ಕ್ರೈಮ್ ನ್ಯೂಸ್

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳಾದ ಮಂಜುನಾಥ ಮರಬದ ಹಾಗೂ ಕಸ್ತೂರಿ ಕುಕನೂರು ರವರ ಮಾರ್ಗದರ್ಶನದಂತೆ ಠಾಣೆಯ ಸಿಬ್ಬಂದಿಗಳಾದ ಗುರುರಾಜ್ ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿಯವರು ಆರೋಪಿಯನ್ನು ಬಂಧಿಸಿದ್ದಾರೆ. ಕಾಫಿ ಒಂದರಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಸ್ಕೂಟರ್ ಸವಾರರು ಗಂಭೀರ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ನಿಂತಿದ್ದ ಬಸ್‌ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹಳೆ ತಾಲೂಕು ಕಛೇರಿ ಕಿನ್ನಿಮುಲ್ಕಿ ರಸ್ತೆಯಲ್ಲಿ ಘಟನೆ ನಡೆದಿದ್ದು ಸ್ಕೂಟರ್ ಸವಾರರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಬಸ್‌ ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಕೂಟರ್ ಸವಾರ ಮತ್ತು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಸ್ಕೂಟರ್ ಸವಾರರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿ ಮಾಡಿ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ               

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು. ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಸಂಜೆ 6 ಕ್ಕೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಾದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ,

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.05. ದೇವಸ್ಥಾನದ ಅರ್ಚಕರೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವ್ಯಕ್ತಿಯನ್ನು ಚೆನ್ನೈತ್ತೋಡಿ ಗ್ರಾಮದ ದೊಡ್ಡದಳಿಕೆ ನಿವಾಸಿ ಹರೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಕೇಶವ ಪೂಜಾರಿ ಅವರು ಹರೀಶ್ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಹರೀಶ್ ಮೇ 30 ರಂದು ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ವಾಪಸ್ ಬಂದಿಲ್ಲ ಎಂದು ತಿಳಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ          

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಆರೋಪಿಗೆ ಒಟ್ಟು 37 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಆರೋಪಿಯನ್ನು, ಕೋಟ ನಿವಾಸಿ ಸಚಿನ್ ಪೂಜಾರಿ (26)ಎಂದು ಗುರುತಿಸಲಾಗಿದೆ. 42 ಸಾಕ್ಷಿಗಳ ಪೈಕಿ 24 ಮಂದಿಯನ್ನು ವಿಚಾರಣೆಗೊಳಪಡಿಸಿ, 50 ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ವಶಪಡಿಸಿಕೊಂಡ ಆಭರಣ ಸೇರಿದಂತೆ ಸಂತ್ರಸ್ತೆಯ ಸಾಕ್ಷ್ಯ ಮತ್ತು ಇತರ

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ           Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು      

(ನ್ಯೂಸ್ ಕಡಬ) newskadaba.com ಸುಳ್ಯ, ಆ.05. ಬೈಕ್ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.ಮೃತಪಟ್ಟವರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು       Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದಲ್ಲಿ ಹಿಂಸಾಚಾರ    14 ಪೊಲೀಸರು ಸೇರಿದಂತೆ 100 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಢಾಕಾ, ಆ.05. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯು ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಮೃತಪಟ್ಟಿದ್ದಾರೆ. ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ ಈ ಘರ್ಷಣೆ ನಡೆದಿದೆ. ಇನ್ನು 100 ಮಂದಿ ಸಾವನ್ನಪ್ಪುವ ಜೊತೆಗೆ ನಾರಾರು ಮಂದಿ ಗಾಯಗೊಂಡಿದ್ದಾರೆ. ಭಾರತೀಯರು ಮನೆಯಿಂದ ಆಚೆ ಬಾರದಂತೆ ಹಾಗೂ ಬಾಂಗ್ಲಾದಲ್ಲಿರುವ ತನ್ನ ನಾಗರಿಕರಿಗೆ ಸಂಪರ್ಕದಲ್ಲಿ ಇರುವಂತೆ ಭಾರತೀಯ ರಾಯಭಾರಿ

ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದಲ್ಲಿ ಹಿಂಸಾಚಾರ    14 ಪೊಲೀಸರು ಸೇರಿದಂತೆ 100 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ             

(ನ್ಯೂಸ್ ಕಡಬ) newskadaba.com ಹರಿಯಾಣ, ಆ.03.  ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ವರದಿಗಳ ಪ್ರಕಾರ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್ ಬಳಸಿತ್ತಿದ್ದ ಮೊಬೈಲ್ ಡೇಟಾ ಖಾಲಿಯಾದಾಗ ಆತನ ಪತ್ನಿ ರೇಖಾ ಬಳಿ ಮೊಬೈಲ್‌ನ ವೈ-ಫೈ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ಹೇಳಿದ್ದಾನೆ. ಆದರೆ ಅಜಯ್ ಅವರ ಪತ್ನಿ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿ ತನ್ನ ಮೊಬೈಲ್‌ನಲ್ಲಿ ಕಡಿಮೆ ಡೇಟಾ ಉಳಿದಿದೆ ಎಂದು ಹೇಳಿದ್ದಾಳೆ.

ಮೊಬೈಲ್ ಹಾಟ್‌ಸ್ಪಾಟ್ ಆನ್ ಮಾಡಲು ನಿರಾಕರಿಸಿದ ಪತ್ನಿ                 ಕೊಲೆ ಮಾಡಿದ ಪತಿ              Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡಲ ತೀರದಲ್ಲಿ ಗೋಣಿ ಚೀಲದಲ್ಲಿ ದನದ ಅವಶೇಷ ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು       Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top