ಕ್ರೈಮ್ ನ್ಯೂಸ್

ಮೊಬೈಲ್ ಕಳ್ಳತನದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹೇಶ್ ಪೈ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜಪಡಿಸಲಾಗಿದ್ದು, ಮಂಗಳೂರು ನ್ಯಾಯಾಲಯವು ಆರೋಪಿಗೆ ಮೂರು ವರ್ಷ ಶಿಕ್ಷೆ ಮತ್ತು 5000 ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ.

ಮೊಬೈಲ್ ಕಳ್ಳತನದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಖ್ಯಾತ ಪತ್ರಕರ್ತ, ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಅವರು, ಮೊದಲು ನವಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿ, ಬಳಿಕ ಉದಯವಾಣಿಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ

ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಹೃದಯಾಘಾತದಿಂದಾಗಿ ಪತ್ನಿ ಮೃತಪಟ್ಟ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ನಡೆದಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಗ್ರಾಮಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಹಾಗೂ ಪತಿ ಶೇಷಪ್ಪ ಪೂಜಾರಿ(63) ಎದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೀನಾಕ್ಷಿಯವರು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರದಂದು ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಮೂಲಕ 250ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ – ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಬಳಸಿ ಸುಮಾರು 250ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜಸ್ಥಾನ ಮೂಲದ ನರೇಶ್ ಪೂಜಾರಿ ಗೋಸ್ವಾಮಿ(45) ಎಂದು ಗುರುತಿಸಲಾಗಿದೆ. ಈತ ಮ್ಯಾಟ್ರಿಮೋನಿಯಲ್ ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ಸೃಷ್ಟಿಸಿ ಮಹಿಳೆಯರು ಹಾಗೂ ಅವರ ಪೋಷಕರಿಗೆ ಹಣ ನೀಡುವಂತೆ ಆಮಿಷವೊಡ್ಡುತ್ತಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನ ವಿರುದ್ಧ ಕೊಯಮತ್ತೂರಿನ

ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಮೂಲಕ 250ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ – ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮೋಹಿತ್ ಪೂಜಾರಿ ಅವರು ಮಂಗಳೂರಿನ ಮನೆಯೊಂದರಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಏಣಿ ಜಾರಿದ ಪರಿಣಾಮ ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಪಾಟ್ನಾ, ಫೆ. 27. ಆರ್.ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಈ ಅಪಘಾತವು ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಯ ಮತ್ತೊಂದು ಕಡೆಯಿಂದ ಬರುತ್ತಿದ್ದ ವಾಹನಕ್ಕೆ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ- ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮಾದಕ ದ್ರವ್ಯ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರ ತಂಡ ಕೇರಳದಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಟಿ.ಇ.ಜೋಸೆಫ್ ಎಂದು ಗುರುತಿಸಲಾಗಿದೆ. ಈತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈತನು 16 ವರ್ಷಗಳಿಂದ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದು, ಈತನ ವಿರುದ್ದ ನ್ಯಾಯಾಲಯವು ದಸ್ತಗಿರಿ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) neskadaba.com ಉಡುಪಿ, ಪೆ. 26. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಬಂದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೇ ಮುಳುಗಿರುವ ಸಾಧ್ಯತೆ ಇದೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) neskadaba.com ಪುತ್ತೂರು, ಫೆ. 26. ದ್ವಿಚಕ್ರ ವಾಹನ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತ ಸವಾರನನ್ನ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರರಾಗಿದ್ದ ಬಿಹಾರ ಮೂಲದ ಸುರೇಂದರ್ (29) ಮತ್ತು ಸನ್ನೀಫ್ (28) ಎಂಬವರು ಗಾಯಗೊಂಡಿದ್ದಾರೆ. ರವಿವಾರದಂದು ರಜೆಯಿದ್ದ ಕಾರಣ ಕ್ಲಿಫರ್ಡ್ ಮೊರಾಸ್ ಅವರು ಅಳಕೆಮಜಲಿನಲ್ಲಿ ಖಾಸಗಿ

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಢಿಕ್ಕಿ- ಯುವಕ ಮೃತ್ಯು

(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ

ಲಾರಿ ಢಿಕ್ಕಿ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top