Keerthana

ಲಾಕ್‌ಡೌನ್ ಇದ್ದರೂ ರವಿವಾರ ಮದುವೆ ಸಮಾರಂಭಗಳಿಗೆ ಅನುಮತಿ

ಬೆಂಗಳೂರು, ಮೇ 21: ಪ್ರತಿ ರವಿವಾರ ಸಂಪೂರ್ಣ ಲಾಕ್‌ಡೌನ್ ಇದ್ದರೂ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ. ಮದುವೆಯಲ್ಲಿ ಗರಿಷ್ಠ ಅತಿಥಿಗಳ ಸಂಖ್ಯೆ 50 ಇರಬೇಕು. ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಅನುಸರಿಸಿ ಸರಳ ವಿವಾಹ ನಡೆಸಬಹುದು. ಇದಲ್ಲದೆ, ರವಿವಾರಗಳೆಂದು ಅತ್ಯವಶ್ಯಕ ಚಟುವಟಿಕೆಗಳಿಗೂ ಅವಕಾಶ ನೀಡಬಹುದು ಎಂದೂ ಹೇಳಿದೆ. ಉಳಿದಂತೆ ರವಿವಾರ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಸಂಪೂರ್ಣ ಲಾಕ್‌ಡೌನ್ ಇರುತ್ತದೆ. ಎಲ್ಲ ರೀತಿಯ ಚಟುವಟಿಕೆಗಳು, ವಾಹನ […]

ಲಾಕ್‌ಡೌನ್ ಇದ್ದರೂ ರವಿವಾರ ಮದುವೆ ಸಮಾರಂಭಗಳಿಗೆ ಅನುಮತಿ Read More »

ಕರ್ನಾಟಕ

ಅಂಫಾನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ ತತ್ತರ: 72 ಮಂದಿ ಸಾವು

ಹೊಸದಿಲ್ಲಿ, ಮೇ 21: ಅಂಫಾನ್ ಚಂಡಮಾರುತದಿಂದ ರಾಜ್ಯದಲ್ಲಿ ಸುಮಾರು 72 ಮಂದಿ ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಚಂಡಮಾರುತದಿಂದ ಮೃತಪಟ್ಟ ಕುಟುಂಬಕ್ಕೆ 2ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ ಎಂದು ಅವರು ಹೇಳಿದರು. ಸ್ವಾತಂತ್ರ್ಯ ನಂತರದ ಅತೀ ಭೀಕರ ಚಂಡಮಾರುತಗಳಲ್ಲಿ ಒಂದೆನಿಸಿರುವ ಅಂಫಾನ್ ಹೊಡೆತಕ್ಕೆ ಪಶ್ಚಿಮ ಬಂಗಾಳ ಜರ್ಜರಿತಗೊಂಡಿದೆ. ಗಂಟೆಗೆ 190 ಕಿ.ಮೀ ವೇಗದಲ್ಲಿ ಬುಧವಾರ ಮಧ್ಯಾಹ್ನ 2.30ಕ್ಕೆ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿರುವ ಅಂಫಾನ್ ಈ ವರೆಗೆ ಅಲ್ಲಿ

ಅಂಫಾನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ ತತ್ತರ: 72 ಮಂದಿ ಸಾವು Read More »

ಕರಾವಳಿ

ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ

ಬೆಂಗಳೂರು, ಮೇ 18: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 99 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1246ಕ್ಕೇರಿಕೆಯಾಗಿದೆ. ಇದು ರಾಜ್ಯದಲ್ಲಿ ಹೊಸ ದಾಖಲೆಯಾಗಿದೆ. ಇಂದು ಮಧ್ಯಾಹ್ನದ ಬುಲೆಟಿನ್‌ನಲ್ಲಿ 84 ಜನರ ವರದಿಯಾಗಿದ್ದು, ಕಲಬುರಗಿಯಲ್ಲಿ 5, ದಕ್ಷಿಣ ಕನ್ನಡದಲ್ಲಿ 2 ಮತ್ತು ಉಡುಪಿ- ಉತ್ತರ ಕನ್ನಡದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನಲ್ಲಿ 5 ಪ್ರಕರಣಗಳು ಶಿವಾಜಿನಗರದಲ್ಲಿ ವರದಿಯಾಗಿದೆ. ಮತ್ತೊಂದು ಪ್ರಕರಣ ತಮಿಳುನಾಡಿನಿಂದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ ನಾಲ್ಕು ಮಕ್ಕಳಿಗೆ ಸೇರಿದಂತೆ ಐವರಿಗೆ ಸೋಂಕು ತಗುಲಿದ್ದು,

ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ Read More »

ಕರ್ನಾಟಕ

breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ

ಮಂಗಳೂರು, ಮೇ 18: ದ.ಕ. ಜಿಲ್ಲೆಯ ಇಬ್ಬರು ಹಾಗೂ ಉಡುಪಿಯ ಒಬ್ಬರಲ್ಲಿ ಸೋಮವಾರ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೇರಿಕೆಯಾಗಿದೆ. ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್‌ನಲ್ಲಿದ್ದ 30 ವರ್ಷದ ವ್ಯಕ್ತಿ ಹಾಗೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟ ತೊಂದರೆಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇನ್ನು ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ ಉಡುಪಿಯ ಕೊಲ್ಲೂರಿನ 28 ವರ್ಷದ ಮಹಿಳೆಗೂ ಕೊರೋನ ದೃಢವಾಗಿದೆ.

breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ Read More »

ಕರಾವಳಿ

ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ

ಬೆಂಗಳೂರು, ಮೇ 18: ಕೊರೋನ ಸೋಂಕು ಹರಡುವಿಕೆ ನಿಯಂತ್ರಿಸಲು ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಬರುವ ಜನರಿಗೆ ಮೇ 31ರ ವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲಾಕ್‌ಡೌನ್ 4.0 ಜಾರಿಯಲ್ಲಿದ್ದು, ಈ ಹಂತದಲ್ಲಿ ಹೊರ ರಾಜ್ಯಗಳ ಜನರಿಗೆ ತೀರಾ ಅನಿವಾರ್ಯವಾದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂತಹವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಹಾಗೆ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ರಾಜ್ಯದ

ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ Read More »

ಕರ್ನಾಟಕ

ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ

ಬೆಂಗಳೂರು, ಮೇ 18: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸೆಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಸೆಸೆಲ್ಸಿ ಪರೀಕ್ಷೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪ್ರತಿ

ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ Read More »

ಕರ್ನಾಟಕ

ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ

ರವಿವಾರ ಸಂಪೂರ್ಣ ಲಾಕ್‌ಡೌನ್ ಬೆಂಗಳೂರು, ಮೇ 18: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಬಸ್ ಸಂಚಾರ ಮೇ 19ರಂದು ಆರಂಭವಾಗಲಿದೆ. ಆದರೆ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಜನ, ಬಸ್ ಸಂಚಾರ ನಿಷೇಧವಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲಾಗಿದ್ದು, ಬಸ್‌ನಲ್ಲಿ 30 ಜನರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಕೆಂಪು ವಲಯ ಹಾಗೂ ಕಂಟೈನ್ಮೆಂಟ್ ಹೊರತುಪಡಿಸಿ ಉಳಿದೆಡೆ ಸಂಚಾರ ಆರಂಭವಾಗಲಿದೆ ಎಂದು ಹೇಳಿದರು. ಆಟೊ, ಕ್ಯಾಬ್‌ಗಳಲ್ಲಿ

ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ Read More »

ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ

ಮಂಗಳೂರು, ಮೇ 18: ದ.ಕ. ಜಿಲ್ಲೆಯ ವಿವಿಧೆಡೆ ಸೋಮವಾರ ಮುಂಜಾನೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಮುಂಜಾನೆ ಸುಮಾರು 5 ಗಂಟೆಗೆ ಆರಂಭಗೊಂಡ ಮಳೆಯು ಬೆಳಗ್ಗೆ 9ರವರೆಗೂ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡ ಅಂಫಾನ್ ಚಂಡಮಾರುತದ ಪ್ರಭಾವದಿಂದ ಮೋಡ ಕವಿದ ವಾತಾವರಣದ ಮಧ್ಯೆ ಮಳೆ ಸುರಿದಿದೆ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕಡಬ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಬಿರುಗಾಳಿಯೂ ಬೀಸಿದ ಪರಿಣಾಮ ಅಲ್ಲಲ್ಲಿ ಮರಗಳು ಉರುಳಿದ್ದು, ವಿದ್ಯುತ್

ದ.ಕ. ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 55 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆ

ಬೆಂಗಳೂರು, ಮೇ 17: ರಾಜ್ಯದಲ್ಲಿ ಇಂದು ಹೊಸದಾಗಿ 55 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮಂಡ್ಯ ಜಿಲ್ಲೆಯೊಂದರಲ್ಲೇ 22 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕಲಬುರಗಿಯಲ್ಲಿ 10, ಹಾಸನ ಜಿಲ್ಲೆಯಲ್ಲಿ 6, ಧಾರವಾಡದಲ್ಲಿ 4, ಯಾದಗಿರಿಯಲ್ಲಿ 3, ಶಿವಮೊಗ್ಗದಲ್ಲಿ 2, ಕೋಲಾರದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಉಡುಪಿಯಲ್ಲಿ 1, ವಿಜಯಪುರದಲ್ಲಿ 1 ಉತ್ತರ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ. 1,147

ರಾಜ್ಯದಲ್ಲಿ ಇಂದು 55 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಇನ್ನೆರೆಡು ದಿನ ಲಾಕ್‌ಡೌನ್ ಮುಂದುವರಿಕೆ

ಬೆಂಗಳೂರು, ಮೇ 17: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್‌ಡೌನ್ ಮುಂದುವರಿಯಲಿದೆ. ಮೇ 19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರಕಾರ ಆದೇಶಿಸಿದೆ. ಕೊರೋನ ನಿಯಂತ್ರಣಕ್ಕೆ ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನೆರೆಡು ದಿನ ಲಾಕ್‌ಡೌನ್ ಮುಂದುವರಿಕೆ Read More »

ಕರ್ನಾಟಕ
Scroll to Top