ಕ್ರೈಮ್ ನ್ಯೂಸ್

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 25. ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮೃತಪಟ್ಟ ಕುರಿತು ವರದಿಯಾಗಿದೆ. ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿರುವುದಾಗಿ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು.

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 24. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಶಬರಿ ಹೊಟೇಲ್ ಎದುರಿನ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅನಂತಯ್ಯ (68) ಎಂದು ಗುರುತಿಸಲಾಗಿದೆ. ಅವರು ಮನೆಗೆ ತೆರಳುವುದಕ್ಕಾಗಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಗೆ ಬಿದ್ದ ಅನಂತಯ್ಯರವರ ತಲೆ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 24. ಸಾಲದ ಕಂತು ಪಾವತಿಸದ ಹಿನ್ನೆಲೆ ಧರ್ಮಸ್ಥಳ ಸಂಘದವರು ಮನೆಗೆ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಎಂದು ಗುರುತಿಸಲಾಗಿದೆ.   ಮೃತ ಅರ್ಪಿತಾರವರು, ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕಳೆದ 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮಾದಾಪುರದ ಈರಪ್ಪ ಎಂದು ಗುರುತಿಸಲಾಗಿದೆ. ಈತ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದು, 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಣಂಬೂರು, ಫೆ. 24. ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರದಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಎಂದು ಗುರುತಿಸಲಾಗಿದೆ. ಪೂರ್ಣಿಮಾ ತನ್ನ ಸಹೋದರಿಯ ಜೊತೆ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ, ಅವರಿದ್ದ ಸ್ಕೂಟರ್ ಪಣಂಬೂರು ಗೇಲ್ ಗ್ಯಾಸ್ ಬಂಕ್ ಬಳಿ ತಲುಪಿದಾಗ ಹಿಂದಿನಿಂದ ಎಡಭಾಗದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ನುಗ್ಗಿ ಬಂದ ಸಿಮೆಂಟ್ ಮಿಕ್ಸರ್

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ನಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಮಗುಚಿ ಬಿದ್ದಿದ್ದು, ರಸ್ತೆಗೆಸೆಯಲ್ಪಟ್ಟ

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 24. ಮುಂಬೈಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ಮೂಲದ ಕಯ್ಯಾರ್ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಯ್ಯಾರ್ ಚನ್ನಿಕುಡೇಲ್ ನ ರೂಬನ್ ಚಾರ್ಲ್ಸ್ ಕ್ರಾಸ್ತ (39) ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಉದ್ಯಮ ನಡೆಸುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ರೂಬನ್ ನನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದಾರೆ.

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 24. ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಎಂದು ಗುರುತಿಸಲಾಗಿದೆ. ಈತ ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಂದಿಗೆ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಪಡುಶೆಡ್ಡೆ ಗ್ರಾಮದ ಬೊಂದೇಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಟ್ರ್ಯಾಕ್ ನ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಡಿಸಲಿಗೆ ಬೆಂಕಿ – ನಾಲ್ವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಲಕ್ನೋ, ಫೆ. 24. ಬೆಂಕಿ ಬಿದ್ದ ಪರಿಣಾಮ ನಾಲ್ವರು ಬಾಲಕಿಯರು ಸಜೀವ ದಹನಗೊಂಡ ದಾರುಣ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಗ್ನಿ ಅವಘಡದಲ್ಲಿ ಪ್ರಿಯಾಂಶಿ, ಮಾನ್ವಿ ಮತ್ತು ನೈನಾ ಎಂದು ಗುರುತಿಸಲಾಗಿದೆ. ಇನ್ನು ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೀತು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಗುಡಿಸಲಿಗೆ ಬೆಂಕಿ – ನಾಲ್ವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top