ಕ್ರೈಮ್ ನ್ಯೂಸ್

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರದಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಮಾಡಿರುವ ಘಟನೆ ಲಾಲ್ ಭಾಗ್ ಜಂಕ್ಷನ್ ಬಳಿ ನಡೆದಿದೆ.   ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು​ ಊಟ ಸೇವಿಸುತ್ತಿದ್ದ ವೇಳೆ ಇಲಿ ಪಾಷಾಣ ಸಿಂಪಡಣೆಯಾದ ಪರಿಣಾಮ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ರವಿವಾರದಂದು ರಾತ್ರಿ ವಿದ್ಯಾರ್ಥಿಗಳು ಊಟ ಮಾಡಲೆಂದು ಹಾಸ್ಟೆಲ್ ಹಾಲ್​ಗೆ ಬಂದಿದ್ದರು. ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಣೆ ಮಾಡುತ್ತಿದ್ದರು ಎನ್ನಲಾಗಿದೆ. ಇಲಿ ಪಾಷಾಣದ ವಾಸನೆಯಿಂದಾಗಿ 20ಕ್ಕೂ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

(ನ್ಯೂಸ್ ಕಡಬ) newskadaba.c0m ಭುವನೇಶ್ವರ, ಆ. 19.  ಒಡಿಶಾದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…!

(ನ್ಯೂಸ್ ಕಡಬ) newskadaba.com ಕೋಲಾರ, ಆ. 19. ಶಿಕ್ಷಕಿಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ಮೂಲದ ಆರು ಮಂದಿ ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಆಗಸ್ಟ್ 14 ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ ಎಂಬವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು. ಅದರಂತೆ ಇಂದು ತಿರುಪತಿಯಲ್ಲಿ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೋರ್ವನನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯ ವಿರುದ್ದ ಕೆಂಗೇರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.   ಖಾಸಗಿ ಕಾಲೇಜೊಂದರಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬಾತ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಇವೆಂಟ್ ವಿಚಾರವಾಗಿ ಮೂರು ಲಕ್ಷ ಸಾಲ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಿನಲ್ಲಿ ವಿದ್ಯಾರ್ಥಿಯ ಕಿಡ್ನಾಪ್, ಹಲ್ಲೆ; 9 ಮಂದಿಯ ವಿರುದ್ದ FIR Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 19. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ ಎಂಬಾತನನ್ನು ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ವರದಿಯಾಗಿದೆ.   ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ ಆಗಿದ್ದು, ಈತನ ವಿರುದ್ದ ಕೊಣಾಜೆ, ಉಳ್ಳಾಲ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್ ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 19. ರಶ್ಯಾದ ಮಿಲಿಟರಿ ಶಿಬಿರವೊಂದರ ಮೇಲೆ ನಡೆದ ಶೆಲ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.   ಮೃತ ವ್ಯಕ್ತಿಯನ್ನು ತ್ರಿಶೂರು ಜಿಲ್ಲೆಯ ತ್ರಿಕ್ಕುರ್‌ ಪಂಚಾಯತ್‌ನ ನಾಯರಗಡಿ ನಿವಾಸಿಯಾಗಿದ್ದ ಸಂದೀಪ್‌ (36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿದ್ದ ಸಂದೀಪ್ ಅವರು, ಕೆಲಸ ಮಾಡುತ್ತಿದ್ದ ರಶ್ಯಾದ ರೆಸ್ಟೋರೆಂಟ್‌ ಮೇಲೆ ನಡೆದ ಶೆಲ್ ದಾಳಿಯಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top