ಕ್ರೈಮ್ ನ್ಯೂಸ್

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಬಜಪೆ, ಆ.03. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ತತ್ ಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಅಬ್ದುಲ್ ಅಝೀಜ್(34) ನ್ನು ವಶಕ್ಕೆ […]

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸಿಯೂಟದಲ್ಲಿ ಕೊಳೆತ ತರಕಾರಿ ! – ಮುಖ್ಯಶಿಕ್ಷಕಿಗೆ ನೋಟಿಸ್

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.03. ಶಾಲೆಯ ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಸಿದ ಹಿನ್ನೆಲೆಯಲ್ಲಿ ಸರಕಾರಿ ಪ್ರಾಥಮಿಕ ಮಾದರಿ ಶಾಲೆ ಮುಖ್ಯಶಿಕ್ಷಕಿಯೋರ್ವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ ಎನ್ನಲಾಗಿದೆ. ಶಾಲೆಯಲ್ಲಿ ಕೊಳೆತ ತರಕಾರಿ ಬಳಸಿ ಬಿಸಿಯೂಟ ಬಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್‌ ಹಾಗೂ ಅಕ್ಷರ ದಾಸೋಹ ತಂಡ ಶಾಲೆಗೆ ಭೇಟಿ ನೀಡಿ ಚರ್ಚಿಸಿದರು ಎನ್ನಲಾಗಿದೆ.

ಬಿಸಿಯೂಟದಲ್ಲಿ ಕೊಳೆತ ತರಕಾರಿ ! – ಮುಖ್ಯಶಿಕ್ಷಕಿಗೆ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.03. ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಕಾರವಾರ, ಆ.03. ಕರ್ನಾಟಕ ಪಬ್ಲಿಕ್ ಶಾಲೆಯ ಸಹಾಯಕಿ ಆನಂದಿ ಎಂಬ ಮಹಿಳೆಗೆ ಹಾವು ಕಡಿದ ಘಟನೆ ಕಾರವಾರದಲ್ಲಿ ವರದಿ ತಿಳಿಸಿದೆ. ಶಾಲಾ ಸಮಯದಲ್ಲಿ ನೀರಿನ ಪಂಪ್ ಸ್ಟಾರ್ಟ್ ಮಾಡಲು ತೆರಳುವ ವೇಳೆ ಆನಂದಿ ಅವರಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥರಾದ ಅವರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದರು ಎಂದು ತಿಳಿದುಬಂದಿದೆ. ಇವರ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಆ.03. ಬೆಂಗಳೂರು ಗ್ರಾಮಾಂತರದ ನಿವಾಸಿ ರಾಜಶೇಖರ್ ಎಂಬವರ ಪತ್ನಿ ಹರ್ಷಿತ(28) ಹಾಗೂ ಪುತ್ರ ಭಗತ್(3) ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಜಶೇಖರ್, ಪತ್ನಿ, ಮಗ, ಹಾಗೂ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಅಧೀ ಸುಬ್ರಮಣ್ಯಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.                                           

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಪುತ್ತೂರು, ಆ.03. 9 ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಕೃಷ್ಣಪ್ರಸಾದ್ ಗುಪ್ತ ಎಂಬವರ ಮಗ ಸತೀಶ್ ಗುಪ್ತ(33) ಎಂದು ಗುರುತಿಸಲಾಗಿದೆ. ಈತ ವಿಚಾರಣೆಗೆ ಹಾಜರಾಗದೇ ಇದ್ದ, ಆತನ ವಿರುದ್ದ ನ್ಯಾಯಾಲಯ ವಾರಂಟ್ ಜಾರಿ ಮಾಡಲಾಗಿತ್ತು ಎಂದು ವರದಿಯಾಗಿದೆ.

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲಡ್ಕ ಡಾ| ಪ್ರಭಾಕರ್ ಹೆಸರಲ್ಲಿ ನಕಲಿ ಖಾತೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.03. RSS ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಹೆಸರಲ್ಲಿ ನಕಲಿ ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಪೋಸ್ಟ್ ಮಾಡಿದ  ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಲ್ಲಡ್ಕ ಡಾ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ, ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು

ಕಲ್ಲಡ್ಕ ಡಾ| ಪ್ರಭಾಕರ್ ಹೆಸರಲ್ಲಿ ನಕಲಿ ಖಾತೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ವಿದ್ಯಾರ್ಥಿಗೆ ಸೀನಿಯರ್ ವಿದ್ಯಾರ್ಥಿಗಳ ತಂಡದಿಂದ ಹಲ್ಲೆ..!

(ನ್ಯೂಸ್ ಕಡಬ)newskadaba.com ಬೇಕೂರು, ಆ.03. ಶಾಲಾ ವಿದ್ಯಾರ್ಥಿಯ ಮೇಲೆ ಸೀನಿಯರ್ ವಿದ್ಯಾರ್ಥಿಗಳ ತಂಡವೊಂದು ರ‍್ಯಾಗಿಂಗ್ ನಡೆಸಿದ ಆರೋಪ ಕೇಳಿಬಂದಿದೆ. ಗಾಯಗೊಂಡ ಪ್ಲಸ್ ವನ್‌ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ ಶಾಲೆ ಬಿಟ್ಟ ಬಳಿಕ ಸಮೀಪದ ಬಸ್‌ ತಂಗುದಾಣದಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಅದೇ ಶಾಲೆಯ ಪ್ಲಸ್‌ ಟು ವಿದ್ಯಾರ್ಥಿಗಳ ತಂಡವೊಂದು ಶೂ ಧರಿಸಿರುವುದಕ್ಕೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗೆ ಹಲ್ಲೆಯಿಂದ ಕಿವಿ ತಮ್ಮಟೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಶಾಲಾ ವಿದ್ಯಾರ್ಥಿಗೆ ಸೀನಿಯರ್ ವಿದ್ಯಾರ್ಥಿಗಳ ತಂಡದಿಂದ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ಲೈನ್ ನಲ್ಲಿ 5.90 ಲಕ್ಷ ವಂಚನೆ..! – ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಯನೈಟೆಡ್ ಕಿಂಗ್‌ಡಂನಿಂದ ಉಡುಗೊರೆ ಕಳುಹಿಸುವುದಾಗಿ ಹೇಳಿ ಸುಮಾರು 5.90 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ ಆ್ಯಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಡಾ. ಫ್ರಾಕ್ಲಿನ್ ಪ್ಯಾಟ್ರಿಕ್ ಎಂದು ಪರಿಚಯಿಸಿಕೊಂಡು ಯುನೈಟೆಡ್ಕಿಂ ಗ್‌ಡಮ್‌ನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದು, ಕೆಲವು ದಿನಗಳ ಬಳಿಕ ಆತ ತನ್ನ ಮಗಳ ಬರ್ತ್‌ಡೇಗೆ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ್ದ

ಆನ್ಲೈನ್ ನಲ್ಲಿ 5.90 ಲಕ್ಷ ವಂಚನೆ..! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಣಿಕೆ ಡಬ್ಬಿಯನ್ನೇ ಕಳ್ಳತನಗೈದ ಖದೀಮರು….!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೋಟ್ಟೋದ ಕಾಣಿಕೆ ಡಬ್ಬಿಯನ್ನು ಕಳ್ಳರು ಕಳ್ಳತನಗೈದಿರುವ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಚರ್ಚ್ ನ ಮುಂಭಾಗದಲ್ಲಿ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ. ಕಾಣಿಕೆ ಡಬ್ಬಿಗೆ ಹಾನಿಯಾಗಿದೆ. ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವ ರಸ್ತೆ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.  

ಕಾಣಿಕೆ ಡಬ್ಬಿಯನ್ನೇ ಕಳ್ಳತನಗೈದ ಖದೀಮರು….! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top