ಕ್ರೈಮ್ ನ್ಯೂಸ್

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.  ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಅನೀಶ್‌ಕುಮಾರ್‌ ಕುಟುಂಬದ ಮೇಲೆ ದಾಳಿ ನಡೆಸಿದ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಧಾರಿಗಳ […]

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು

(ನ್ಯೂಸ್ ಕಡಬ)newskadaba.com ಬೈಂದೂರು, ಜು.27. ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ. ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ ಪೇಂಟಿಂಗ್ ಮಾಡಲು ಆಗಮಿಸಿದ್ದು, ಈ ವೇಳೆ ಪೇಂಟಿಂಗ್ ಕಂಪ್ರೆಸರ್ ಯಂತ್ರದಲ್ಲಿ ವಿದ್ಯುತ್ ಹರಿದ ಪರಿಣಾಮ ವಿದ್ಯುತ್ ಶಾಕ್‌ಗೆ ಒಳಗಾದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಜು.27. ಅಡುಗೆ ಅನಿಲದ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈ ಕುಟುಂಬ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.26. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಅಟೋ ರಿಕ್ಷಾ ಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22)  ಎಂದು ಗುರುತಿಸಲಾಗಿದೆ. ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌ ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24)  ಎಂದು ಗುರುತಿಸಲಾಗಿದೆ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವಕ ಟೆಟ್ರಾ ಹೆಡ್ರಾಕೆನಬಿನಾಯ್ಡ ಎಂಬ

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜು.25. ಕೌಟುಂಬಿಕ ವಿಚಾರಕ್ಕೆ ತಂದೆಯ ನಿರಂತರ ಕಿರುಕುಳ ತಾಳಲಾರದೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತನನ್ನು ಅಕಿಲ್ ಪಾಶ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ. ಸಂಬಂಧಿಕರು ಮತ್ತು ನೆರೆಹೊರೆಯವರು ಪೊಲೀಸರ ಸಹಾಯದಿಂದ ಸೈಯದ್ ಪಾಷಾ ಮತ್ತು ಅವರ ಮಗನನ್ನು ಸಮಾಧಾನಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….!

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.25. ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕೊಲೆ ಆರೋಪಿ ಶಿವಮೊಗ್ಗದ ಸಾಗರ ಮೂಲದ ಸೃಜನ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಸೃಜನ್ ಸೌಮ್ಯಳ ಮೃತದೇಹವನ್ನು ಹೂತಿಟ್ಟಿದ್ದನು. ಯುವತಿಯ

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top