ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.03. ಮನೆಗೆ ನುಗ್ಗಿ ಕಳವುಗೈದ ಮರುದಿನವೇ ಆರೋಪಿ ಬಂಧನ ಕ್ಕೊಳಗಾದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಇಚ್ಲಂಗೋಡು ಪಚ್ಚಂಬಳದ ಮುರ್ಶಿದ್ (19) ಎಂದು ಗುರುತಿಸಲಾಗಿದೆ. ಅಬ್ದುಲ್ ಮಜೀದ್ ರವರ ಮನೆಗೆ ನುಗ್ಗಿದ ಈತ 29,700 ರೂ.ಕಳವು ಗೈದಿದ್ದನು. ಎರಡು ಅಂತಸ್ತಿನ ಈ ಮನೆಯ ಟೆರೆಸ್ ನ ಬಾಗಿಲು ತೆರಳುವ ಬಾಗಿಲು ಮುರಿದು ಒಳನುಗ್ಗಿದ್ದು, ಕಪಾಟಿನಲ್ಲಿ ರಿಸಲಾಗಿದ್ದ ಹಣವನ್ನು ಕಳವುಗೈದು ಪರಾರಿ ಯಾಗಿದ್ದನು .ವಿಚಾರಣೆ ನಡೆಸಿದಾಗ ಮುರ್ಶಿದ್ ತಪ್ಪೊಪ್ಪಿ ಕೊಂಡನು ಎಂದು ಪೊಲೀಸರು […]

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.03. ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅವರು

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಆ.02. ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ರಾಯಚೂರಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ವಿಷಾಹಾರ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಭೀಮಣ್ಣ( 60), ಈರಮ್ಮ ( 57) ಮಲ್ಲೇಶ (21), ಪಾರ್ವತಿ ( 19) ಮೃತರು ಎಂದು ತಿಳಿದುಬಂದಿದೆ. ಮತ್ತೋರ್ವ ಮಗಳು ಮಲ್ಲಮ್ಮ (23) ಸ್ಥಿತಿ ಗಂಭೀರವಾಗಿದೆ. ಮಾಂಸಾಹಾರ ಸೇವನೆ ಮಾಡಿದ್ದು, ಫುಡ್ ಪಾಯಿಸನ್ ನಿಂದ ಸಾವು ಸಂಭವಿಸಿರಬಹುದು

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. 21 ವರ್ಷದ ಪತಿಯ ಕಿರುಕುಳ ತಾಳಲಾರದೆ 11 ತಿಂಗಳ ಮಗುವಿನ 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪರಿಹಾರ ಕೇಂದ್ರಗಳಲ್ಲಿ ಕಣ್ಣೀರು, ದುಃಖದಲ್ಲಿ ಕಳೆಯುತ್ತಿರುವ ಕರ್ನಾಟಕದ 40-45 ಕುಟುಂಬಗಳು

(ನ್ಯೂಸ್ ಕಡಬ) newskadaba.com ಕೇರಳ, ಆ.02. ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವು ಕರ್ನಾಟಕದ 40-45 ಕುಟುಂಬಗಳಿಗೆ ವಿನಾಶ ಮತ್ತು ಹೃದಯ ವಿದ್ರಾವಕ ಸಂಕಟವನ್ನು ತಂದಿದೆ. ಅವರು ಈಗ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. ಈ ದುರಂತವು ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ ಮಾತ್ರವಲ್ಲದೆ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅನೇಕರು ಮಾಹಿತಿಗಾಗಿ ಪರಿಹಾರ ಕೇಂದ್ರಗಳಿಗೆ ಆಗಮಿಸಿದ್ದಾರೆ, ಇನ್ನೂ ಅನೇಕರು ಶವಗಳನ್ನು ಗುರುತಿಸಲು ಶವಾಗಾರದಲ್ಲಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಪರಿಹಾರ ಕೇಂದ್ರಗಳಲ್ಲಿ ಕಣ್ಣೀರು, ದುಃಖದಲ್ಲಿ ಕಳೆಯುತ್ತಿರುವ ಕರ್ನಾಟಕದ 40-45 ಕುಟುಂಬಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ನವದೆಹಲಿ, ಆ.02. ಮೆಟ್ರೋವನ್ನು ಅಲ್ಲಿನ ನಿವಾಸಿಗಳಿಗೆ ಮತ್ತು ಆ ನಗರಕ್ಕೆ ಭೇಟಿ ನೀಡುವ ಜನರ ಜೀವನಾಡಿ ಎಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮೆಟ್ರೋ ಜನರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯುವುದಕ್ಕಿಂತ ಅದರಲ್ಲಿ ನಡೆಯುವ ಚಟುವಟಿಕೆಗಳ ವೈರಲ್ ವೀಡಿಯೊಗಳಿಗೆ ಹೆಚ್ಚು ಪ್ರಸಿದ್ಧವಾಗಿದೆ. ದೆಹಲಿ ಮೆಟ್ರೋ ಆಸನಗಳಿಗಾಗಿ ಸಹ-ಪ್ರಯಾಣಿಕರ ನಡುವಿನ ಜಗಳಗಳು, ಪ್ರಣಯ ದೃಶ್ಯಗಳು, ಜೋಡಿಗಳ ಪ್ರೇಮ ಮೇಕಿಂಗ್, ಗಾಸಿಪ್ ಮತ್ತು ಲೈವ್ ಹಾಡುಗಳು ಅಥವಾ ಇತರ ಹಲವು ರೀತಿಯ ನೃತ್ಯ ರೀಲ್‌ಗಳಿಗಾಗಿ ಆಗಾಗ್ಗೆ

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ

(ನ್ಯೂಸ್ ಕಡಬ) newskadaba.com ಉಡುಪಿ, ಆ.02. ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ ಎನ್ನಲಾಗಿದೆ.  

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಜ್ವಲ್ ರೇವಣ್ಣ ಕೇಸ್; ‘ಅಶ್ಲೀಲ ವಿಡಿಯೋಗಳು ಅಸಲಿ’ ಎಫ್ಎಸ್ಎಲ್ ವರದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದೆ. ಈ ವಿಡಿಯೋಗಳು ಅಸಲಿ ಎಂದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೀಗ ಬಂದಿರುವ ಎಫ್ಎಸ್ಎಲ್ ವರದಿ ಪ್ರಕಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ.

ಪ್ರಜ್ವಲ್ ರೇವಣ್ಣ ಕೇಸ್; ‘ಅಶ್ಲೀಲ ವಿಡಿಯೋಗಳು ಅಸಲಿ’ ಎಫ್ಎಸ್ಎಲ್ ವರದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್  

(ನ್ಯೂಸ್ ಕಡಬ) newskadaba.com ಪುತ್ತೂರು, ಆ.02. ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಮುಂಜಾನೆ ನಡೆದಿದೆ. ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ. ಗುಡ್ಡ ಕುಸಿತ ಸಂಭವಿಸುವ ಸಮಯ ಯಾವುದೇ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್   Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆಗಸ್ಟ್ 02ರ ಶುಕ್ರವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top