ಕ್ರೈಮ್ ನ್ಯೂಸ್

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್‌ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.30. ಅರ್ಧದಷ್ಟು ದ್ವೀಪವನ್ನೇ ನುಂಗಿರುವ ಪಾವೂರು- ಉಳಿಯ ಅಕ್ರಮ ಮರಳುಗಾರಿಕೆ ಕುರಿತು ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತ ಮಂಗಳೂರು ಉಪ ವಿಭಾಗ ದಂಡಾಧಿಕಾರಿ ನೇತೃತ್ವದಲ್ಲಿ ಪೊಲೀಸ್‌ ಇಲಾಖೆ ಹಾಗೂ ಏಳು ಸದಸ್ಯರನ್ನು ಒಳಗೊಂಡ ಸಮಿತಿಗೆ ವಾರದೊಳಗೆ ಸರಕಾರಕ್ಕೆ ವರದಿ ಸಲ್ಲಿಸಲು ಆದೇಶ ನೀಡಿದ್ದರೂ, ವಾರ ಕಳೆದು ತಿಂಗಳಾದರೂ ಸಮಿತಿಯ ವರದಿ ಮಾತ್ರ ಜಿಲ್ಲಾಡಳಿತ ಕೈಸೇರಿಲ್ಲ ಎನ್ನಲಾಗಿದೆ. ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳು ಜನಗಾಗೃತಿ ಹಿನ್ನೆಲೆಯಲ್ಲಿ ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ತನಿಖೆಗೆ ಒತ್ತಾಯಿಸಿದ್ದ

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ Read More »

ಕರಾವಳಿ, ಕ್ರೈಮ್ ನ್ಯೂಸ್

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ

(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯನಾಡು ಪ್ರಕೃತಿ ವಿಕೋಪದಿಂದ ದುರಂತ ಭೂಮಿಯಾಗಿ ಮಾರ್ಪಾಡಾಗಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿದ್ದು ಅನೇಕ ಊರುಗಳ ಚಿತ್ರಣವೇ ಬದಲಾಗಿವೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ Read More »

ಕ್ರೈಮ್ ನ್ಯೂಸ್

ಪ್ರವಾಹದಲ್ಲಿ ತೇಲಿಬಂದ ಶವಗಳು.! ಸೇನಾ ಹೆಲಿಕಾಪ್ಟರ್‌ ಲ್ಯಾಂಡ್‌ ಆಗೋಕು ಸ್ಥಳವಿಲ್ಲದೆ ಪರದಾಟ

(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯ್ನಾಡ್‌ ನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಇದರಲ್ಲಿ ಸಂಪೂರ್ಣ ನಾಲ್ಕು ಗ್ರಾಮಗಳೇ ನಾಪತ್ತೆಯಾಗಿವೆ ಎಂದು ವರದಿಯಾಗಿದೆ. ಇಲ್ಲಿಯವರೆಗೂ 40ಕ್ಕೂ ಅಧಿಕ ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಭಾರಿ ಮಳೆ, ಭೂಕುಸಿತದ ಬೆನ್ನಲ್ಲಿಯೇ ಸಂಭವಿಸಿದ ಪ್ರವಾಹದಲ್ಲಿ ಶವಗಳು ವಯನಾಡ್ ಜಿಲ್ಲೆಯ ಗಲ್ಲಿಗಲ್ಲಿಗಳಿಗೆ ತೇಲಿಬಂದಿವೆ ಎನ್ನಲಾಗಿದೆ. ನಿಲಂಬೂರಿನ ಪೋತುಕಲ್ ಪ್ರದೇಶದ ನದಿಯಲ್ಲಿ 19 ಮಂದಿಯ ಶವಗಳು ವಿವಿಧೆಡೆ ಕೊಚ್ಚಿ ಹೋಗಿವೆ. ಬೆಳಗಿನ ಜಾವ ಹಲವೆಡೆ ಇತರ ದೇಹಗಳು ಹಾಗೂ ದೇಹದ ಭಾಗಗಳು ತೇಲುತ್ತಿವೆ

ಪ್ರವಾಹದಲ್ಲಿ ತೇಲಿಬಂದ ಶವಗಳು.! ಸೇನಾ ಹೆಲಿಕಾಪ್ಟರ್‌ ಲ್ಯಾಂಡ್‌ ಆಗೋಕು ಸ್ಥಳವಿಲ್ಲದೆ ಪರದಾಟ Read More »

ಕ್ರೈಮ್ ನ್ಯೂಸ್

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ    

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.30. ಇಂದು ಮುಂಜಾನೆ ಜಾರ್ಖಂಡ್‌ ನ ಚಕ್ರಧರಪುರ ಜಿಲ್ಲೆಯ ರಾಜ್‌ಖರ್ಸಾವನ್ ಮತ್ತು ಬಡಬಾಂಬೋ ನಡುವೆ 12810 ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌ ನ 18 ಬೋಗಿಗಳು ಹಳಿತಪ್ಪಿ ಇಬ್ಬರು ಮೃತಪಟ್ಟು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಜ್ಪೆ, ಜು.30. ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಆರೋಪಿಗಳು ಬಜ್ಪೆಯ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಬಜಪೆ ಠಾಣೆಯ ಪಿಎಸ್‌ಐ ರೇವಣಸಿದ್ದಪ್ಪ ಅವರು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಜೊತೆಗೆ

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಜು.30. ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪುಯಲ್ಲಿ ವರದಿಯಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು, ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ ಆಗಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಮೃತಪಟ್ಟವರನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ. ಶಾರಿಕ್ ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಂದಿರುವುದಿಲ್ಲ. ಇದನ್ನು ಗಮನಿಸಿದ ಆತನ ಸಹೋದರ ಹೋಗಿ ನೋಡಿದಾಗ ಶಾರಿಕ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.   ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಮೃತರನ್ನ ಪ್ರಶಾಂತ್‌ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಪ್ರಶಾಂತ್‌, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್‌ ಸರ್ಕಲ್‌ ಮಾರ್ಗವಾಗಿ ಬೈಕ್‌ ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್‌ ಮಾರ್ಗದಿಂದ ಕೆ.ಆರ್‌ ವೃತ್ತದ ಮಾರ್ಗವಾಗಿ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top