ಕ್ರೈಮ್ ನ್ಯೂಸ್

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸುಮಾರು 10 ಕೋಟಿ ರೂ. ಮೌಲ್ಯದ ಕೊಕೈನ್‌ ಡ್ರಗ್ಸ್‌ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ. .  

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು 30 ವರ್ಷದ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿನ ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. ಪುರಸಭಾ ಸದಸ್ಯ ಸ್ಕ್ರಾಪ್‌ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್‌ ಅಲಿಯಾಸ್‌‍ ಹಂದಿ ಹರೀಶ್‌, ವಿನಯ್‌ ಅಲಿಯಾಸ್‌‍ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್‌ ತಲೆ ಮರೆಸಿಕೊಂಡಿದ್ದನು ಎನ್ನಲಾಗಿದೆ.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ. ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.    

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ    Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.31. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಸುರಿದ ಭಾರಿ ಮಳೆಗೆ ತಡರಾತ್ರಿ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಅಗತ್ಯ ಕಾರ್ಯಾಚರಣೆಗೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಮರ ಬಿದ್ದ ಪರಿಣಾಮ ಗುಜ್ಜರ ಕೆರೆಯ ಸುತ್ತಲೂ ಮಕ್ಕಳು ಹಾಗೂ ಹಿರಿಯರ ಸುರಕ್ಷತೆಯ ದೃಷ್ಟಿಯಿಂದ ಹಾಕಲಾಗಿದ್ದ ಸ್ಟಿಲ್ ರೇಲಿಂಗ್ ಮುರಿದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…! Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ. ದಿವ್ಯಾ ಎಂಬ ಮಹಿಳೆ ಉದ್ಯಮಿ ವಿಕ್ರಮ ವೈದ್ಯನಾಥನ್ ಅವರ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದರು. ವೈದ್ಯನಾಥನ್ ಅವರು ತಮ್ಮ ಮನೆಯಿಂದ 60 ಲಕ್ಷ ರೂಪಾಯಿ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಒಟ್ಟು 96.61 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದರು. ಅತಿವೃಷ್ಟಿಯಿಂದ ಇಲಾಖೆಗೆ ಆಗಿರುವ ನಷ್ಟ ಮತ್ತು ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗಳ ಕುರಿತು ಇಲಾಖೆ ಹಾಗೂ ಎಲ್ಲಾ ಎಸ್ಕಾಂಗಳ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!

(ನ್ಯೂಸ್ ಕಡಬ)newskadaba.com ಬೀಜಾಡಿ, ಜು.31. ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಈ ಕುರಿತು ಪೋಲಿಸ್ ಇಲಾಖೆಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ. ಸ್ಥಳೀಯರು ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕೆಂದು ಕೋರಲಾಗಿದೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…! Read More »

ಕ್ರೈಮ್ ನ್ಯೂಸ್
Scroll to Top