ಕ್ರೈಮ್ ನ್ಯೂಸ್

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ

(ನ್ಯೂಸ್‌ ಕಡಬ) newskadaba.com,ಫೆ.27 : ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಲ್ಲಿ ನಡೆದಿದೆ.ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‌ ಆಗಿದ್ದ ಪವನ್ ಕುಮಾರ್ (25) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಣಿಸಂದ್ರದ ಅಮರಜ್ಯೋತಿ ಲೇಔಟ್ ನಿವಾಸಿಯಾಗಿದ್ದ ಪವನ್, ತನ್ನ ಬೇಕರಿ ಮುಚ್ಚಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ. ಈ […]

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಾತಿ ನಿಂದನೆ ಪ್ರಕರಣ- ಆರೋಪಿಗೆ 1 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskdaba.com ಫೆ.27. ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ 2021ರಲ್ಲಿ ಆರೋಪಿ ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್ ಎಂಬಾತನ ವಿರುದ್ಧ (ಅ.ಕ್ರ 15/2021) ಐಪಿಎಸಿ ಕಲಂ 452, 354(A), 506 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ವ್ಯಾಲೆಂಟೈನ್ ಡಿ’ಸೋಜಾ ಅವರು ತನಿಖೆ ನಡೆಸಿ,

ಜಾತಿ ನಿಂದನೆ ಪ್ರಕರಣ- ಆರೋಪಿಗೆ 1 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಆರೋಪಿಗೆ ಹಲ್ಲೆ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskdaba.com ಕಡಬ, ಫೆ. 27. ಸುಬ್ರಹ್ಮಣ್ಯ ವಲಯ ಅರಣ್ಯದ ಐತ್ತೂರು ಎಂಬಲ್ಲಿ ನಡೆದ ಕಾಡುಕೋಣ ಬೇಟೆಗೆ ಸಂಬಂಧಿಸಿದಂತೆ ಜಾಮೀನಿನಲ್ಲಿದ್ದ ಆರೋಪಿಯ ಹೇಳಿಕೆ ಪಡೆಯಲೆಂದು ವಲಯ ಅರಣ್ಯಾಧಿಕಾರಿ ಕಛೇರಿಗೆ ಕರೆಸಿ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಯುವಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಕಡಬ ತಾಲೂಕು ಐತ್ತೂರು ಗ್ರಾಮದ ಕೊಂಡೆ ಮನೆ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಜೀವನ್ (27) ಮತ್ತು 102 ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ನಿವಾಸಿ ಜೈನ್

ಕಡಬ: ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಆರೋಪಿಗೆ ಹಲ್ಲೆ ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು

(ನ್ಯೂಸ್‌ ಕಡಬ) newskadaba.com,ಫೆ.24: 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ಯುವತಿ ಎಂದು ಗುರುತಿಸಲಾಗಿದೆ..ನಾಪತ್ತೆಯಾದ ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಟಪಾಡಿಯ ಆನೆಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಹೋಗಿದ್ದರು. ಆದರೆ, ಅಂದಿನಿಂದ ಅವರು ಮನೆಗೆ ಮರಳಿಲ್ಲ. ಈ ಸಂಬಂಧ ನಾಪತ್ತೆ ದೂರು ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಜಾಲ

ಉಡುಪಿ: : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಫೆ.21: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಫೆಬ್ರವರಿ 20 ರಂದು ಸಂಜೆ ಈ ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಮುಂಡಗೋಡು ಪೊಲೀಸ್‌ ತಂಡವು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಎರಡು ದಿನಗಳ ಹಿಂದೆ ಅತ್ಯಾಚಾರ ಮಾಡಿದ ನಂತರ ಹತ್ಯೆ ಮಾಡಲಾಗಿದೆ ಮತ್ತು ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ

(ನ್ಯೂಸ್‌ ಕಡಬ) newskadaba.com,  ಫೆ.14: ಮಧ್ಯಪ್ರದೇಶದ ಭೋಪಾಲ್‌ನ ನಿಶಾತ್‌ಪುರ ಪ್ರದೇಶದ ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಗುರುವಾರ (ಫೆ.12) ಸಂಜೆ 33 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾಗಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಕೊನೆಗೊಂಡ ಪ್ರೀತಿ, ದ್ರೋಹ, ಬ್ಲ್ಯಾಕ್‌ಮೇಲ್ ಮತ್ತು ಕೊಲೆಯಲ್ಲಿ ಅಂತ್ಯವಾದ ಪ್ರಕರಣವನ್ನು ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ ಕೊಲೆಯಾದ ದುರ್ದೈವಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ (ಫೆ.9) ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಫೆ.05 ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಅವರು ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡರಚಿಸಿದೆ. ಆದರೆ, ಈ ಪ್ರಕರಣದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಪಾತ್ರದ ಕುರಿತು ತನಿಖೆಯ ವ್ಯಾಪ್ತಿ ಕುರಿತು ಚರ್ಚೆಗಳು ಶುರುವಾಗಿವೆ. ಸಿಜೆ ರಾಯ್ ಕುಟುಂಬವು, “ಐಟಿ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ” ಎಂದು ಗಂಭೀರ ಆರೋಪ ಮಾಡಿದ್ದು, ತೆರಿಗೆ ತಪ್ಪಿಸುವಿಕೆ ಸಂಬಂಧಿತ ಎಲ್ಲಾ ಕಡತಗಳು ಮತ್ತು ದಾಖಲೆಗಳು ಕೇಂದ್ರ ಸರ್ಕಾರದ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

(ನ್ಯೂಸ್‌ ಕಡಬ) newskadaba.com,ಫೆ.03:  ಬೆಳಗಾವಿ: ಅನೈತಿಕ ಸಂಬಂಧ ವಿಚಾರವಾಗಿ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ತನ್ನ ತಾಯಿಯ ಜೊತೆಗೇ ಅನೈತಿಕ ಸಂಬಂಧ ಹೊಂದಿದ್ದವನನ್ನು ಮಗ ಕೊಚ್ಚಿ ಕೊಂದಿದ್ದಾನೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮವೇ ಬೆಚ್ಚಿ ಬಿದ್ದಿದೆ. 10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ

(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು

(ನ್ಯೂಸ್‌ ಕಡಬ) newskadaba.com,  ಜ.15 ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ–ಬರಮೇಲು ಪ್ರದೇಶದಲ್ಲಿ ನಡೆದಿದೆ.ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ. ಸುಮಂತ್ ಸೇರಿದಂತೆ ಮೂವರು ಬಾಲಕರು

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top