ಕ್ರೈಮ್ ನ್ಯೂಸ್

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ. ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ಸಹಕಾರದಿಂದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.  

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಸಚಿವ ನಿವಾಸಕ್ಕೆಮುತ್ತಿಗೆ ಹಾಕಿದ ಯುವಮೋರ್ಚಾ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 27. ಡಿಜೆ ಹಳ್ಳಿ ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಈಗಾಗಲೇ ಸಲ್ಲಿಸಲಾಗಿರುವ  ಮೊಕದ್ದಮೆಗಳನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ವಿರೋಧಿಸಿ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಇಂದು ಬೆಳಗ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಕುರಿತು ವರದಿಯಾಗಿದೆ. ಸದಾಶಿವ ನಗರದಲ್ಲಿರುವ ಜಿ.ಪರಮೇಶ್ವರ್ ಅವರ ಖಾಸಗಿ ನಿವಾಸಕ್ಕೆ ಮೆರವಣಿಗೆ ಮೂಲಕ ದಿಢೀರ್ ಆಗಮಿಸಿದ ಕಾರ್ಯಕರ್ತರು, ಮೊದಲಿಗೆ ಸಾಮಾನ್ಯ ವಿದ್ಯಾರ್ಥಿಗಳಂತೆ ನಡೆದುಕೊಂಡು ಬಂದ ಕಾರ್ಯಕರ್ತರು ಇದ್ದಕ್ಕಿದ್ದಂತೆ ಬಿಜೆಪಿ ಬಾವುಟವಿರುವ ಶಲ್ಯಗಳನ್ನು

ಗೃಹಸಚಿವ ನಿವಾಸಕ್ಕೆಮುತ್ತಿಗೆ ಹಾಕಿದ ಯುವಮೋರ್ಚಾ ಕಾರ್ಯಕರ್ತರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ವಿಷ ಹಾಕಿದ ವ್ಯಕ್ತಿ – ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಪೂರ್ವ ದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿ ಡಾಬರ್ ಮ್ಯಾನ್ ಸಾಕುವ ನಾಯಿಯನ್ನು ವಿಷ ಹಾಕಿ ಕೊಂದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಕುರಿತಾಗಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ ಕ್ರಾಸ್ನಲ್ಲಿದ್ದ ವ್ಯಕ್ತಿಯೊಬ್ಬರ 2ವರ್ಷದ ಡಾಬರ್ ನಾಯಿ ಸಾಕುತ್ತಿದ್ದರು. ನೆರೆಯನೆಯ ಭೀಮಯ್ಯ ದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ವಿಷ ಪದಾರ್ಥ ಹಾಕಿದ್ದಾರೆ ಎಂದು ತಿಳಿಸಲಾಗಿದೆ.

ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ವಿಷ ಹಾಕಿದ ವ್ಯಕ್ತಿ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಹಳ್ಳಕ್ಕೆ ಕೆಮಿಕಲ್ ಮಿಶ್ರಿತ ನೀರು ಬಿಡಲು ಯತ್ನ – ಟ್ಯಾಂಕರ್ ಸಮೇತ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.27. ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿದ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಈ ಹಳ್ಳಕ್ಕೆ ಪ್ರತಿ ದಿನ ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಹರಿಬಿಡುತ್ತಿದ್ದು, ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಹಳ್ಳಕ್ಕೆ ಕೆಮಿಕಲ್ ಮಿಶ್ರಿತ ನೀರು ಬಿಡಲು ಯತ್ನ – ಟ್ಯಾಂಕರ್ ಸಮೇತ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿವಾಹಿತ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐಡಿ ಕೇಳಿದ್ದಕ್ಕೆ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ದಬಾಯಿಸಿದ ಯುವತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಬನಶಂಕರಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ನಲ್ಲಿ ಟಿಕೇಟ್ ತೆಗೆದುಕೊಳ್ಳಿ ಎಂದಿದ್ದಕ್ಕೆ ಯುವತಿ ಕಂಡಕ್ಟರ್ ಜೊತೆ ಜಗಳಕ್ಕಿಳಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಯುವತಿ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳಿಕೊಂಡಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿ ಕಂಡಕ್ಷರ್ ಬಳಿ ಜಗಳವಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ ಬಳಿ ಸರ್ಕಾರದ ಐಡಿ ಕಾರ್ಡ್ ಇದ್ದು, ಏನ್ ಮಾಡ್ತಿಯಾ ಮಾಡ್ಕೋ ಎಂದು ದಬಾಯಿಸಿದ್ದಾಳೆ ಎನ್ನಲಾಗಿದೆ. ಗುರುತಿನ ಚೀಟಿ ತೋರಿಸಿ ಎಂದಿದ್ದಕ್ಕೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾಳೆ.  

ಐಡಿ ಕೇಳಿದ್ದಕ್ಕೆ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ದಬಾಯಿಸಿದ ಯುವತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದ್ದು, ಕುಳಾಯಿಯ ಪೃಥ್ವಿರಾಜ್‌ (33) ಶಿಕ್ಷೆಗೊಳಗಾದವ ಎಂದು ತಿಳಿದುಬಂದಿದೆ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ತ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.27. ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ನೀಲೇಶ್ವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸತತ ಕೆಮ್ಮು ಕಂಡು ಬಂದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ಯೋಗ ಕ್ಷೇಮ ವಿಚಾರಿಸಿದರು ಎನ್ನಲಾಗಿದೆ.

ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ತ – ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಜು.27. ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಹರಣ- ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಉತ್ತರ ಬಂಗಾಳ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಐದು ಮಂದಿ ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೈಂಗಿಕ ಕಿರುಕುಳದ ವೇಳೆ ಬಾಲಕಿಯ ಮೆದುಳಿಗೆ ಸಾಕಷ್ಟು ಆಮ್ಲಜನಕ ಪೂರೈಕೆಯಾಗದೇ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾಗಿ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.

ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಂದೇ ಭಾರತ್​ ರೈಲಿ​ಗೆ ಕಲ್ಲೆಸೆದ ಕಿಡಿಗೇಡಿಗಳು – ಕಿಟಕಿ ಗಾಜುಗಳಿಗೆ ಹಾನಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು.27. ಆಗ್ರಾ ರೈಲ್ವೇ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿ​ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ರೈಲು ಕೋಚ್‌ನ ಗಾಜುಗಳು ಒಡೆದಿದ್ದು, ರೈಲ್ವೇ ಮೂಲಗಳು ನೀಡಿದ ಮಾಹಿತಿ ಪ್ರಕಾರ, ಆಗ್ರಾದ ಮಾನಿಯಾ ಮತ್ತು ಜಜೌ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದಾಗ ಕಲ್ಲು ತೂರಲಾಗಿದೆ. ಸಿ-7 ಕೋಚ್‌ನ ಸೀಟ್ ಸಂಖ್ಯೆ 13-14ರ ಕಿಟಕಿ ಗಾಜುಗಳು ಒಡೆದಿವೆ. ರೈಲ್ವೇ ಸಿಬ್ಬಂದಿಯ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ

ವಂದೇ ಭಾರತ್​ ರೈಲಿ​ಗೆ ಕಲ್ಲೆಸೆದ ಕಿಡಿಗೇಡಿಗಳು – ಕಿಟಕಿ ಗಾಜುಗಳಿಗೆ ಹಾನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top