ಕ್ರೈಮ್ ನ್ಯೂಸ್

ಮಾದಕ ವಸ್ತು ಎಂಡಿಎಂಎ ಮಾರಾಟ….! – ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಡ್ರಗ್ಸ್ ಮುಕ್ತ ಮಂಗಳೂರು ನಗರ ನಿರ್ಮಿಸುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಸಜಿಪ ಉಳ್ಳಾಲದ ಹಫೀಝ್ ಯಾನೆ ಅಪ್ಪಿ(35), ಸಜಿಪ ಮುನ್ನೂರಿನ ಅಮೀರ್ ಯಾನೆ ಅಮ್ಮಿ(34) ಎಂದು ಗುರುತಿಸಲಾಗಿದೆ. ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಸರದಲ್ಲಿ ಕಾರಿನಲ್ಲಿ ಮೂವರು ಮಾದಕ ವಸ್ತುವಾದ ಎಂಡಿಎಂಎ ಯನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ […]

ಮಾದಕ ವಸ್ತು ಎಂಡಿಎಂಎ ಮಾರಾಟ….! – ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಕದ್ರಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕುಲಶೇಖರದ ಕಿರಣ್ ಎಂಟರ್‌ಪ್ರೈಸಸ್ ಕಟ್ಟಡದ ಬಳಿ ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಶಿವನಗರದ ದೀಪಕ್ (27) ಎಂಬುದಾಗಿ ತಿಳಿದು ಬಂದಿದೆ. ಈತ ಪೊಲೀಸರು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡದ ಕಾರಣ ಕೃತ್ಯ ನಡೆಸಲು ಹೊಂಚು ಹಾಕುತ್ತಿರುವ ಬಗ್ಗೆ ಬಲವಾದ ಸಂಶಯ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.! Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.03. ನೇತ್ರಾವತಿ ನದಿಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ. ಇಲ್ಲಿನ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50ರಿಂದ 55 ವರ್ಷದ ಮಹಿಳೆಗೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 142 ಸೆಂ. ಮೀ. ಎತ್ತರವಿದ್ದು, ಕೆಂಪು ಬಣ್ಣದ ರವಿಕೆ ಹಾಗೂ ಹಸಿರು ಬಣ್ಣದ ಬಟ್ಟೆ ತೊಟ್ಟಿರುತ್ತಾರೆ. ಮೂಗಲ್ಲಿ ಮೂಗುತಿ ಹಾಗೂ ಬಲ ಕೈಯಲ್ಲಿ ಗುಲಾಬಿ ಬಣ್ಣದ ಗಾಜಿನ ಬಳೆಯೊಂದಿದೆ. ಆದ್ದರಿಂದ ಇವರ ಬಗ್ಗೆ ತಿಳಿದವರು

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಮೋದಿ ಸ್ಕೀಮ್ ನವರು ಎಂದು ನಂಬಿಸಿ ಮನೆಗೆ ಬಂದ ಅಪರಿಚಿತನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಪುಳಿಮರಡ್ಕ ನಿವಾಸಿ ಲಲಿತಾ ಎಂಬವರು, ಮನೆಯಿಂದ ಕಾಣಿಯೂರಿನತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿ ಪರಿಚಯದವನಂತೆ ನಟಿಸಿ ಮಹಿಳೆಯನ್ನು ಮಾತನಾಡಿಸಿದ್ದು, ‘ನಾವು ಬಡವರಿಗೆ ಬ್ಯಾಂಕಿನ ಕಡೆಯಿಂದ ಹಣ ಡಬಲ್ ಮಾಡಿಕೊಡುವ ಮೋದಿ

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಆ.02. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿದ್ದು, ಇದೀಗ ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಪ್ರಾಜೆಕ್ಟ್ ಚೀತಾ ಎಂದು ಕರೆಯಲ್ಪಡುವ ಮಹತ್ವಾಕಾಂಕ್ಷೆಯ ಉಪಕ್ರಮದ ಭಾಗವಾಗಿ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ 20 ಚಿರತೆಗಳನ್ನು ಆಮದು ಮಾಡಿಕೊಳ್ಳಲಾದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯ ಸಾವಿನ ಸರಣಿಯಲ್ಲಿ ಇದು ಕೂಡ ಒಂದು. ಸುಮಾರು ಏಳು ದಶಕಗಳ ಹಿಂದೆ ದೇಶದಲ್ಲಿ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರತಿಸಲಾಗಿದೆ. ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕನಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು ಎನ್ನಲಾಗಿದೆ.

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಕಾರವಾರ, ಆ.02. ಮೊಬೈಲ್ ಚಾರ್ಜರ್‌ ನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8 ತಿಂಗಳ ಮಗು ಸಾನಿಧ್ಯ ಬಲಿಯಾದ ಕಂದಮ್ಮ ಎಂದು ತಿಳಿದುಬಂದಿದೆ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ ಅನ್ನು ಆಫ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಮೃತ ಬಾಲಕಿಯನ್ನು ಕೃತಿಕಾ(3)ಎಂದು ಗುರುತಿಸಲಾಗಿದೆ. ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.  

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಆ.02. ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top