Keerthana

ಮಂಗಳೂರು: ಪದವಿ ಪ್ರಮಾಣ ಸಮಾರಂಭ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ (ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೀದರ್), ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಮತ್ತು ಸಮೇತಿ, ಕೃಷಿ ವಿಶ್ವ ವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಸಗೊಬ್ಬರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವು ಜೂನ್ 23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮೀನುಗಾರಿಕೆ ಕಾಲೇಜಿನಲ್ಲಿ ಮಂಗಳೂರು ಇಲ್ಲಿ ನಡೆಯಲಿದೆ.

ಮಂಗಳೂರು: ಪದವಿ ಪ್ರಮಾಣ ಸಮಾರಂಭ Read More »

ಕರಾವಳಿ

ಪಾರಂಪರಿಕ ಕಲೆಗಳ 4 ವರ್ಷ ಉಚಿತ ತರಬೇತಿ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 21. 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 30 ರೊಳಗೆ

ಪಾರಂಪರಿಕ ಕಲೆಗಳ 4 ವರ್ಷ ಉಚಿತ ತರಬೇತಿ Read More »

ಕರಾವಳಿ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20 ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 206 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. ಮಳೆಯಾಶ್ರಿತ ಭತ್ತ ಬೆಳೆಯುವ ಎಲ್ಲಾ ರೈತರು ಹೆಕ್ಟೇರಿಗೆ ನಿಗದಿಪಡಿಸಿರುವ ಪ್ರಾರಂಭಿಕ ಇಳುವರಿ ಮೊತ್ತ ರೂ.54000/-ಕ್ಕೆ ಶೇ.2ರ ರೈತರ ಭಾಗದ ವಿಮಾ ಕಂತು ರೂ.1080/

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ Read More »

ಕರಾವಳಿ

ನಾಳೆಯಿಂದ ಲೋಕಾಯುಕ್ತರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್.20. ಲೋಕಾಯುಕ್ತ ನ್ಯಾಯಾಧೀಶರಾದ ನ್ಯಾ. ಪಿ. ವಿಶ್ವನಾಥ ಶೆಟ್ಟಿ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 21 ರಂದು ರಾತ್ರಿ 9 ಗಂಟೆಗೆ ಮಂಗಳೂರು ಸಕ್ರ್ಯೂಟ್ ಹೌಸ್ ಗೆ ಆಗಮಿಸಿ, ವಾಸ್ತವ್ಯ, ಜೂನ್ 22 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ, ಅಂಗನವಾಡಿ ಕೇಂದ್ರ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 6.30 ಕ್ಕೆ ಮಂಗಳೂರಿನಿಂದ

ನಾಳೆಯಿಂದ ಲೋಕಾಯುಕ್ತರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ

ನಾಳೆ ವಿ.ವಿ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್20. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2018-19ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜೂನ್ 21 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ, ಮಂಗಳಗಂಗೋತ್ರಿಯ ಆಡಳಿತ ಸೌಧದ ಹೊಸ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ.

ನಾಳೆ ವಿ.ವಿ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ – ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಜೂನ್ 21 ರಿಂದ 28 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷಾ ಕೇಂದ್ರಗಳ 200ಮೀ. ಸುತ್ತಳತೆಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ – ನಿಷೇಧಾಜ್ಞೆ Read More »

ಕರಾವಳಿ

ಮಂಗಳೂರು: ಸ್ವಚ್ಛ ಸಂಭ್ರಮ-ರೇಡಿಯೋ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್.20. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಬಯಲು ಬಹಿರ್ದೆಸೆ ಮುಕ್ತಗೊಂಡ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ “ನೈರ್ಮಲ್ಯ ಮತ್ತು ಶುಚಿತ್ವದಡಿ” ನಿರಂತರತೆಯನ್ನು ಕಾಯ್ದುಕೊಳ್ಳಲು “ನಮ್ಮ ತ್ಯಾಜ್ಯ ನಮ್ಮ ಹೊಣೆ” ಪರಿಕಲ್ಪನೆಯಲ್ಲಿ ಜನಸಾಮಾನ್ಯರಲ್ಲಿ ಜನ ಜಾಗೃತಿ ಮೂಡಿಸಲು 2017-18 ನೇ ಸಾಲನ್ನು ಸ್ವಚ್ಛತಾ ವರ್ಷಾಚರಣೆಯನ್ನಾಗಿ ಆಚರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆ/ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ/ಮಾಹಿತಿ ನೀಡಲು “ಸ್ವಚ್ಛ ಸಂಭ್ರಮ” ರೇಡಿಯೋ ಕಾರ್ಯಕ್ರಮವನ್ನು 2018 ರ ಜನವರಿ

ಮಂಗಳೂರು: ಸ್ವಚ್ಛ ಸಂಭ್ರಮ-ರೇಡಿಯೋ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಿದೆ.ಪ್ರಥಮ ಚಾವಡಿ ಸನ್ಮಾನ ಜೂನ್ 23 ರಂದು ನಡೆಯಲಿದ್ದು ತುಳು ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದ ಮೇರು ಕಲಾವಿದ ಶ್ರೀ ಲಕ್ಷ್ಮಣ ಕುಮಾರ್ ಮಲ್ಲೂರುರವರನ್ನು ಸನ್ಮಾನಿಸಲಾಗುವುದು. ಕಳೆದ 4 ದಶಕಗಳಿಂದ ತುಳುರಂಗಭೂಮಿಯಲ್ಲಿ ನಟರಾಗಿ, ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ

ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ Read More »

ಕರಾವಳಿ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. 2018-19 ನೇ ಸಾಲಿನ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಸಹಾಯಧನ ಮಂಜೂರಾತಿಗಾಗಿ 50 ಕ್ಕೂ ಹೆಚ್ಚು ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಗೋಶಾಲೆಯವರು ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಮಂಗಳೂರು ಕಛೇರಿಯಲ್ಲಿ ಅರ್ಜಿ ಫಾರಂಗಳನ್ನು ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 20 ರೊಳಗೆ ಪ್ರಸ್ತಾವನೆಯನ್ನು ಖುದ್ದಾಗಿ ಸಲ್ಲಿಸಬೇಕು.   ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21 ರಂದು ಮಂಗಳಾ ಒಳಾಂಗಣ ಕ್ರೀಡಾಂಗಣ, ಲೇಡಿಹಿಲ್, ಮಂಗಳೂರು ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. ಅಂದು ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಉದ್ಘಾಟಿಸುವರು. ಮುಖ್ಯ ಕಾರ್ಯಕ್ರಮದಲ್ಲಿ ಸುಮಾರು 1000 ಜನರು ಭಾಗವಹಿಸುವ ನಿರೀಕ್ಷೆಯಿದ್ದು , ಈಗಾಗಲೇ ವಿವಿಧ ಸಂಸ್ಥೆಗಳು ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜುಗಳ

ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ
Scroll to Top