ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಕರ್ಮಲದಲ್ಲಿ ಭಾನುವಾರದಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಕೀರ್ತಿಕಾ ಎಂದು ಗುರುತಿಸಲಾಗಿದೆ. ಕೀರ್ತಿಕಾ ಮನೆಯೊಳಗೆ ಸೀಲಿಂಗ್ ಫ್ಯಾನ್‌ ಗೆ ಬೆಡ್‌ಶೀಟ್ ಸುತ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಇರ್ದೆ, ಸೆ. 24. ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ರಾಮಣ್ಣ ಪೂಜಾರಿಯವರು ಸೆ. 23ರಂದು ಮನೆ ಬಳಿಯ ತೆಂಗಿನ ಮರ ಹತ್ತುವ ಸಂದರ್ಭ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮರದಿಂದ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಇಡ್ಕಿದು, ಸೆ. 24. ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಮತ್ತು ಮಾದಕ ವಸ್ತು ಸೇವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಕಾದು ಕುಳಿತು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ನಡೆದಿದೆ. ಬಂಧಿತ ಯುವಕರಿಬ್ಬರು ಮಾದಕ ವಸ್ತು ಸೇವಿಸಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇವರಿಂದ 1 ಬೈಕ್‌ ಹಾಗೂ ಸ್ಕೂಟರ್‌ ನ್ನು ವಶಕ್ಕೆ

ಮಾದಕ ವಸ್ತು ಸೇವನೆ – ಯುವಕರಿಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಎಎಸ್ಐ ವಿಧಿವಶ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 24. ಹೃದಯಘಾತದಿಂದ ಪೊಲೀಸ್‌ ಅಧಿಕಾರಿಯೋರ್ವರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಕಳಸ ಠಾಣೆಯ ಎಎಸ್‌ಐ ಜಿ.ಕೆ ಮುರಳೀಧರ್ ಎಂದು ಗುರುತಿಸಲಾಗಿದೆ. ಜಿ.ಕೆ ಮುರಳೀಧರ್ ಅವರು ಕರ್ತವ್ಯ ಮುಗಿಸಿ ಮನೆಯಲ್ಲಿದ್ದು, ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳಸದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿ.ಕೆ ಮುರಳೀಧರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹೃದಯಾಘಾತ- ಎಎಸ್ಐ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೋಮಾಂಸ ಸಾಗಾಟದ ವಾಹನಕ್ಕೆ ಬೆಂಕಿಯಿಟ್ಟು ಕಾರ್ಯಕರ್ತರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ದೊಡ್ಡ ಬಳ್ಳಾಪುರ, ಸೆ. 24. ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ವೀಕೆಂಡ್ ದಿನಗಳಲ್ಲಿ ಆಂಧ್ರದ ಹಿಂದೂಪುರದಿಂದ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಗೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುವುದು ಮಾಮೂಲು. ಇದನ್ನು ಬೆನ್ನಟ್ಟಿದ ಶ್ರೀರಾಮಸೇನೆ ಕಾರ್ಯಕರ್ತರು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದ ಬಳಿ ಗೋಮಾಂಸ ಸಾಗಾಟದ ವಾಹನಗಳನ್ನ ತಡೆದು ಪರಿಶೀಲನೆ ನಡೆಸಿದಾಗ ಐದು ವಾಹನಗಳಲ್ಲಿ ಗೋಮಾಂಸ ಪತ್ತೆಯಾಗಿದೆ. ಇದರಿಂದ

ಗೋಮಾಂಸ ಸಾಗಾಟದ ವಾಹನಕ್ಕೆ ಬೆಂಕಿಯಿಟ್ಟು ಕಾರ್ಯಕರ್ತರಿಂದ ಆಕ್ರೋಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ವಂಚನೆ- ಸುಮಾರು 99 ಲಕ್ಷ ರೂ.ಕಳೆದುಕೊಂಡ ಇಂಜಿನಿಯರ್

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 24. ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು ಕಳುಹಿಸಿದ ಲಿಂಕ್ ಕ್ಲಿಕ್ ಮಾಡುವ ಮೂಲಕ ಸಾಫ್ಟ್‌ ವೇರ್ ಇಂಜಿನಿಯರ್ ಓರ್ವರು ಬರೋಬ್ಬರಿ 99 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಶಿವಮೊಗ್ಗದಿಂದ ವರದಿಯಾಗಿದೆ. ಶಿವಮೊಗ್ಗದ ಸಾಫ್ಟ್‌ ವೇರ್ ಇಂಜಿನಿಯರ್ ಓರ್ವರಿಗೆ ಮ್ಯಾಟ್ರಿಮೋನಿ ವೆಬ್‌ಸೈಟ್‌ ನಲ್ಲಿ ಸ್ವಪ್ನಾ ಎಂಬ ಹೆಸರಿನ ಯುವತಿಯ ಪರಿಚಯವಾಗಿದ್ದು, ಇಬ್ಬರು ವಾಟ್ಸಪ್ ಮೂಲಕ ಚಾಟಿಂಗ್ ಮಾಡಿದ್ದಾರೆ. ಸ್ವಪ್ನಾ ತಾನು ಲಂಡನ್‌ನಲ್ಲಿ ವಾಸವಾಗಿದ್ದು, ತನ್ನ ಚಿಕ್ಕಪ್ಪ ವಾಲ್‌ ಸ್ಟ್ರೀಟ್‌ನಲ್ಲಿ ಮಾರ್ಕೆಟ್

ಆನ್ ಲೈನ್ ವಂಚನೆ- ಸುಮಾರು 99 ಲಕ್ಷ ರೂ.ಕಳೆದುಕೊಂಡ ಇಂಜಿನಿಯರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 24. ಗಣೇಶೋತ್ಸವದ ಸಂದರ್ಭ ಗಣಪತಿ ವಿಸರ್ಜನೆ ವೇಳೆ ಯುವಕನೋರ್ವ ಕೆರೆಯ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಗಣೇಶ್ (25) ಎಂದು ಗುರುತಿಸಲಾಗಿದೆ. ಕುರುಬರಹಳ್ಳಿ ಕೆರೆಯಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನರ್ಸರಿಗೆ ಕಾಡಾನೆಗಳು ದಾಳಿ- 3,200ಕ್ಕೂ ಅಧಿಕ ಗಿಡಗಳು ಧ್ವಂಸ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 24. ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ ಕುರಿತು ಮುಂಡಾಜೆ ಎಂಬಲ್ಲಿ ನಡೆದಿದೆ. ಈ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು ಹಾಗೂ ಬಲೀಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು ಆನೆಗಳು ತುಳಿದು ಧ್ವoಸಗೊಳಿಸಿವೆ. ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ. ಕೆಲವು ದಿನಗಳ ಹಿಂದೆ ಧರ್ಮಸ್ಥಳದ

ನರ್ಸರಿಗೆ ಕಾಡಾನೆಗಳು ದಾಳಿ- 3,200ಕ್ಕೂ ಅಧಿಕ ಗಿಡಗಳು ಧ್ವಂಸ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಮೃತರನ್ನು ಸಜಿಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಎಂಬವರ ಪುತ್ರ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ. ವಾಮದಪದವು ಎಂಬಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ಇಂದು ಬೆಳಗ್ಗೆ ವಾಮದಪದವಿನಿಂದ ಸಜಿಪದಲ್ಲಿರುವ ತನ್ನ ಮೂಲ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಪಾಣೆಮಂಗಳೂರು ಸೇತುವೆ ಬಳಿ ತಲುಪಿದಾಗ ಎದುರಿನಿಂದ ಬಂದ ಜಲ್ಲಿಕಲ್ಲು

ಬೈಕ್ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಿತ್ತೂರಿನಲ್ಲಿ ಭಾನುವಾರದಂದು ನಡೆದಿದೆ. ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ. ಪುತ್ತೂರಿನ ಮುರ ಎಂಬಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top