ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ […]

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ತೀರ ಪ್ರದೇಶದಿಂದ 5 ನಾಟಿಕಲ್ ಮೈಲುಗಳ ದೂರಕ್ಕೆ ಹೋದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ.  ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಪಲ್ಟಿಯಾಗಿದ್ದು, ಇದರಲ್ಲಿ 9 ಮಂದಿ ಮೀನುಗಾರರು ಇದ್ದರು. ಆದರೆ, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ದೋಣಿಯಲ್ಲಿದ್ದ ಮೀನುಗಾರರೊಬ್ಬರು

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು !

(ನ್ಯೂಸ್ ಕಡಬ)newskadaba.com ಚನ್ನಗಿರಿ, ಆ.05. ರೈತರು ಅರ್ಥಿಕವಾಗಿ ಸದೃಢರಾಗಿದ್ದರೂ ಗಾಂಜಾದಂತಹ ಮಾದಕ ವಸ್ತುಗಳ ಘಾಟು ಅಲಲ್ಲಿ ತಾಗಿದ್ದು, ಮಾದಕ ದ್ರವ್ಯಗಳ ಪೆಡ್ಲರ್‌ಗಳು ಸದ್ದಿಲ್ಲದೇ ತಮ್ಮ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಯುವ ಪೀಳಿಗೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದದ ಸಂಗತಿಯಾಗಿದೆ. ಮಾದಕ ವಸ್ತುಗಳನ್ನು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ನಿಯಂತ್ರಣ ಮಾಡುವಲ್ಲಿ ಮತ್ತು ಜಾಗೃತಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಚನ್ನಗಿರಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು ! Read More »

ಕ್ರೈಮ್ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕಿ ಮೇಲೆ ಹೇಯ ಕೃತ್ಯ ಎಸಗಿದ 65 ವರ್ಷದ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಗಲ್ಲಿಗೆ ಏರಿಸಬೇಕಾಗಿ ಯತ್ನಾಳ್ ರವರು ಆಗ್ರಹಿಸಿದ್ದಾರೆ. ಶಾಲೆ ಸಂಸ್ಥಾಪಕನೇ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ತನ್ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಬೆಳಗ್ಗೆ 11.30ರ ಸುಮಾರಿಗೆ ತನ್ನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋರ್ಟ್ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಆ.05. ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ. ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯುವಾಗ ಹೋಟೆಲ್ ಬಳಿ ಪೊಲೀಸರನ್ನು

ಕೋರ್ಟ್ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ – ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.05. ದೇವಸ್ಥಾನವೊಂದರ ಅರ್ಚಕ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿರುವ ಕೃಷ್ಣ ಕೆ.ಬಿ.ಅವರ ಸಹೋದರ ಕೆ.ವಿ.ಜಗನ್ನಾಥ (43)ಅವರು ನಾಪತ್ತೆಯಾದವರು ಎಂದು ಗುರುತಿಸಲಾಗಿದೆ. ಮನೆಗೂ ಹೋಗದೆ ಇದ್ದು ಮನೆಯವರಲ್ಲಿ ವಿಚಾರಿಸಿದಾಗ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆಯೂ ಮನೆಯಲ್ಲಿ ಹೇಳದೆ ಹೋಗುವ ಅಭ್ಯಾಸವಾಗಿದ್ದು, ಎಲ್ಲಿಯಾದರೂ ಹೋಗಿ ದೇವರ ಧ್ಯಾನ ಮಾಡುತ್ತಿದ್ದರು. ಅವಿವಾಹಿತರಾಗಿರುವ ಅವರು ಬಿಎಸ್‌ಸಿ, ಎಂಬಿಎ ಪಧವೀಧರರಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು,

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೈಲಹೊಂಗಲ, ಆ.05. ಮಲಪ್ರಭಾ ನದಿಯ ದಡದಲ್ಲಿ ರೈತರು ಅಳವಡಿಸಿದ್ದ ವಿದ್ಯುತ್‌ ಪಂಪ್ ಸೆಟ್‌ ಗಳ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಪಂಪ್‌ಸೆಟ್‌ ಹಾಗೂ ವಾಹನ ಸೇರಿ ₹5ಲಕ್ಷ ಮೌಲ್ಯದ ವಸ್ತುಗಳನ್ನೂ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಮಲಪ್ರಭಾ ನದಿಯ ದಂಡೆಯ ಜಾಕ್‌ವೆಲ್ ಹತ್ತಿರ ಹೊಸೂರು ಗ್ರಾಮದ ರೈತರು ಈ ಪಂಪ್‌ ಸೆಟ್‌ಗಳನ್ನು ಅಳವಡಿಸಿದ್ದರು. ಈಚೆಗೆ ಕಳ್ಳತನ ಮಾಡಿದ ಬಗ್ಗೆ ಮುರಗೋಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಮುರಗೋಡ ಪೊಲೀಸರು

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಸಿದ್ದಾಪುರ, ಆ.05. ಕದ್ದು ತಂದ ಎರಡು ಗಂಡು ಕರುಗಳನ್ನು ಪಿಕಪ್‌ ವಾಹನದಲ್ಲಿ ಹಾಕಿಕೊಂಡು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಗೋಪಾಲ ಪೂಜಾರಿ ಮತ್ತು ಭೋಜ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ದೆಗೆ ಮೋಸ; ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadaba.com ಪಾವಗಡ, ಆ.05. ಇಲ್ಲ ಸಲ್ಲದ ಸಬೂಬು ಹೇಳಿ ಚಿನ್ನದ ಆಭರಣ ಪಡೆದು ಕಳ್ಳರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಹೊರ ವಲಯದಲ್ಲಿ ಕುರಿ ಮೇಯಿಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ನಿಮ್ಮ ಮಗ ಸಾಲ ಪಾವತಿಸಿಲ್ಲ. ಈ ಕೂಡಲೇ ಹಣ ಕೊಡಬೇಕು, ಇಲ್ಲವಾದಲ್ಲಿ ಚಿನ್ನದ ಆಭರಣ ನೀಡಿ ಎಂದಿದ್ದಾರೆ. ನಿಮ್ಮ ಮಗ ಮಾತನಾಡುತ್ತಿದ್ದಾನೆ ಮಾತನಾಡಿ, ಎಂದು ವೃದ್ಧೆಗೆ ಮೊಬೈಲ್ ನೀಡಿದ್ದಾರೆ. ವೃದ್ಧೆಯ ಮಗನ ಧ್ವನಿಯಲ್ಲಿ ಮಾತನಾಡಿ 6 ಗ್ರಾಂ ತೂಕದ ಚಿನ್ನದ ಕಿವಿಯೋಲೆ, ಚೈನ್

ವೃದ್ದೆಗೆ ಮೋಸ; ಚಿನ್ನಾಭರಣ ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಟೈಲ್ಸ್‌ ಆಯಂಡ್‌ ಗ್ರಾನೈಟ್‌ ಅಂಗಡಿಯಲ್ಲಿ ನಗದು ಹಣ ಕಳವಾಗಿದೆ ಎಂದು ತಿಳಿದುಬಂದಿದೆ. ಅಂಗಡಿಯನ್ನು ಮುಚ್ಚಿ, ಮರುದಿನ ಬೆಳಗ್ಗೆ 9 ಗಂಟೆಗೆ ಬಂದು ತೆರೆದು ನೋಡಿದಾಗ ಕಳ್ಳರು ಯಾವುದೋ ಆಯುಧ ಉಪಯೋಗಿಸಿ ಎರಡು ಡ್ರಾವರ್‌ಗಳಲ್ಲಿದ್ದ ಒಟ್ಟು 9,700 ರೂ. ಕಳವು ಮಾಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.  

ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top