ಕ್ರೈಮ್ ನ್ಯೂಸ್

ಅಕ್ರಮ ಗೋಮಾಂಸ ಸಾಗಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗೋಮಾಂಸವನ್ನು ಮಾರಾಟದ ಉದ್ದೇಶದಿಂದ ಕೊಂಡೊಯ್ಯುತ್ತಿದ್ದ ಮಾಹಿತಿ ಪಡೆದ ವೇಣೂರು ಪೊಲೀಸರು ಮಾಂಸ ಸಹಿತ ಆರೋಪಿಗಳನ್ನು ವಶಪಡಿಸಿಕೊಂಡ ಘಟನೆ ಕುತ್ಲೂರು ಗ್ರಾಮದಲ್ಲಿ ನಡೆದಿದೆ. ಬಂಧಿತರನ್ನು ಕೇರಳ ನಿವಾಸಿ ಜಿನು ತೋಮಸ್‌ (34) ಮತ್ತು ಕುತ್ಲೂರು ನಿವಾಸಿ ರಂಜಿತ್‌ (31) ಎಂದು ಗುರುತಿಸಲಾಗಿದೆ. ಇವರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗೋ ವಧೆ ಮಾಡಿ ಮಾಂಸ ಮಾಡಿ ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳೊಂದಿಗೆ ಸಾಗಾಟಕ್ಕೆ […]

ಅಕ್ರಮ ಗೋಮಾಂಸ ಸಾಗಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 21. ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರದಂದು ಕಾಟಕೇರಿ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ. ವಿಜೇಶ್ ಮತ್ತು ಶಿವಾನಂದ್ ಎಂಬವರು ಉಡುಪಿಯಿಂದ ಮಡಿಕೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ತಾಲೂಕಿನ ಹಳೆಗೇಟು ಬಳಿ‌ ನಡೆದಿದೆ. ಹಲ್ಲೆಗೊಳಗಾದವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌ಎಂದು ಗುರುತಿಸಲಾಗಿದೆ. ದರ್ಶನ್ ವೈಯಕ್ತಿಕ ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 20. ಶಾಲಾ ಶಿಕ್ಷಕಿಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೇ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್​ ಮೇಲ್ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬ್ಲ್ಯಾಕ್​ ಮೇಲ್ ಮಾಡಿರುವ ಆರೋಪಿಗಳು ಅಸೀಮ್ ಹಾಗೂ ಮಯೂರ್ ಎಂದು ಗುರುತಿಸಲಾಗಿದೆ. ಅಸೀಮ್ ಹಾಗೂ ಮಯೂರ್ ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ

ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳಾ ಇಂಜಿನಿಯರ್ ಗೆ ಲೈಂಗಿಕ ಕಿರುಕುಳ ಆರೋಪ ಹಿರಿಯ ಇಂಜಿನಿಯರ್ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 20. ಜೆಸ್ಕಾಂ ಮಹಿಳಾ ಎಂಜಿನಿಯರ್ ಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಹಿರಿಯ ಇಂಜಿನಿಯರ್ ನ ಅಮಾನತು ಮಾಡಿ ಆದೇಶಿಸಲಾಗಿದೆ. ಆರೋಪಿ ಜೆಸ್ಕಾಂ ಇಇ ಶ್ರೀನಿವಾಸ್ ಅಮಾನತು ಆದವರು. ರಾಯಚೂರಿನಲ್ಲಿ ಜೆಸ್ಕಾಂ ಹಿರಿಯ ಇಂಜಿನಿಯರ್ ಆಗಿರುವ ಶ್ರೀನಿವಾಸ್, ಮಹಿಳಾ ಇಂಜಿನಿಯರ್ ಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಶ್ರೀನಿವಾಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂತ್ರಸ್ತ ಮಹಿಳೆ ಹಾಗೂ ಜೆಸ್ಕಾಂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದರು.

ಮಹಿಳಾ ಇಂಜಿನಿಯರ್ ಗೆ ಲೈಂಗಿಕ ಕಿರುಕುಳ ಆರೋಪ ಹಿರಿಯ ಇಂಜಿನಿಯರ್ ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹೊಳೆನರಸೀಪುರ, ಸೆ. 20. ಮದ್ಯ ಸೇವನೆ ಸಂಬಂಧ ನಡೆದ ಪಂದ್ಯದಲ್ಲಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಸಿಗರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ತಿಮ್ಮೇಗೌಡ ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ ಬಸ್‌ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು ಹಾಗೂ ತಿಮ್ಮೇಗೌಡ ಎಂಬವರು ಅರ್ಧ ಗಂಟೆಯಲ್ಲಿ 90 ಎಂಎಲ್‌ನ 10 ಪ್ಯಾಕೆಟ್‌ ಕುಡಿಯುವುದಾಗಿ ಚಾಲೆಂಜ್‌ ಮಾಡಿದ್ದರು. ಅದರಂತೆ ತಿಮ್ಮೇಗೌಡರು 90 ಎಂಎಲ್‌ನ 10 ಪ್ಯಾಕೆಟ್‌ ಮದ್ಯ ಸೇವಿಸಿದ ಅರ್ಧ ಗಂಟೆ ಬಳಿಕ ರಕ್ತವಾಂತಿ ಮಾಡಿಕೊಂಡು

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಗೆ ಖಾರದ ಪುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 20. ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಕಟಪಾಡಿ ಸಮೀಪ ಸಂಭವಿಸಿದೆ. ಗಾಯಾಳುವನ್ನು ಮೊಹಮ್ಮದ್ ಅಶ್ರಫ್‌ ಎಂದು ಗುರುತಿಸಲಾಗಿದೆ. ಘಟನೆಯ ಕುರಿತಂತೆ ಪತ್ನಿ , ಅತ್ತೆ, ಮಾವ ಹಾಗೂ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಹಾಗೂ ಬಲಕೈ ಸುಟ್ಟು ಹೋಗಿ

ಪತಿಗೆ ಖಾರದ ಪುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಈ ಅಗ್ನಿ ಅನಹುತ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ ಎಂದು ಹೇಳಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸುಮಾರು ಒಂದು ತಾಸಿಗಿಂತಲೂ ಅಧಿಕ ಸಂಚಾರಕ್ಕೆ ಅಡಚಣೆಯಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದಲ್ಲದೇ, ಇದರ ಹಿಂಬದಿಯಿಂದ ಬಂದ ಎರಡು ವಾಹನಗಳು ಮತ್ತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಕೆಟ್ಟು ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು Read More »

ಕರಾವಳಿ, ಕ್ರೈಮ್ ನ್ಯೂಸ್

ಅರಣ್ಯದಿಂದ ಮರ ಸಾಗಾಟ- ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಹಾಸ್ಪರೆ ಭಾಗದಲ್ಲಿ ಮೀಸಲು ಅರಣ್ಯದಿಂದ ಮರವನ್ನು ಕಡಿದು ಸಾಗಿಸುತ್ತಿರುವ ಬಗ್ಗೆ ವರದಿಯಾಗಿದೆ. ಈ ಕುರಿತ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಪೆರಾಜೆ ಮೂಲದ ಪಿಕಪ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಸ್ಥಳ ಮಹಜರು ಮಾಡಲು ತೆರಳಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಅರಣ್ಯದಿಂದ ಮರ ಸಾಗಾಟ- ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top