News Kadaba Desk

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಮೌಲಾನ ಆಜಾದ್ ಮಾದರಿ ಶಾಲೆಗೆ ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೇತನ ಮಾಸಿಕ ರೂ.14000 ನೀಡಲಾಗುತ್ತದೆ.   ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯ ಶಿಕ್ಷಕ (ದೂರವಾಣಿ ಸಂ: 7022125839) ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: 19 ಕೆಜಿ ವಾಣಿಜ್ಯ ಸಿಲಿಂಡರ್‌ಗೆ ₹9.50 ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಸೆ.01: ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ರೂ. 9.50 ಹೆಚ್ಚಿಸಲಾಗಿದೆ.ದರ ಏರಿಕೆಯಿಂದಾಗಿ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಬೇಕರಿ ಮಾಲೀಕರಿಗೆ ನಿರ್ವಹಣಾ ವೆಚ್ಚ ಹೆಚ್ಚಾಗುವ ಆತಂಕ ಎದುರಾಗಿದೆ. 14.2 ಕೆಜಿ ತೂಕದ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಕೆಜಿ ಹಾಗೂ 10 ಕೆಜಿ ಸಿಲಿಂಡರ್ ದರಗಳೂ ಸ್ಥಿರವಾಗಿವೆ.5 ಕೆಜಿ ನಾನ್-ಡೊಮೆಸ್ಟಿಕ್ (ವಾಣಿಜ್ಯ) ಸಿಲಿಂಡರ್ ದರ ರೂ. 762 ರಿಂದ ರೂ.

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: 19 ಕೆಜಿ ವಾಣಿಜ್ಯ ಸಿಲಿಂಡರ್‌ಗೆ ₹9.50 ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಿಸ್ ಮಾಡ್ದೆ ಓದಿ: ಸೆಪ್ಟೆಂಬರ್ 1ರಿಂದ ಇಂಟರ್ನ್ಯಾಷನಲ್ ಫ್ಲೈಟ್, ITR ಮತ್ತು LPG ನಿಯಮಗಳಲ್ಲಿ ಬಿಗ್ ಚೇಂಜ್!

(ನ್ಯೂಸ್‌ ಕಡಬ) newskadaba.com,  ಆ.31: ವ್ಯವಹಾರ ಅಥವಾ ವೃತ್ತಿಪರ ಆದಾಯ ಹೊಂದಿರುವವರು 2026-27ರ ಮೌಲ್ಯಮಾಪನ ವರ್ಷಕ್ಕೆ ತೆರಿಗೆ ರಿಟರ್ನ್ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.ಸೆಪ್ಟೆಂಬರ್ 1ರಿಂದ ಭಾರತದಿಂದ ಹೊರಡುವ ಅಂತಾರಾಷ್ಟ್ರೀಯ ಪ್ರಯಾಣಿಕರು ವಲಸೆ ಕೌಂಟರ್‌ಗಳಲ್ಲಿ ಬೋರ್ಡಿಂಗ್ ಪಾಸ್‌ಗೆ ಸ್ಟಾಂಪ್ ಹಾಕಿಸುವುದು ಅಗತ್ಯವಿಲ್ಲ. ಮೊಬೈಲ್‌ನಲ್ಲಿರುವ ಎಲೆಕ್ಟ್ರಾನಿಕ್ ಬೋರ್ಡಿಂಗ್ ಪಾಸ್ ತೋರಿಸಬಹುದು. ಎಲ್​​ಪಿಜಿ ಗ್ರಾಹಕರು ಆಗಸ್ಟ್ 31ರೊಳಗೆ ಇ-ಕೆವೈಸಿ ಪೂರ್ಣಗೊಳಿಸಬೇಕು. ಸಬ್ಸಿಡಿ ಮತ್ತು ನಿರಂತರ ಸೇವೆ ಪಡೆಯಲು ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ.₹3 ಕೋಟಿ ಅಥವಾ ಅದಕ್ಕಿಂತ

ಮಿಸ್ ಮಾಡ್ದೆ ಓದಿ: ಸೆಪ್ಟೆಂಬರ್ 1ರಿಂದ ಇಂಟರ್ನ್ಯಾಷನಲ್ ಫ್ಲೈಟ್, ITR ಮತ್ತು LPG ನಿಯಮಗಳಲ್ಲಿ ಬಿಗ್ ಚೇಂಜ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಯೋಜನೆ: ಆಗಸ್ಟ್ ತಿಂಗಳು ರಾಜ್ಯ ಸರ್ಕಾರದ ಉಚಿತ ಅಕ್ಕಿ ಇಲ್ಲ

(ನ್ಯೂಸ್‌ ಕಡಬ) newskadaba.com,  ಆ.31: ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಹೆಚ್ಚುವರಿ ಅಕ್ಕಿ ವಿತರಣೆಗೆ ಹಿನ್ನಡೆಯಾಗಿದೆ. ಈ ತಿಂಗಳು ರಾಜ್ಯ ಸರ್ಕಾರದ ಪಾಲಿನ ಉಚಿತ ಅಕ್ಕಿ ಸಿಗುತ್ತಿಲ್ಲ. ಪ್ರಸ್ತುತ ಕೇಂದ್ರ ಸರ್ಕಾರದ ಪಾಲಿನ 4 ಕೆಜಿ ಅಕ್ಕಿ ಮತ್ತು 6 ಕೆಜಿ ರಾಗಿಯನ್ನು ಮಾತ್ರ ಪಡಿತರದಾರರಿಗೆ ವಿತರಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಪೂರ್ಣ 10 ಕೆಜಿ ಉಚಿತ ಅಕ್ಕಿ ವಿತರಣೆ ನಿಯಮಿತವಾಗಿ ಮರುಆರಂಭಗೊಳ್ಳಲಿದೆ ಎಂದು ರೇಷನ್ ಅಂಗಡಿ ಮಾಲೀಕರು ತಿಳಿಸಿದ್ದಾರೆ.   ಆಹಾರ

ಅನ್ನಭಾಗ್ಯ ಯೋಜನೆ: ಆಗಸ್ಟ್ ತಿಂಗಳು ರಾಜ್ಯ ಸರ್ಕಾರದ ಉಚಿತ ಅಕ್ಕಿ ಇಲ್ಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಕರೂಪದ IST ಜಾರಿ: 180 ದಿನಗಳಲ್ಲಿ ದೇಶಾದ್ಯಂತ ಒಂದೇ ‘ಭಾರತೀಯ ಪ್ರಮಾಣಿತ ಸಮಯ’ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಆ.31: ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು ‘ಕಾನೂನು ಮಾಪನಶಾಸ್ತ್ರ (ಭಾರತೀಯ ಪ್ರಮಾಣಿತ ಸಮಯ) ನಿಯಮಗಳು-2026’ ಅಧಿಸೂಚನೆ ಹೊರಡಿಸಿದ್ದು, 180 ದಿನಗಳ ಒಳಗೆ ದೇಶಾದ್ಯಂತ ಏಕರೂಪದ ‘ಭಾರತೀಯ ಪ್ರಮಾಣಿತ ಸಮಯ ಅನುಷ್ಠಾನಗೊಳ್ಳಲಿದೆ. ವಿದೇಶಿ ಸಮಯ ಮೂಲಗಳ ಮೇಲಿನ ಅವಲಂಬನೆ ತಗ್ಗಿಸಿ, ಭಾರತದ ಸ್ವದೇಶಿ ಉಪಗ್ರಹ ಸಂಚರಣೆ ವ್ಯವಸ್ಥೆಯಾದ NavIC ಹಾಗೂ ಅನುಮೋದಿತ ಸಮಯ ಮೂಲಗಳನ್ನು ಬಳಸಿಕೊಂಡು ನಿಖರ ಸಮಯ ಪ್ರಸಾರ ಮಾಡಲಾಗುತ್ತದೆಬ್ಯಾಂಕಿಂಗ್, ಡಿಜಿಟಲ್ ಪಾವತಿ, ದೂರಸಂಪರ್ಕ, ರೈಲ್ವೆ, ವಿಮಾನಯಾನ, ವಿದ್ಯುತ್ ಶಕ್ತಿ ವ್ಯವಸ್ಥೆ ಮತ್ತು

ಏಕರೂಪದ IST ಜಾರಿ: 180 ದಿನಗಳಲ್ಲಿ ದೇಶಾದ್ಯಂತ ಒಂದೇ ‘ಭಾರತೀಯ ಪ್ರಮಾಣಿತ ಸಮಯ’ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ರೋಬೋಟಿಕ್ ಕಲಿಕೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಆ. 31. ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್(CBE) ಹಾಗೂ STEM ರೋಬೋಟಿಕ್ಸ್ ಇದರ ನೇತೃತ್ವದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ, ಕಡಬದಲ್ಲಿ ಕಂಪ್ಯೂಟರ್ ವಿಭಾಗಕ್ಕೆ ಸಂಬಂಧಿಸಿದಂತೆ ರೋಬೋಟಿಕ್ ಎಂಬ ಹೊಸ ಕಲಿಕಾ ಮಾದರಿಯನ್ನು ಸೇರಿಸಲಾಗಿದೆ. ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಅದರ ವ್ಯಾಪ್ತಿಯನ್ನು ಪರಿಗಣಿಸಿ ಸಲುವಾಗಿ ಹೊಸ ಕಲಿಕಾ ಮಾದರಿಯನ್ನು ರೋಬೋಟಿಕ್ ಮುಖಾಂತರ ನೀಡಲಾಗಿದೆ. ನವಯುಗದ ತಂತ್ರಜ್ಞಾನವನ್ನು ಮಕ್ಕಳಿಗೆ ಕಲಿಸುವ ಸಲುವಾಗಿ ರೋಬೋಟಿಕ್ಸ್ ಹಾಗೂ ಎಐ ಎಂಬ ನವೀನ ಮಾದರಿಯು

ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ರೋಬೋಟಿಕ್ ಕಲಿಕೆ ಉದ್ಘಾಟನೆ Read More »

ಕರಾವಳಿ

ಚೆಸ್ ಪಂದ್ಯಾಟ ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಆ. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ  17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಾತ್ವಿಕ್ ರೈ ಹಾಗೂ 17 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ರೈ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ವಂದನೀಯ  ಫಾ. ಪೌಲ್ ಪ್ರಕಾಶ್ ಡಿಸೋಜ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ.ಸುನಿಲ್ ಪ್ರವೀಣ್ ಪಿಂಟೋ ಅವರು ಅಭಿನಂದನೆಗಳನ್ನು

ಚೆಸ್ ಪಂದ್ಯಾಟ ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್ 1,919 ಶಾಲೆಗಳಲ್ಲಿ 6 ತಿಂಗಳ ‘ಸ್ಪೋಕನ್ ಇಂಗ್ಲಿಷ್’ ತರಬೇತಿಗೆ ಸರ್ಕಾರ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ಆ.31: ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಆಂಗ್ಲ ಭಾಷೆಯಲ್ಲಿ ಮಾತನಾಡುವ ಆತ್ಮವಿಶ್ವಾಸ ಬೆಳೆಸಲು ರಾಜ್ಯ ಸರ್ಕಾರ ಮುಂದಾಗಿದೆ. 1,919 ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 6 ತಿಂಗಳ ಕಾಲ ಸ್ಪೋಕನ್ ಇಂಗ್ಲಿಷ್ ತರಬೇತಿ ಆರಂಭವಾಗಲಿದೆ. 2026ರ ಸೆಪ್ಟೆಂಬರ್‌ನಿಂದ 2027ರ ಫೆಬ್ರವರಿವರೆಗೆ ಹಾಗೂ 1–3ನೇ, 4–7ನೇ ಮತ್ತು 8–10ನೇ ತರಗತಿ ಎಂದು ವಿದ್ಯಾರ್ಥಿಗಳನ್ನು 3 ಗುಂಪುಗಳಾಗಿ ವಿಂಗಡಿಸಿ ತರಬೇತಿ ನೀಡಲಾಗುತ್ತದೆ. ಪ್ರತಿ ತಂಡಕ್ಕೆ ವಾರಕ್ಕೆ 4 ಅವಧಿಗಳು ಇರಲಿವೆ.ಎಸ್‌ಡಿಎಂಸಿ ಮೂಲಕ ಇಂಗ್ಲಿಷ್ ಪದವಿ/ಸ್ನಾತಕೋತ್ತರ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್ 1,919 ಶಾಲೆಗಳಲ್ಲಿ 6 ತಿಂಗಳ ‘ಸ್ಪೋಕನ್ ಇಂಗ್ಲಿಷ್’ ತರಬೇತಿಗೆ ಸರ್ಕಾರ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ!

(ನ್ಯೂಸ್‌ ಕಡಬ) newskadaba.com,  ಆ.31: ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸಲು, ಅಪಘಾತ ನಿಯಂತ್ರಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ನಿರ್ದಿಷ್ಟ ವಾಹನಗಳ ಸಂಚಾರವನ್ನು ನಿಷೇಧಿಸಿ ಸಂಚಾರ ಪೊಲೀಸ್ ಇಲಾಖೆ ಆದೇಶಿಸಿದೆ.ಈ ಹೊಸ ನಿಯಮವು ಸೆಪ್ಟೆಂಬರ್ 4 ರಿಂದ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸೆಪ್ಟೆಂಬರ್ 11 ರಿಂದ ಅನ್ವಯವಾಗಲಿದೆ. ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿಷೇಧ ಹೇರಲಾಗಿದೆ. ಜೊತೆಗೆ ಬೆಳಗ್ಗೆ 7:00 ರಿಂದ 11:00 ಮತ್ತು ಸಂಜೆ

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಆ.31: ಶೈಕ್ಷಣಿಕ ವರ್ಷ ಆರಂಭವಾಗಿ 3 ತಿಂಗಳು ಕಳೆದರೂ ಕರ್ನಾಟಕದ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡದಿರುವುದಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಕ್ಕರೆ ಬೆಲೆ ಏರಿಕೆಯ ನೆಪ ಹೇಳಿ ಹಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆಯನ್ನು ನಿಲ್ಲಿಸಲಾಗಿದ್ದು, ಹಣಕಾಸಿನ ಕಾರಣ ನೀಡಿ ಮಕ್ಕಳ ಪೌಷ್ಟಿಕ ಆಹಾರಕ್ಕೆ ಕಡಿವಾಣ ಹಾಕುವುದು ಸರಿಯಲ್ಲ ಎಂದು AIDSO ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಶ್ನಿಸಿದ್ದಾರೆ. ಪ್ರತಿವರ್ಷ ದೇಶದಲ್ಲಿ

ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top