ಕ್ರೈಮ್ ನ್ಯೂಸ್

ಬೇಕರಿ ಮಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 22. ಬೇಕರಿ ಅಂಗಡಿ ಮಾಲೀಕ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಹಾಸನ ಜಿಲ್ಲೆಯ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್‌ ಎಂದು ಗುರುತಿಸಲಾಗಿದೆ. ಮಾಡಿಕೊಂಡವರು. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶಾಂತಿಬಾಗ್‌ ಬಳಿಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಹಾಸನದಿಂದ 12 ವರ್ಷಗಳ ಹಿಂದೆ ಬಂದಿದ್ದ ರುದ್ರೇಶ್‌ ಕುತ್ತಾರು […]

ಬೇಕರಿ ಮಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 22. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿ ಅಹ್ಮದ್ ಸಹದ್‌ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಪೆದಮಲೆಯ ಸಮದ್ ಹಾಜಿ ಹಾಗೂ ರೇಷ್ಮಾ ದಂಪತಿಯ ಪುತ್ರನಾದ ಈತ 10 ನೇ ತರಗತಿ ಕಲಿಯುತ್ತಿದ್ದು, ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಮೃತನ ಸ್ಮರಣಾರ್ಥ ಆ. 22ರಂದು ಇಂಡಿಯನ್ ಸ್ಕೂಲ್ ಗೆ ರಜೆ ನೀಡಲಾಗಿದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಎಂದಿನಂತೆ ಶಾಲೆಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಂಜೆ ವಾಪಾಸ್ಸು ಬಂದಿರಲಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲೂ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆ ಹಾಸ್ಟೆಲ್ ಮೇಲ್ವಿಚಾರಕಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 22. ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಜನ್ ಎಂದು ಗುರುತಿಸಲಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಸ್ವತಃ ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು ಇಂದು

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದಿವ್ಯಾ ಎಂದು ಗುರುತಿಸಲಾಗಿದೆ. ಆದಿತ್ಯವಾರದಂದು ರಜೆ ಹಿನ್ನೆಲೆ ಪತಿ ಜಯರಾಮ ಮತ್ತು ಮಕ್ಕಳು ಬೆಳಂದೂರಿನಲ್ಲಿರುವ ತಂಗಿಯ ಮನೆಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗುವಾಗ ಮನೆಯಲ್ಲಿ ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ತಾಯಿ ನೀಡಿದ

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಬಾಲಕರ ವಿದ್ಯಾರ್ಥಿ ನಿಲಯದಿಂದ ಶಾಲೆಗೆಂದು ತೆರಳಿದ್ದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ. ಇವರಿಬ್ಬರು ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಟಿಎಂ ಕಳ್ಳತನಕ್ಕೆ ಯತ್ನ- ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಸುರತ್ಕಲ್‌ನಲ್ಲಿ ಎಸ್‌ಕಾವೇಟರ್ ಬಳಸಿ ಎಟಿಎಂಗೆ ಕನ್ನ ಹಾಕಲು ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ಬಂಧಿತರನ್ನು ಶಿವಮೊಗ್ಗ ಮೂಲದ ದೇವರಾಜ್, ಭರತ್ ಎಚ್, ನಾಗರಾಜ ನಾಯ್ಕ್ ಮತ್ತು ಧನರಾಜ್ ನಾಯ್ಕ್ ಎಂದು ಗುರುತಿಸಲಾಗಿದೆ. ಬಂಧಿತ ನಾಲ್ವರು ಆರೋಪಿಗಳಿಂದ 50 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲ್‌ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡು, ಅವರ ವಿರುದ್ಧ ಐಪಿಸಿ ಸೆಕ್ಷನ್

ಎಟಿಎಂ ಕಳ್ಳತನಕ್ಕೆ ಯತ್ನ- ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚಿಸಲೆತ್ನಿಸುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಯನ್ನು ಉರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಬೆನೆಡಿಕ್ಟ್ ಸಾಬೂ (25) ಎಂದು ಗುರುತಿಸಲಾಗಿದೆ. ಈತನಿಂದ ಕೇರಳದ ‘ರಾ’ ಅಧಿಕಾರಿ ಮತ್ತು ಅಗ್ರಿಕಲ್ಚರ್ ಹಾಗೂ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟೆಂಟ್‌ಮೆಂಟ್ ಎಂಬ 380 ಐಡಿ ಕಾರ್ಡ್ ಗಳನ್ನು ಹಾಗೂ ಒಂದು ಜೊತೆ ಪಿಎಸ್ಸೈ ಪೊಲೀಸ್ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್ ಟಾಪ್

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 21. ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನೀಲೇಶ್ವರದ ತೈಕಡಪ್ಪುರ ಎಂಬಲ್ಲಿ ರವಿವಾರದಂದು ಸಂಜೆ ನಡೆದಿದೆ. ಮೃತಪಟ್ಟ ನೌಕರರನ್ನು ರಾಜೇಶ್ ಮತ್ತು ಸನೀಶ್ ಎಂದು ಗುರುತಿಸಲಾಗಿದೆ. ಮೀನು ಹಿಡಿಯುತ್ತಿದ್ದ ಸಂದರ್ಭ ರಾಜೇಶ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದು, ಉಳಿದವರು ಬೊಬ್ಬೆ ಹಾಕಿದಾಗ ಅಲ್ಲೇ ಇದ್ದ ಸನೀಶ್ ಸಮುದ್ರಕ್ಕೆ ಹಾರಿ ರಾಜೇಶ್ ನನ್ನು ರಕ್ಷಿಸಲೆತ್ನಿಸಿದ್ದು, ಈ ಸಂದರ್ಭದಲ್ಲಿ ಇಬ್ಬರು ಕೂಡಾ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕರಾವಳಿ

ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಗೆಳತಿಯ ಸಾವಿನಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ನೀಲಾವರ ಬಾವಲಿಕುದ್ರುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾವಲಿಕುದ್ರು ನಿವಾಸಿ ಸುಜಿತ್ ಡೇವಿಡ್ ಡಿಸೋಜಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ 2 ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಸುಜಿತ್ ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು. ಇದೇ ವಿಚಾರವಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದ ಸುಜಿತ್, ಭಾನುವಾರದಂದು ಮನೆಯಲ್ಲೇ ನೇಣು

ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top