ಕ್ರೈಮ್ ನ್ಯೂಸ್

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 16.  ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಮುಳ್ಳೇರಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಎಂದು ಗುರುತಿಸಲಾಗಿದೆ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                 Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ಲಾಲ್‌ಬಾಗ್ ನ ಸಿದ್ದಯ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಊರ್ವಶಿ ಚಿತ್ರಮಂದಿರದ ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ ಹಿಡಿದಿದ್ದ ಹದಿನಾಲ್ಕು ವರ್ಷದ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ವಿಜಯ್ ಅಭಿನಯದ ಭೀಮ ಚಿತ್ರ ಪ್ರದರ್ಶನದ ವೇಳೆ ರಾತ್ರಿ 11.30ರ ಸುಮಾರಿಗೆ  ಘಟನೆ ನಡೆದಿದೆ. ಮಧ್ಯಂತರ ವಿರಾಮದ ವೇಳೆ ಶೌಚಗೃಹ ಬಳಸಲು ಬಂದ 23 ವರ್ಷದ ಯುವತಿ ವಾಶ್‌ರೂಮ್ ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ನೋಡಿದ್ದಾರೆ. ಕೂಡಲೇ ಪೊಲೀಸರಿಗೆ

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಹಾಸನ, ಆ. 16.  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.  

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,  ಆ. 16. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಎಮದು ಗುರುತಿಸಲಾಗಿದೆ.  ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.  ಇಂದು (ಶುಕ್ರವಾರ) ಬೆಳಗ್ಗೆ ಶಾಲೆಗೆ ತೆರಳಿದ್ದಅವರಿಗೆ ಅನಾರೋಗ್ಯ ಕಾಡಿದ್ದ ಹಿನ್ನೆಲೆ, ಅಲ್ಲಿಂದ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ  ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 16.  ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಮೃತಪಟ್ಟಿದ್ದಾರೆ. ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದರು. ಅಗರ್ವಾಲ್ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.  

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ತನ್ನ ತಾಯಿ ನೀಡಿದ ದೂರು ಸ್ವೀಕರಿಸಲು ಉಡಾಫೆ ವರ್ತನೆ ತೋರಿದ ಪೊಲೀಸರ ಮೇಲೆ ಸಿಟ್ಟಿಗೆದ್ದ ಯುವಕನೊಬ್ಬ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಸುತ್ತಮುತ್ತಲಿನ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿದ್ದು,

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!  

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 15.  ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಸಾವಿರಾರು ಮಂದಿ ವಿಶೇಷವಾಗಿ ಮಹಿಳೆಯರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನ ಮಧ್ಯರಾತ್ರಿ ಬೀದಿಗಿಳಿದು ರಿಕ್ಲೇಮ್ ಚಳವಳಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿದರು. ಕಾರಣ ಮಹಿಳೆಯರಿಗೆ ರಕ್ಷಣೆ ಭದ್ರತೆ ಸಿಗಬೇಕು. ರಾತ್ರಿ ಹೊತ್ತಿನಲ್ಲಿ ಮಹಿಳೆ ನಿರ್ಭೀತಿಯಿಂದ ಓಡಾಡಲು ಸಾಧ್ಯವಾದರೆ ಸ್ವಾತಂತ್ರ್ಯ ಸಿಕ್ಕಿದೆ ಎಂದರ್ಥ. ಮಹಿಳೆಯ

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!   Read More »

ಕ್ರೈಮ್ ನ್ಯೂಸ್

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಕುಕ್ಕರ್ ಸ್ಫೋಟಗೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಸಂಭವಿಸಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡುಗೆ ಮಾಡಲು ಗ್ಯಾಸ್ ಸ್ಟೌವ್‌​ ಮೇಲೆ ಕುಕ್ಕರ್​ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೋಸಿನ್ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿ​ ಸಮೀರ್​ಗೆ ಚಿಕಿತ್ಸೆ ಮುಂದುವರೆಯುತ್ತಿದೆ ಎನ್ನಲಾಗಿದೆ.

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಮ್ ಕಾರ್ಡ್ ವಂಚನೆ ಪ್ರಕರಣ: ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಸಿಮ್‌ ಕಾರ್ಡ್‌ಗಳನ್ನು ಸೈಬರ್ ವಂಚಕರಿಗೆ ನೀಡುವ ಸಲುವಾಗಿ ಅವುಗಳನ್ನು ಖರೀದಿಸುತ್ತಿದ್ದ ಇಬ್ಬರನ್ನು ಮಂಗಳೂರಿನ ಸೆನ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಮೂಲತಃ ಬೆಳ್ತಂಗಡಿಯ ಪ್ರಸಕ್ತ ನಗರದ ಮರೋಳಿ ಸಮೀಪದ ಬಜ್ಜೋಡಿಯಲ್ಲಿ ವಾಸವಾಗಿದ್ದ ಸಮದ್ ಮತ್ತು ಅಜೀಂ ಎಂದು ಗುರುತಿಸಲಾಗಿದೆ. ಏರ್‌ಟೆಲ್ ಕಂಪೆನಿಯ 86 ಸಿಮ್ ಕಾರ್ಡ್‌ಗಳು, 2 ಮೊಬೈಲ್ ಪೋನ್ ಮತ್ತು ಕಾರನ್ನು ಇವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಮ್ ಕಾರ್ಡ್ ವಂಚನೆ ಪ್ರಕರಣ: ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 14. ಕಾವೂರು ಠಾಣಾ ವ್ಯಾಪ್ತಿ ಹಾಗು ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಐವರನ್ನು ಬಂಧಿಸಿದ ಕುರಿತು ವರದಿಯಾಗಿದೆ.     ಬಂಧಿತರನ್ನು ಅಮಿರುದ್ದೀನ್ (26), ಜಿಯಾದ್ (25), ಮನ್ಸೂರ್ (25), ಕಾವೂರು ಠಾಣಾ ವ್ಯಾಪ್ತಿಯ ಕೊಂಚಾಡಿಯಲ್ಲಿ ಮೂಡುಶೆಡ್ಡೆಯ ದಿವಿತ್ ಡಿ. ಶೆಟ್ಟಿ (18) ಮತ್ತು ಪಾಂಡೇಶ್ವರ ಠಾಣಾ ವ್ಯಾಪ್ತಿಯ ಪಾಂಡೇಶ್ವರ ಕಟ್ಟೆ ಬಳಿ ಮೂಲತಃ ಚಾಮರಾಜನಗರದ ಪ್ರಸಕ್ತ ಪಾಂಡೇಶ್ವರದಲ್ಲಿ

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top