ಕ್ರೈಮ್ ನ್ಯೂಸ್

ರಸ್ತೆ ಹೊಂಡದಿಂದ ಶಾಲಾ ವಾಹನ ಅಪಘಾತ – 10 ಮಕ್ಕಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.17: ಭಂದಾರ ಜಿಲ್ಲೆಯಲ್ಲಿನ ದಾರುಣ ಘಟನೆಯೊಂದು ದೇಶದ ರಸ್ತೆಗಳ ಅವ್ಯವಸ್ಥಿತ ಸ್ಥಿತಿಯ ಇನ್ನೊಂದು ಉದಾಹರಣೆಯಾಗಿದೆ. ಇಂದು ಮಧ್ಯಾಹ್ನ, ಪ್ರಾಥಮಿಕ ಶಾಲೆಯ 10 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಒಂದು ಖಾಸಗಿ ಓಮ್ನಿ ವಾಹನವು ಸೇತುವೆಯೊಂದರಲ್ಲಿ ನಿಯಂತ್ರಣ ತಪ್ಪಿ ಕೆಳಕ್ಕೆ ಉರುಳಿದ್ದು, ಎಲ್ಲಾ ಮಕ್ಕಳೂ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಗಾಯಗೊಂಡ ಮಕ್ಕಳನ್ನು ತಕ್ಷಣವೇ ಭಂದಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರುತಿ ಓಮ್ನಿ ಕಾರು ತುಂಬಾ ವೇಗದಲ್ಲಿ ಚಲಿಸುತ್ತಿದ್ದ ವೇಳೆ, ಒಂದು ಸಣ್ಣ ಸೇತುವೆ ಪ್ರದೇಶದಲ್ಲಿ ರಸ್ತೆಯಲ್ಲಿ ಇದ್ದ […]

ರಸ್ತೆ ಹೊಂಡದಿಂದ ಶಾಲಾ ವಾಹನ ಅಪಘಾತ – 10 ಮಕ್ಕಳಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.16- ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್‌ ಆಸ್ಪತ್ರೆಯ ಉಸ್ತುವಾರಿ ವೈದ್ಯ ಡಾ. ಬಸಂತ್‌ ಕುಮಾರ್‌ ನಿಂಗ್ವಾಲ್‌ ಪಿಟಿಐಗೆ ತಿಳಿಸಿದ್ದಾರೆ. ಟ್ರಾನ್‌್ಸಜೆಂಡರ್‌ ಸಮುದಾಯದ ಸುಮಾರು 25 ಜನರನ್ನು

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ

(ನ್ಯೂಸ್ ಕಡಬ) newskadaba.com ಅ. 16. ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ಎಡನೀರು ಮಠದ ಪರಮಶಿಷ್ಯರಾದ ಅಮ್ಮಣ್ಣಾಯರು ತಮ್ಮ ಜೀವನ ಅತೀ ಹೆಚ್ಚು ಯಕ್ಷಗಾನ ಭಾಗವತಿಕೆಯನ್ನು ಎಡನೀರು ಮಠದ ಮೇಳ ಹಾಗೂ ಎಡನೀರು ಕ್ಷೇತ್ರದಲ್ಲೇ ಮಾಡಿರುವುದು ವಿಶೇಷ.

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 16. ಬೀದಿ ನಾಯಿಯೊಂದು ಬಾಲಕಿ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ನ ಕಾನಮೈದಗುರಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಬಾಲಕಿಯನ್ನು ಸುರತ್ಕಲ್‌ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಎಂಬವರ‌ ಮಗಳು ರಿದಾ ಫಾತಿಮ (9) ಎಂದು ಗುರುತಿಸಲಾಗಿದೆ‌. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿದಾ ಫಾತಿಮ ಬುಧವಾರದಂದು ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದ ಸಂದರ್ಭ ಬೀದಿನಾಯಿಗಳು ಜಗಳ ಮಾಡಿಕೊಂಡು

ಬೀದಿನಾಯಿಗಳ ದಾಳಿ- ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.16-ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ

ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಅ. 15. ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಮೃತಪಟ್ಟಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿಯ ಕೊಡೇರಿ ಹೊಸಹಿತ್ಲುವಿನ ಕರಾವಳಿಯಲ್ಲಿ ನಡೆದಿದೆ.   ಮೃತ ಬಾಲಕರನ್ನು ಸಂಕೇತ್‌ (16), ಸೂರಜ್‌ (15) ಮತ್ತು ಆಶಿಶ್‌ (14) ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತ ಬಾಲಕರು ಆಟವಾಡುತ್ತಾ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮುಳುಗಿದ್ದು, ಹೊರಗೆ ಬರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ ಓರ್ವ ಬಾಲಕ ಈಜಿ ದಡ ಸೇರಿದ ನಂತರ ಪೊಲೀಸರಿಗೆ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಅ. 15. 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತ ಆರೋಪಿಯನ್ನು ಕೇರಳದ ತ್ರಿಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990 ನೇ ವರ್ಷದಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com  ಅ. 14. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಎಂಬವರು ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದ ಘಟನೆ ನಡೆದಿದೆ.   ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದ  ಮೇರೆಗೆ ಕಾರ್ಯಚರಣೆ ನಡೆಸಿದ ಸಿಐಎಸ್‌ಎಫ್‌ ನ ಸಿಐಡಬ್ಲ್ಯೂ ತಂಡ, ಆತನ ಲಗೇಜ್‌

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com  ಅ. 14. ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಕೇರಳ ನಿವಾಸಿ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್ ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಆರೋಪಿಗಳು ಅವರನ್ನು ಹೆಣ್ಣು ನೋಡುವ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top