ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..!

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 02. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ತಲುಪುತ್ತಿದ್ದಂತೆಯೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಒಮ್ಮೆಲೇ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದ್ದು, ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು […]

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು: ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ವರ್ಕಾಡಿ, ಧರ್ಮನಗರದ ನಿವಾಸಿ ಸಮೀರ್(26) ಎಂದು ಗುರುತಿಸಲಾಗಿದೆ. ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದು, ಡಿ. 31 ರಂದು ರಜೆ ಇದ್ದ ಹಿನ್ನೆಲೆ ಬಟ್ಟೆ ತೊಳೆಯಲು ಮತ್ತು ಸ್ನಾನಕ್ಕೆಂದು ಇತರ ಇಬ್ಬರು ಯುವಕರ ಜೊತೆ ನದಿಗೆ ಬಂದಿದ್ದರು. ಈ ಸಂದರ್ಭ ಸಮೀರ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಬರ್ ಕ್ರೈಂ- ಹೂಡಿಕೆ ಹೆಸರಿನಲ್ಲಿ ವಂಚನೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮಂಗಳೂರು, ನ. 25. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 21.50 ಲಕ್ಷ ರೂ. ಪಡೆದು ವಂಚಿಸಿದ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡಿನ ಕಣ್ಣನ್‌ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಇವರು ಅ. 03ರಂದು ಫೇಸ್‌ಬುಕ್‌ ಖಾತೆಗೆ ಬಂದಿದ್ದ ಲಿಂಕ್‌ ತೆರೆದು ನೋಡಿದಾಗ ಅದರಲ್ಲಿದ್ದ ಮಾಹಿತಿಯನ್ನು ನಂಬಿ ಟ್ರೇಡಿಂಗ್‌ ಖಾತೆ ತೆರೆದಿದ್ದರು. ಇದೀಗ ಅವರ ಖಾತೆಯಿಂದ ಮೂರು ಬಾರಿ ಹಣ ವರ್ಗಾಯಿಸಿಕೊಳ್ಳಲಾಗಿದ್ದು, ಆದರೆ ಯಾವುದೇ

ಸೈಬರ್ ಕ್ರೈಂ- ಹೂಡಿಕೆ ಹೆಸರಿನಲ್ಲಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಕೊಲೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 24. ಭಾರತೀಯ ಮೂಲದ 26 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬರಿಗೆ ಕಾರಿನೊಳಗೆ ಗುಂಡು ಹಾರಿಸಿ ಕೊಂದಿರುವ ಘಟನೆ ಅಮೆರಿಕದ ಓಹಿಯೋದಲ್ಲಿ ನಡೆದಿದೆ. ಭಾರತೀಯ ಮೂಲದ ಆದಿತ್ಯ ಅದ್ಲಾಖಾ ಎಂಬವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ಕಾರ್ಯಕ್ರಮದಲ್ಲಿ ನಾಲ್ಕನೇ ವರ್ಷದ ವಿದ್ಯಾರ್ಥಿಯಾಗಿದ್ದರು ಎಂದು ವೈದ್ಯಕೀಯ ಶಾಲೆಯ ಮೂಲಗಳು ತಿಳಿಸಿದೆ.

ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಕೊಲೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23. ಅಕ್ರಮವಾಗಿ ಮರಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ಸಮೇತ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಕಡಿದು ಸಾಗಿಸುತ್ತಿದ್ದ ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 23. ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.   ಮೃತ ಮಹಿಳೆಯನ್ನು ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು ಗುರುತಿಸಲಾಗಿದೆ. ಲೀಲಾವತಿಯವರು ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ನ. 23. ಮುಕ್ಕ ಚೆಕ್‌ಪೋಸ್ಟ್‌ ಬಳಿ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಭಾಗಕ್ಕೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಮಯ್ಯದ್ದಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಫಲಕ ಅಳವಡಿಸದೇ ಲಾರಿ ನಿಲ್ಲಿಸಿದ ಚಾಲಕ ಕಳಸಪ್ಪ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 23. ರೈಲಿಗೆ ಸಿಲುಕಿ ರೈಲ್ವೇ ಸ್ಟೇಷನ್ ಮಾಸ್ಟರ್ ಓರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪರವಾನಗಿ ಇಲ್ಲದ ನಾಡ ಕೋವಿ ಹೊಂದಿದ್ದ ಪ್ರಕರಣ- ಆರೋಪಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಸುಳ್ಯ, ನ. 23. ಪರವಾನಗಿ ಇಲ್ಲದೇ ನಾಡಕೋವಿ ಹೊಂದಿದ್ದ ಪ್ರಕರಣದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಸುಳ್ಯ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿರುವ ಕುರಿತು ವರದಿಯಾಗಿದೆ. 2013ರಲ್ಲಿ ಕಣ್ಣೂರು ಜಿಲ್ಲೆಯ ಎಂ.ಕೆ. ಅಜಿತ್ ಎಂಬಾತ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಬಟ್ಟಂಗಾಯ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿರುವ ಮನೆಯ ಅಂಗಳಕ್ಕೆ ಪರವಾನಿಗೆ ಇಲ್ಲದ ನಾಡ ಕೋವಿ, ಗನ್ ಪೌಡರ್ ಹಾಗೂ 2 ಕಬ್ಬಿಣದ ಕಡ್ಡಿಗಳನ್ನು ತಂದಿದ್ದು,

ಸುಳ್ಯ: ಪರವಾನಗಿ ಇಲ್ಲದ ನಾಡ ಕೋವಿ ಹೊಂದಿದ್ದ ಪ್ರಕರಣ- ಆರೋಪಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top