಕರಾವಳಿ

‘ಇಂಧನ ಅಭಿವೃದ್ಧಿ ನಮ್ಮ ಧ್ಯೇಯ’          ಪ್ರಲ್ಹಾದ್ ಜೋಶಿ ಘೋಷಣೆ       

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಅಭಿವೃದ್ಧಿ ಹೊಂದಿದ ಭಾರತ ನಮ್ಮ ಧ್ಯೇಯ, ಇಂಧನ ಅಭಿವೃದ್ಧಿ ನಮ್ಮ ಧ್ಯೇಯ ಎಂದು ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಘೊಷಿಸಿದ್ದಾರೆ.ಅವರು ಇಂದು ರಾಜ್ಯಸಭೆಯಲ್ಲಿ ಇಂಧನ ಸಚಿವಾಲಯದ ಕಾರ್ಯವನ್ನು ಎತ್ತಿ ತೋರಿಸಿದ್ದಾರೆ. ನವೀಕರಿಸಬಹುದಾದ ಇಂಧನವು ಕೇವಲ ಒಂದು ಆಯ್ಕೆಯಲ್ಲ, ಅದು ರಾಷ್ಟ್ರದ ಸ್ಥಿರತೆಗೆ ಅವಶ್ಯಕವಾಗಿದೆ. ಇದು ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಕಾರಣವಾಗುತ್ತದೆ. ವಿಶ್ವದ ದೊಡ್ಡ ಆರ್ಥಿಕತೆ ಹೊಂದಿರುವ ಎಲ್ಲಾ ದೇಶಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರವು ವಿಶೇಷ

‘ಇಂಧನ ಅಭಿವೃದ್ಧಿ ನಮ್ಮ ಧ್ಯೇಯ’          ಪ್ರಲ್ಹಾದ್ ಜೋಶಿ ಘೋಷಣೆ        Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದರು. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮುರಿದು ಬಿದ್ದ ಕಾಳಿ ನದಿ ಸೇತುವೆ ಕಾರವಾರ – ಗೋವಾ ಸಂಚಾರ ತಾತ್ಕಾಲಿಕ ಬಂದ್                    

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ ಎಂದು ವರದಿ ತಿಳಿಸಿದೆ. 40 ವರ್ಷದ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯು ಕುಸಿದು ಬಿದ್ದು, ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗೋವಾದಿಂದ ಹುಬ್ಬಳ್ಳಿಗೆ ಇದೇ ಮಾರ್ಗವಾಗಿ ತೆರಳುತಿದ್ದ ಖಾಲಿ ಲಾರಿಯು ಸೇತುವೆಯಿಂದ ಕೆಳಗೆ ಬಿದ್ದಿದೆ. ಬಳಿಕ ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು

ಮುರಿದು ಬಿದ್ದ ಕಾಳಿ ನದಿ ಸೇತುವೆ ಕಾರವಾರ – ಗೋವಾ ಸಂಚಾರ ತಾತ್ಕಾಲಿಕ ಬಂದ್                     Read More »

ಕರಾವಳಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ಮತ್ತೊಂದು ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು Read More »

ಕರ್ನಾಟಕ

ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ ಬಾಂಗ್ಲಾದೇಶ ಸೇನೆ ವಶಕ್ಕೆ                           

(ನ್ಯೂಸ್ ಕಡಬ)newskadaba.com ಢಾಕಾ, ಆ.06. ನೆರೆಯ ಬಾಂಗ್ಲಾದೇಶದಲ್ಲಿನ ಹಿಂಸಾಚಾರ, ಪ್ರಕ್ಷುಬ್ಧತೆಗೆ ಬೆದರಿದ ಶೇಕ್ ಹಸೀನಾ ಜೀವ ಭಯದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತಕ್ಕೆ ಪರಾರಿಯಾದ ನಂತರ ಸೇನೆಯು ಮಧ್ಯಂತರ ಸರ್ಕಾರವನ್ನು ಸ್ಥಾಪಿಸಲಿದೆ ಎಂದು ಅಲ್ಲಿನ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಘೋಷಿಸಿದ್ದಾರೆ. ರಾಜೀನಾಮೆಗೆ ಒತ್ತಡ ಹೆಚ್ಚಾದ ನಂತರ ಶೇಕ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ದೇಶದಿಂದ ಪರಾರಿಯಾಗಿದ್ದಾರೆ. ಢಾಕಾ ತೊರೆದ ನಂತರ ಅವರು ಸಿ -130 ಸೇನಾ ವಿಮಾನದಲ್ಲಿ ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ.

ಜೀವ ಭಯದಲ್ಲಿ ಭಾರತಕ್ಕೆ ಶೇಕ್ ಹಸೀನಾ ಪರಾರಿ ಬಾಂಗ್ಲಾದೇಶ ಸೇನೆ ವಶಕ್ಕೆ                            Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.06.  ಆಟೋ ಚಾಲಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೃತಪಟ್ಟವರನ್ನು ಮಹಮ್ಮದ್(48) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ ಎಂದು ವರದಿ ತಿಳಿಸಿದೆ.

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top