News Kadaba Desk

ಪಿಲಿಕುಳ ಆಯುಕ್ತ ಶ್ರೀಕಾಂತ್ ರಾವ್ ನಿವೃತ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಅವರು ಜುಲೈ 31 ರಂದು ಸರ್ಕಾರಿ ಸೇವೆಯಿಂದ ನಿವೃತ್ತರಾದರು. ತಮ್ಮ ಸೇವಾ ಅವಧಿಯಲ್ಲಿ ನೀಡಿದ ಸಹಕಾರಕ್ಕಾಗಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿ ಎಂದು ಶುಭ ಹಾರೈಸಿದರು. ಬಳಿಕ ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳು ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಬೀಳ್ಕೊಟ್ಟರು.

ಪಿಲಿಕುಳ ಆಯುಕ್ತ ಶ್ರೀಕಾಂತ್ ರಾವ್ ನಿವೃತ್ತಿ Read More »

ಕರಾವಳಿ

ರಸ್ತೆ ಬದಿ ಕಸ ಎಸೆತ: ರೂ.10 ಸಾವಿರ ದಂಡ ವಿಧಿಸಿದ ಗ್ರಾಮ ಪಂಚಾಯತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಂಗಳ ಗ್ರಾಮದ ಮುಡಿಪು ಮುಖ್ಯ ರಸ್ತೆಯಲ್ಲಿರುವ ಅಂಗಡಿಯು ಪ್ಲಾಸ್ಟಿಕ್ ಕಸವನ್ನು ರಸ್ತೆ ಬದಿ ಎಸೆದು ಬೆಂಕಿ ಹಾಕಿ ಸುಟ್ಟಿರುವ  ಪ್ರಕರಣಕ್ಕೆ ರೂ. 10 ಸಾವಿರ  ದಂಡ ವಿಧಿಸಲಾಗಿದೆ. ಪ್ಲಾಸ್ಟಿಕ್ ಕಸ ಮತ್ತು ಇತರ ಕಸವನ್ನು ಅಂಗಡಿಯ ಎದುರು ಸುಡುತ್ತಿದ್ದು, ಗ್ರಾಮ ಪಂಚಾಯತ್ ಅಂಗಡಿ ಮಾಲಕರಿಗೆ ರೂ. 10 ಸಾವಿರ ದಂಡ ವಿಧಿಸಿದೆ. ದಂಡ ಪಾವತಿ ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಅಭಿವೃದ್ಧಿ

ರಸ್ತೆ ಬದಿ ಕಸ ಎಸೆತ: ರೂ.10 ಸಾವಿರ ದಂಡ ವಿಧಿಸಿದ ಗ್ರಾಮ ಪಂಚಾಯತ್ Read More »

ಕರಾವಳಿ

ಧಾರಾಕಾರ ಮಳೆ ಹಿನ್ನೆಲೆ ನಾಳೆ (ಆ. 01) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 31. ಶುಕ್ರವಾರ ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ನಾಳೆ (ಆ.01) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಧಾರಾಕಾರ ಮಳೆ ಹಿನ್ನೆಲೆ ನಾಳೆ (ಆ. 01) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಜು. 31. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು ಮಧ್ಯಾಹ್ನದ ನಂತರ ಭಾರೀ ಗಾಳಿ ಮಳೆಯಾಗಿದ್ದು, ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಸುಬ್ರಹ್ಮಣ್ಯ, ಬಾಳುಗೋಡು, ಹರಿಹರ, ಬಲ್ಪ, ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಹೊಳೆಗಳು, ತೋಡುಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ. ಶುಕ್ರವಾರ ಮಧ್ಯಾಹ್ನದ ನಂತರ ಮಳೆಯು ಸುದೀರ್ಘ ಗಂಟೆಗಳ ಕಾಲ ಸುರಿದ ಕಾರಣ ತಗ್ಗು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹಠಾತ್ತನೆ ಏರಿಕೆಯಾಗಿದೆ. ಪ್ರಮುಖವಾಗಿ ಬಾಳುಗೋಡಿನಲ್ಲಿ ಈ

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕ್ವಿಟ್ ಇಂಡಿಯಾ ದಿನಾಚರಣೆ ಪ್ರಯುಕ್ತ ಆಗಸ್ಟ್ 9 ರಂದು ಧ್ವಜಾರೋಹಣ ಕಾರ್ಯಕ್ರಮ ನಗರದ ಟಾಗೋರ್ ಪಾರ್ಕ್‍ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಗಂಟೆಗೆ  ಕ್ವಿಟ್ ಇಂಡಿಯಾ ಸ್ಪರ್ಧೆಗಳು ನಡೆಯಲಿದೆ. 79 ನೇ ಸ್ವಾತಂತ್ರ್ಯ ದಿನಾಚರಣೆಯ  ಧ್ವಜಾರೋಹಣ ಕಾರ್ಯಕ್ರಮ  ಆಗಸ್ಟ್ 15 ರಂದು ಟಾಗೋರ್ ಪಾರ್ಕ್‍ ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:50 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮ

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ Read More »

ಕರಾವಳಿ

ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಮನೆ-ಮನೆ ಭೇಟಿ ಮೂಲಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದವರ ಜಾತಿ ಪ್ರಮಾಣ ಪತ್ರ ಹಂಚಿಕೆ ಮಾಡುವ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮಕ್ಕೆ ಸಂಬಂಧಿಸಿದಂತೆ ಒಕ್ಕೂಟದ ಸದಸ್ಯರು ಈ ಕಾರ್ಯದಲ್ಲಿ ಸಹಕರಿಸಬೇಕು ಎಂದು ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ತಿಳಿಸಿದರು. ಅವರು  ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ ಹಾಗೂ

ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ Read More »

ಕರ್ನಾಟಕ

ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯವಿರುವ ವೆಟರ್ನರಿ ಅಧಿಕಾರಿ (B.V.Sc. and experience in Wild Life) ಹುದ್ದೆಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಗೊಳಿಸಲು ವಾಕ್–ಇನ್ ಸಂದರ್ಶನವನ್ನು ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.    ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://pilikula.karnataka.gov.in ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ Read More »

ಕರಾವಳಿ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಗಸ್ಟ್ 1ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆ) ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.    ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ  ಆಗಸ್ಟ್ 20ರೊಳಗೆ ಅರ್ಜಿಯನ್ನುನಗರದ ಕೊಟ್ಟಾರ ಜಿಲ್ಲಾ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.31 :ಕಳೆದ ೧೧ ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೆಳ್ಳಿ ಗ್ರಾಮದ ನಿವಾಸಿ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (೩೪) ಎಂದು ಗುರುತಿಸಲಾಗಿದೆ. ೨೦೧೫ ರಲ್ಲಿ ಆಕಾಶಭವನದಲ್ಲಿ ನಡೆದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಅಶೋಕ್ ಕುಮಾರ್ ಕೊಟ್ಟಾರಿ ಹಾಗೂ ಮತ್ತೊಬ್ಬ ಆರೋಪಿ ಜಗ್ಗು ನಡುವೆ ಗಲಾಟೆ ನಡೆದಿತ್ತು.ಗಲಾಟೆಯ ವೈಷಮ್ಯದಿಂದ

೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಲೆಟ್ ಗನ್‌ಗಳ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

(ನ್ಯೂಸ್‌ ಕಡಬ) newskadaba.com,  ಜು.31 : ಅತ್ಯಂತ ತೀವ್ರ ಪರಿಸ್ಥಿತಿಗಳಲ್ಲಿ ಗುಂಡು ಹಾರಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಪೆಲೆಟ್‌ ಗನ್‌ಗಳನ್ನು ಮಾತ್ರ ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.ಪೋಲೀಸ್ ನಿಯಮಗಳನ್ನು ಪ್ರಶ್ನಿಸದೆ ಪೆಲೆಟ್‌ ಗನ್‌ಗಳ ಬಳಕೆಯನ್ನು ನೇರವಾಗಿ ತಡೆಯಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಜುಲೈ 20ರಂದು ದೆಹಲಿಯ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ಪೆಲೆಟ್‌ ಗನ್ ಬಳಸಿದ್ದನ್ನು ವಿರೋಧಿಸಿ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಮತ್ತು ಗಾಯಾಳುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ

ಪೆಲೆಟ್ ಗನ್‌ಗಳ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top