ಕ್ರೈಮ್ ನ್ಯೂಸ್

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಸೆ. 26. 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದು ನಂತರ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿತ್ತು. ಸಂತ್ರಸ್ಥೆಗೆ ಮೊದಲು ನೆರೆಮನೆಯಾತ ಅತ್ಯಾಚಾರ ನಡೆಸಿ ನಂತರ ಆತನ ಇಬ್ಬರು ಸಹಚರರು ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ, ನಂತರ […]

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 26. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ ನಡೆದಿದೆ. ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವು ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೇ ಬಾಕಿಯಾಗಿತ್ತು ಎನ್ನಲಾಗಿದೆ. ಬಳಿಕ ಪಿಕಪ್ ನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸುಬ್ರಹ್ಮಣ್ಯ ಪೊಲೀಸರು

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 26. ಕಾಲೇಜಿನ ಸುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ದೇರಳಕಟ್ಟೆ ನಿವಾಸಿ ಶರೀಫ್ (30) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆ ಸಮೀಪ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ‌ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್‌ಲೈನ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಆನ್‌ಲೈನ್ ಮೂಲಕ ಹಣ ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ವಾಟ್ಸಪ್‌ಗೆ ಕಂಪೆನಿಯೊಂದರ ಹೆಸರಿನಲ್ಲಿ ಮೆಸೇಜ್ ಬಂದಿದ್ದು, ಅದರಲ್ಲಿ ಪಾರ್ಟ್ ಟೈಮ್ ಟಾಸ್ಕ್‌ ಗಳನ್ನು ಪ್ರತಿದಿನ ಮಾಡಿದರೆ ಶೇ. 30ರಷ್ಟು ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ಬಳಿಕ ಟೆಲಿಗ್ರಾಂ ಆಯಪ್‌ನಲ್ಲಿರುವ ವ್ಯಕ್ತಿಯ ಮೂಲಕ ಕಾಶ್ಮೀರ್ 2233 ಎಂಬ ವ್ಯಕ್ತಿಯನ್ನು ಪರಿಚಯಿಸಿ ಮಾರ್ಕೆಟಿಂಗ್ ಕಂಪೆನಿಯ ಗುಂಪಿನಲ್ಲಿ ಸೇರಿಸಿ ಆಮಿಷವೊಡ್ಡಲಾಗಿತ್ತು. ಇದನ್ನು ಇದನ್ನು

ಆನ್‌ಲೈನ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಾಗಾಟದ ಮರಳು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಬದಿಯಲ್ಲಿರುವ ನೇತ್ರಾವತಿ ನದಿ ಕಿನಾರೆಯಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ವರದಿಯಾಗಿದೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಮರಳು ಸಾಗಾಟಕ್ಕೆ ಬಳಸಿದ್ದ 5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಅಕ್ರಮ ಸಾಗಾಟದ ಮರಳು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌; ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ ಐದು ಮಂದಿ ಮೃತಪಟ್ಟ ಘಟನೆ ಇಂದು ಸಂಜೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳನ್ನು ಇಳಿಸಿ ಮರಳುತ್ತಿದ್ದ ಶಾಲಾ ಬಸ್ಸು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ನಡೆದಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟವರ

ಶಾಲಾ ಬಸ್ – ಆಟೋ ರಿಕ್ಷಾ ನಡುವೆ ಭೀಕರ ಅಪಘಾತ‌; ಐವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹೆಬ್ರಿ, ಸೆ. 25. ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಳಂಜೆ ಗ್ರಾಮದ ಈಶ್ವರನಗರ ಎಂಬಲ್ಲಿ ನಡೆದಿದೆ. ಮೃತರನ್ನು ವಿಷ್ಣುಮೂರ್ತಿ(48) ಎಂದು ಗುರುತಿಸಲಾಗಿದೆ. ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಇವರು, ಸ್ನಾನ ಮಾಡಲು ಮನೆಯ ಅಂಗಳದಲ್ಲಿನ ಆವರಣವಿಲ್ಲದ ಬಾವಿಯ ಬಳಿ ಹೋಗಿದ್ದರು. ಅಲ್ಲಿ ಪಂಪ್‌ ನಲ್ಲಿ ನೀರು ಬಾರದ ಹಿನ್ನೆಲೆ ಬಾವಿಯೊಳಗೆ ಇದ್ದ ಫುಟ್ ಬಾಲ್ ಎತ್ತಿ ನೋಡಲು ಹೋಗಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ ಪೊಲೀಸರು ಬಂಧಿಸಿದ್ದಾರೆ‌. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ಭಾನುವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 25. ಕಳೆದ 9 ವರ್ಷಗಳಿಂದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೊಕ್ಯಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಎಂದು ಗುರುತಿಸಲಾಗಿದೆ. ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದರ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಇವರು ಸೆ. 24 ರಂದು ಸಂಜೆ ಮನೆಯಿಂದ ಹೊರಟಿದ್ದು, ಇಂದು ಬೆಳಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top