ಕ್ರೈಮ್ ನ್ಯೂಸ್

ಉಳ್ಳಾಲದ ವ್ಯಕ್ತಿ ವಿಟ್ಲದಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 12. ಉಳ್ಳಾಲದ ವ್ಯಕ್ತಿಯೋರ್ವ ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಎಂದು ಗುರುತಿಸಲಾಗಿದೆ. ರವೀಂದ್ರ ಅವರು ಭಾನುವಾರದಂದು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆಗೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್ […]

ಉಳ್ಳಾಲದ ವ್ಯಕ್ತಿ ವಿಟ್ಲದಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡೋಸಲ್ಪಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12. ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ) ಎಂದು ಗುರುತಿಸಲಾಗಿದೆ. ರಾಜೇಶ್ 2015ರ ಅ. 01ರಂದು ತನ್ನದೇ ಊರಿನ 19ರ ಹರೆಯದ ಎಂಡೋಸಲ್ಫಾನ್ ಪೀಡಿತೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭ ಅತ್ಯಾಚಾರವೆಸಗಿದ್ದರೆಂದು ಆರೋಪಿಸಿ

ಎಂಡೋಸಲ್ಪಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಚಂಡಮಾರುತದಿಂದ ಭಾರೀ ಪ್ರವಾಹ – 2,000 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಲಿಬಿಯಾ, ಸೆ. 12. ಉತ್ತರ ಆಫ್ರಿಕಾದ ಲಿಬಿಯಾದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ. ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ ‘ಡೆರ್ನಾ’ ನಗರದ ಬಳಿ ಜಲಾಶಯಗಳು ಹೆಚ್ಚಾಗಿದ್ದು, ಭಾರೀ ಪ್ರವಾಹ ಉಂಟಾಗಿ ಹೆಚ್ಚಿನ ಸಂಖ್ಯೆಯ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಚಂಡಮಾರುತದಿಂದ ಭಾರೀ ಪ್ರವಾಹ – 2,000 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಸೆ.11. ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳದವರನ್ನು ನಿಸಾರ್ ಎಂದು ಗುರುತಿಸಲಾಗಿದೆ. ನಿಸಾರ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದು, ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 07. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಪೆರಿಯಶಾಂತಿ- ಇಚ್ಲಂಪಾಡಿ ರಸ್ತೆಯ ನಡುಮನೆ ಎಂಬಲ್ಲಿ ಬುಧವಾರದಂದು ಮಧ್ಯಾಹ್ನ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿನ ನಡುವೆ ಇಚ್ಲಂಪಾಡಿ ಗ್ರಾಮದ ನಡುಮನೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಹೆಡ್‌ ಕಾನ್ಸ್ಟೇಬಲ್ ಕುಶಾಲಪ್ಪ ನಾಯ್ಕ, ಕಾನ್‌ಸ್ಟೇಬಲ್ ಪ್ರತಾಪ್‌ರವರು ಭೇಟಿ ನೀಡಿ ಪರಿಶೀಲನೆ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

15ರ ಬಾಲಕನಿಗೆ ಸರ್ಪಕಾಟ – ಎರಡು ತಿಂಗಳ ಅವಧಿಯಲ್ಲಿ 9 ಬಾರಿ ಕಚ್ಚಿದ ನಾಗಪ್ಪ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 30. ಹಾವಿನ ದ್ವೇಷ ಹನ್ನೆರಡು ವರುಷ ಅನ್ನೋ ಮಾತು. ಅದರ ಪ್ರಕಾರ ನಾಗರಹಾವು ತನ್ನ ಸೇಡು ತೀರೋವರೆಗೂ ಬಿಡೋದಿಲ್ಲ ಅಂತಾರೆ. ಇದೇ ರೀತಿಯ ಘಟನೆಯೊಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದು, ಈತನಿಗೆ 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. ಹಾವಿನ ಕಾಟದಿಂದ ಬೇಸತ್ತಿರುವ

15ರ ಬಾಲಕನಿಗೆ ಸರ್ಪಕಾಟ – ಎರಡು ತಿಂಗಳ ಅವಧಿಯಲ್ಲಿ 9 ಬಾರಿ ಕಚ್ಚಿದ ನಾಗಪ್ಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಆ. 30. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಹಮ್ಮದ್‌ ಕುಂಜ್ಞಾ (78) ಎಂದು ಗುರುತಿಸಲಾಗಿದೆ. ಅಸ್ತಮಾ ಮತ್ತು ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೊಸಾಡು ಗ್ರಾಮದ ಮೊವಾಡಿ ಗಾಣದಮಕ್ಕಿಯಲ್ಲಿರುವ ಬಂಧುಗಳ ಮನೆಗೆ ಬಂದಿದ್ದರು. ಸಮೀಪದ ಗೇರು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದೆ.

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಆ. 30. ಶ್ರೀ ನಾರಾಯಣ ಗುರು ಮಂದಿರದ ಕಿಟಿಕಿಯ ಮರದ ಮೂರು ದಳಿಗಳನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಮಂದಿರದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಸುಮಾರು 15,000 ರೂ. ನಗದನ್ನು ಕಳವುಗೈದಿರುವ ಘಟನೆ ಮುದರಂಗಡಿ ಎಂಬಲ್ಲಿ ನಡೆದಿದೆ. ಮಂಗಳವಾರದಂದು ಬೆಳಗ್ಗೆ ಅರ್ಚಕ ಆನಂದ ಪೂಜಾರಿ ಮಂದಿರಕ್ಕೆ ಬಂದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಪಡುಬಿದ್ರಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಆ. 30. ಗಂಧದ ಮರ ಕಳ್ಳತನಕ್ಕೆಂದು ಬಂದಿದ್ದವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತೋರ್ವ ಪರಾರಿಯಾಗಿರುವ ಕುರಿತು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಎಂಬಲ್ಲಿ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದ ಹಿನ್ನೆಲೆ ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಕಳ್ಳರು ರಾತ್ರಿ

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಆಸ್ತಿ ವಿಚಾರವಾಗಿ ಸಹೋದರನೋರ್ವ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಘಟನೆ ಜಿಲ್ಲೆಯ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಶಿವಲಿಂಗೇಗೌಡ ಹಾಗೂ ಪತ್ನಿ ಭಾರತಿ ಎಂದು ಗುರುತಿಸಲಾಗಿದೆ. ಆರೋಪಿ ಸಹೋದರ ಹನುಮಂತೇಗೌಡ ಎಂಬಾತ ಕೊಲೆ ಕೃತ್ಯವೆಸಗಿದ್ದಾನೆ. ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಶಿವಲಿಂಗೇಗೌಡ ಮತ್ತು ಭಾರತಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿ ಹನುಮಂತೇಗೌಡ, ಅಣ್ಣ ಅತ್ತಿಗೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top