ಕ್ರೈಮ್ ನ್ಯೂಸ್

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪಾರ್ಟ್‌ಟೈಮ್ ಜಾಬ್ ಇದೆ ಎಂದು ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ ಬಳಿಕ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇನ್‌ಸ್ಟಾಗ್ರಾಂ ಖಾತೆಗೆ ಸೆ. 09ರಂದು ಅಪರಿಚಿತ ಹೆಸರಿನಲ್ಲಿ ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್‌ ನ್ನು ಒತ್ತಿದಾಗ ಪ್ರತಿ ದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ […]

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 22. ಇತ್ತೀಚೆಗೆ ಕೋಲಾರ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾದೇ ಶುಕ್ರವಾರದಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಕಾಫಿ ಮಾಡುತ್ತಿದ್ದ ವೇಳೆ ಸಿಲಿಂಡರ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳುರಿನಲ್ಲಿ ನಡೆದಿದೆ. ಡ್ರಗ್ಸ್ ಫ್ರೀ ಮಂಗಳೂರು ನಿಟ್ಟಿನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 35 ಗ್ರಾಂ. ತೂಕದ 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 22. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅನ್ಯ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರಿಗೆ ದೂರು ನೀಡಿದ್ದಾರೆ. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಸಂದರ್ಭ ಮುತಾಲಿಕ್​​

ಪ್ರಚೋದನಕಾರಿ ಹೇಳಿಕೆ ಆರೋಪ- ಮುತಾಲಿಕ್ ಗಡಿಪಾರಿಗೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಧರ್ಮಸ್ಥಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದ ಯುವತಿಯೋರ್ವಳು ಅಪಾರ್ಟ್‌‌ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೃತ ಯುವತಿಯನ್ನು ವಿಜಯಲಕ್ಷ್ಮಿ (17) ಎಂದು ಗುರುತಿಸಲಾಗಿದೆ. ಖಿನ್ನತೆಗೊಳಗಾಗಿದ್ದ ವಿಜಯಲಕ್ಷ್ಮೀ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಕ್ಕೂ ಮೊದಲು ಧರ್ಮಸ್ಥಳಕ್ಕೆ ಹೋಗಿದ್ದ ಆಕೆ ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರಿಬ್ಬರು ರಕ್ಷಣೆ ಮಾಡಿ ಬುದ್ಧಿ

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 22. ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿ ಕಳುಹಿಸಿದ್ದರು. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ- ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಜಲಪಾತಕ್ಕೆ ತೆರಳಿದ ವಿದ್ಯಾರ್ಥಿಗಳಿಬ್ಬರು ಅಲ್ಲಿಂದ ಮರಳುತ್ತಿದ್ದ ವೇಳೆ ಬೈಕ್ ಅನ್ನು

ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ,

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಸಿಬ್ಬಂದಿ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಸೆ. 17 ರಂದು ಬಂಟ್ವಾಳದ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19 ರಂದು ಅವರನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರು ಮಲಗಿದ್ದ ವೇಳೆ ಟೇಬಲ್‌ ಮೇಲೆ ಇರಿಸಲಾಗಿದ್ದ ಎರಡು ಮೊಬೈಲ್ ಫೋನ್

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.  22. ಕಂಬವೊಂದಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡ್‌ ಬಳಿ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕರನ್ನು ಮನಮೋಹನ್‌ ಹಾಗೂ ನಿಖಿಲ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಬೈಕ್ ಚಾಲನೆ ಮಾಡಿದ್ದ ಇವರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಸೆ. 22. ವಸತಿ ಶಾಲೆಯೊಂದರ ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತಪಟ್ಟ ಘಟನೆ ಗುರುವಾರ ರಾಮನಗರದಲ್ಲಿ ಹೊಸೂರು ಗೊಲ್ಲಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು  ಕೌಶಿಕ್ ಗೌಡ (12)‌ ಮೃತ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಂಭೀರ ಗಾಯಗೊಂಡದ್ದಾನೆ. ಗುರುವಾರ ಬೆಳಿಗ್ಗೆ 8.30ರ ಸುಮಾರಿಗೆ ಕೌಶಿಕ್ ಹಾಗೂ ಇಬ್ಬರು ವಿದ್ಯಾರ್ಥಿಗಳು ನೀರಿನ ತೊಟ್ಟಿ ಬಳಿ ಮುಖ‌ ತೊಳೆಯುತ್ತಿದ್ದರು.  ಸಂದರ್ಭ, ಐದು ಅಡಿ ಎತ್ತರವಿರುವ ತೊಟ್ಟಿಯ ಶಿಥಿಲಗೊಂಡ ಗೋಡೆ ವಿದ್ಯಾರ್ಥಿಗಳ ಮೇಲೆ

ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top