ಕ್ರೈಮ್ ನ್ಯೂಸ್

ಕಡಬ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಪ್ರಕರಣವೊಂದರಲ್ಲಿ ಅರೋಪಿತನಾಗಿ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಮೂಲತಃ ಬೆಳ್ಳಾರೆ ಸಮೀಪದ ಬಾಳಿಲ ಗ್ರಾಮದ ಮುಪ್ಪೇರಿಯ ನಿವಾಸಿ ಜಗನ್ನಾಥ್ ಎಂದು ಗುರುತಿಸಲಾಗಿದೆ. ಈತ ಕಡಬ ತಾಲೂಕಿನ ಹೊಸ್ಮಠ ಎಂಬಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಳಿಕ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿ ಜಗನ್ನಾಥನನ್ನು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳಲೆ ಎಂಬಲ್ಲಿ ವಶಕ್ಕೆ ಪಡೆಯಲಾಗಿದೆ. ಪುತ್ತೂರು ಗ್ರಾಮಾಂತರ ವೃತ್ತ […]

ಕಡಬ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ಯೋಧನ ಅಪಹರಿಸಿ ಹತ್ಯೆ..!

(ನ್ಯೂಸ್ ಕಡಬ) newskadaba.com ಮಣಿಪುರ, ಸೆ. 18. ದುಷ್ಕರ್ಮಿಗಳು ಭಾರತೀಯ ಸೇನಾ ಯೋಧನನ್ನು ಅಪಹರಿಸಿ ಹತ್ಯೆಗೈದ ಘಟನೆ ಮಣಿಪುರ ರಾಜಧಾನಿ ಇಂಫಾಲ್​ನಿಂದ ವರದಿಯಾಗಿದೆ. ಹುತಾತ್ಮ ಯೋಧನನ್ನು ಇಂಫಾಲ್ ಪಶ್ಚಿಮದ ತರುಂಗ್​ ಮೂಲದ ಸೆರ್ಟೊ ತಂಗ್‌ಥಾಂಗ್ ಕೋಮ್ ಎಂದು ಗುರುತಿಸಲಾಗಿದೆ. ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್‌ನ ಯೋಧ ಕೋಮ್​ರನ್ನು ಕಾಂಗ್‌ಪೋಕ್ಪಿ ಜಿಲ್ಲೆಯ ಲೆಮಾಖೋಂಗ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಧಿಕಾರಿಗಳ ಮಾಹಿತಿ ಪ್ರಕಾರ, ಕೋಮ್ ರಜೆ ಮೇಲೆ ತಮ್ಮ ಮನೆಗೆ ಹೋಗಿದ್ದರು. ಶನಿವಾರದಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು

ಭಾರತೀಯ ಯೋಧನ ಅಪಹರಿಸಿ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಇಲ್ಲಿನ ಮಲ್ಲಮಾರ್‌ ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರದಂದು ಸಂಜೆ ನಡೆದಿದೆ. ಸಮುದ್ರಪಾಲಾದ ವ್ಯಕ್ತಿಯನ್ನು ಬಾಗಲಕೋಟೆ ನಿವಾಸಿ ಮಹಂತೇಶ್‌(29) ಎಂದು ಗುರುತಿಸಲಾಗಿದೆ. ಈತ ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಸ್ನೇಹಿತರ ಜೊತೆಗೆ ವಿಹಾರಕ್ಕೆ ಬಂದಿದ್ದ ಎನ್ನಲಾಗಿದೆ. ಮಹಂತೇಶ್‌ ನನ್ನು ರಕ್ಷಿಸಿ ಹಿಂದೆ ಎಳೆದು ತರುತ್ತಿದ್ದಾಗ ಮತ್ತೆ ಅಲೆಯ ಹೊಡೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದಾನೆ. ಈ ಕುರಿತು

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಕಡಬ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರಕರಣದ ಆರೋಪಿ ಕಡಬ ತಾಲೂಕು ಕೊಣಾಜೆ ಗ್ರಾಮದ ಗುಜ್ಜಟ್ಟೆ ಕದ್ಯ ಭುವನೇಶ್ವರ ಚಂದ್ರ ಎಂಬಾತನನ್ನು ಮೇಲಾಧಿಕಾರಿಗಳ ಆದೇಶದಂತೆ ಕಡಬ ಠಾಣಾ ಕಾನೂನು ಮತ್ತು ಸುವ್ಯವಸ್ಥೆ ಪಿ.ಎಸ್ಐ ಅಭಿನಂದನ್‌ ಮತ್ತು ತನಿಖಾ ಪಿ.ಎಸ್ಐ ಅಕ್ಷಯ್‌ ಡವಗಿ ಅವರ ಮಾರ್ಗದರ್ಶನದಂತೆ ಕಡಬ ಪೊಲೀಸ್‌ ಠಾಣಾ ಸಿಬ್ಬಂದಿಗಳಾದ ಭವಿತ್‌ ಹಾಗೂ ವಿನೋದ್‌ ಅವರು ಮಂಗಳೂರಿನ

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 18. ಹಣವಾಗಿಟ್ಟು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ. ಸ್ಥಳದಿಂದ ಎಂಟು ಮಂದಿಯ ಸಹಿತ ಒಟ್ಟು 2,350 ರೂ. ನಗದು, 4 ಕೋಳಿ, 2 ಕೋಳಿ ಬಾಲುಗಳು, ಒಂದು ಓಮ್ನಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಜಪೆ, ಸೆ. 18. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ(37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಹೊತ್ತಿ ಉರಿದ ಕಾರು – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 17.ನಿಂತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಕುಕ್ಕೆ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸರ್ಪಸಂಸ್ಕಾರ ಯಾಗ ಶಾಲೆ ಬಳಿ ನಡೆದಿದೆ. ಬೆಂಗಳೂರಿನಿಂದ ಸರ್ಪಸಂಸ್ಕಾರಕ್ಕೆಂದು ಬಂದಿದ್ದ ಕುಟುಂಬವೊಂದು ಯಾಗಶಾಲೆಯ ಮುಂದೆ ಕಾರು ನಿಲ್ಲಿಸಿತ್ತು. ಸ್ವಲ್ಪ ಸಮಯದ ಬಳಿಕ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅದನ್ನು ನಂದಿಸಿ 30ಕ್ಕೂ ಹೆಚ್ಚು ವಾಹನಗಳು ಪಕ್ಕದಲ್ಲೇ ನಿಂತಿದ್ದರಿಂದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸುಳ್ಯ: ಹೊತ್ತಿ ಉರಿದ ಕಾರು – ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಳಿ ಫಾರ್ಮ್ ನಲ್ಲಿ ಮಲಗಿದ್ದ ನಾಲ್ವರು ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 17. ಒಂದೇ ಕುಟುಂಬದ ನಾಲ್ವರು ಕೋಳಿ ಫಾರ್ಮ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರದ ಹೊಲೆಯರಹಳ್ಳಿಯಲ್ಲಿ ನಡೆದಿದೆ. ಮೃತರನ್ನು ನೇಪಾಳದ ಮೂಲದ ಕಾಲೆ ಸರೆರಾ, ಉಷಾ, ಲಕ್ಷ್ಮಿಹಾಗೂ ಪೊಲ್‌ ಸರೇರಾ ಎಂದು ತಿಳಿದು ಬಂದಿದೆ. ಕೆಲದ ದಿನಗಳ ಹಿಂದೆಯಷ್ಟೇ ಇವರು ಕೆಲಸಕ್ಕೆ ಸೇರಿಕೊಂಡಿದ್ದರು ಎನ್ನಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸ್‌ ಠಾಣಾ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ಕೋಳಿ ಫಾರ್ಮ್ ನಲ್ಲಿ ಮಲಗಿದ್ದ ನಾಲ್ವರು ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಟೆಲಿಗ್ರಾಂ ನಲ್ಲಿ ಬಂದ ಆನ್‌ಲೈನ್‌ ಪಾರ್ಟ್‌ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್‌ ಟೈಂ ಆನ್‌ಲೈನ್‌ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್‌ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್‌ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top