ಕ್ರೈಮ್ ನ್ಯೂಸ್

ಸಿಮೆಂಟ್ ಸಾಗಾಟದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ನಾಯಿಯ ಜೀವ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಸಾಗಾಟದ ಲಾರಿ ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಕೊಟ್ಟಾರಿ ಕಟ್ಟೆ ಎಂಬಲ್ಲಿ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಕಲ್ಲಡ್ಕದಿಂದ ಪೆರ್ಲ ಕಡೆ ಸಿಮೆಂಟ್ ಸಾಗಾಟದ ಲಾರಿ ನಾಯಿಯೊಂದಕ್ಕೆ ಢಿಕ್ಕಿ ಯಾಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಘಟನಾ ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು […]

ಸಿಮೆಂಟ್ ಸಾಗಾಟದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು,

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸೆಕೆಂಡ್ ಹ್ಯಾಂಡ್ ಶೋರೂಂ ನಿಂದ ಕಾರು ಕಳವು ಪ್ರಕರಣ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 25. ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಮಳಿಗೆಯಿಂದ ಎರಡು ಕಾರು, ಮೊಬೈಲ್ ಹಾಗೂ ಪ್ರಿಂಟರ್ ಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಕಿನ್ನಿಪದವು ನಿವಾಸಿ ಮುಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 15.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸಲಕರಣೆಗಳನ್ನು ವಶಪಡಿಸಲಾಗಿದೆ. ಜುಲೈ 12ರಂದು ರಾತ್ರಿ ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಕಾರು ಮಾರ್ಟ್ ನಿಂದ ದ್ವಿಚಕ್ರ ವಾಹನದಲ್ಲಿ

ಸೆಕೆಂಡ್ ಹ್ಯಾಂಡ್ ಶೋರೂಂ ನಿಂದ ಕಾರು ಕಳವು ಪ್ರಕರಣ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಕೇರಳದ ತ್ರಿಶೂರ್ ನಲ್ಲಿ ಅಜ್ಜ- ಅಜ್ಜಿಯ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು, ಚಿನ್ನಾಭರಣ ಮಾರಾಟ ಮಾಡುತ್ತಿದ್ದ ವೇಳೆ ಮಂಗಳೂರಿನಲ್ಲಿ ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರ್ ನಿವಾಸಿ ಅಹಮ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23ರಂದು ಅಜ್ಜ ಮತ್ತು ಅಜ್ಜಿಯನ್ನು ಕೊಲೆಮಾಡಿ ಅವರಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರದಂದು ನಗರದ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಾಸ್ಪದವಾಗಿ

ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಲೇಜಿನ ಫೀಸ್ ಹಣದೊಂದಿಗೆ ಸಹಾಯಕ ಪ್ರಾಧ್ಯಾಪಕಿ ನಾಪತ್ತೆ – ವಿದ್ಯಾರ್ಥಿಗಳ ಪರದಾಟ

(ನ್ಯೂಸ್ ಕಡಬ)newskadaba.com ಮೈಸೂರು, ಜು.25. ಮೈಸೂರಿನ ಪ್ರತಿಷ್ಠಿತ ಎಟಿಎಂಇ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಹರ್ಷಿತಾ 200 ವಿದ್ಯಾರ್ಥಿಗಳಿಂದ ಫೀಸ್ ಹಣ ಎಂದು ಬರೋಬ್ಬರಿ 25 ಲಕ್ಷ ರೂ. ಪಡೆದು ವಂಚಿಸಿದ್ದಾರೆ. ಅವರ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ಹರ್ಷಿತಾ ಪರೀಕ್ಷೆ ಫೀಸ್ ಸಂಗ್ರಹಿಸಿದ್ದಾರೆ. ನಗದು ಮಾತ್ರವಲ್ಲದೆ ವಿದ್ಯಾರ್ಥಿಗಳು ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಪಾವತಿಸಿದ್ದಾರೆ. ಇದಕ್ಕೆ ನಕಲಿ ರಶೀದಿ ನೀಡಿ ಹರ್ಷಿತಾ ಮೋಸ ಮಾಡಿದ್ದಾರೆ. ಈಗಾಗಲೇ

ಕಾಲೇಜಿನ ಫೀಸ್ ಹಣದೊಂದಿಗೆ ಸಹಾಯಕ ಪ್ರಾಧ್ಯಾಪಕಿ ನಾಪತ್ತೆ – ವಿದ್ಯಾರ್ಥಿಗಳ ಪರದಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೃಷಿ ಹೊಂಡದಲ್ಲಿ ಈಜಲು ಮೃತಪಟ್ಟ ಯುವತಿ

(ನ್ಯೂಸ್ ಕಡಬ)newskadaba.com ಕೇರಳ, ಜು.25. ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯೊಬ್ಬಳು ದುರಂತವಾಗಿ ಮೃತಪಟ್ಟ ಘಟನೆ ಜರುಗಿದೆ. 19 ವರ್ಷದ ಸೋನಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ ಮನೆಯ ಸಮೀಪವೇ ಇರುವ ಕೃಷಿ ಉದ್ದೇಶಕ್ಕಾಗಿ ಮಣ್ಣನ್ನು ಅಗೆದು ನಿರ್ಮಾಣ ಮಾಡಿದ್ದ ಹೊಂಡದಲ್ಲಿ ಈ ಘಟನೆ ನಡೆದಿದೆ. ತಂದೆಯ ಜತೆ ಈಜುವಾಗ ಮಣ್ಣಿನಲ್ಲಿ ಸಿಲುಕಿ, ಅದರಿಂದ ಬಿಡಿಸಿಕೊಳ್ಳಲಾಗದೇ ಸೋನಾ ಕೊನೆಯುಸಿರೆಳೆದಿದ್ದಾಳೆ. ಇದಕ್ಕೂ ಮುನ್ನ ಸ್ಥಳೀಯರಿಗೆ ಈ ಮಾಹಿತಿ ತಿಳಿದು ಸೋನಾಳನ್ನು ಕಾಪಾಡಲು ಸ್ಥಳಕ್ಕೆ ದೌಡಾಯಿಸಿದರೂ ಸಹ ಆಕೆಯನ್ನು

ಕೃಷಿ ಹೊಂಡದಲ್ಲಿ ಈಜಲು ಮೃತಪಟ್ಟ ಯುವತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…!

(ನ್ಯೂಸ್ ಕಡಬ)newskadaba.com  ಟೊರಂಟೊ, ಜು.25. ಕೆನಡಾದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ದಾಳಿಕೋರರು ಆತನನ್ನು ಹತ್ಯೆಮಾಡಿ ಆತನಲ್ಲಿದ್ದ ಹಣವನ್ನು ದರೋಡೆಮಾಡಿರುವ ಪ್ರಕರಣ ಕೆನಡಾದಲ್ಲಿ ವರದಿಯಾಗಿದೆ. ಕೆನಡಾದಲ್ಲಿ ಶಿಕ್ಷಣ ಪಡೆಯುತ್ತಿರುವ ಗುರ್ವಿಂದರ್‌ ನಾಥ್‌ ಬಿಡುವಿನ ವೇಳೆಯಲ್ಲಿ ಆಹಾರ ಪೂರೈಸುವ ಕೆಲಸವನ್ನೂ ಮಾಡುತ್ತಿದ್ದ ಎನ್ನಲಾಗಿದೆ. ಆತನ ಬಳಿ ಆಹಾರಕ್ಕೆ ಆರ್ಡರ್‌ ಮಾಡಿದ ಶಂಕಿತ ಆರೋಪಿಗಳು ಆತ ಅಲ್ಲಿಗೆ ಬರುತ್ತಿರುವಂತೆ ಮಾತಿನ ಚಕಮಕಿ ನಡೆಸಿ ಆತನ ಮೇಲೆ ಹಲ್ಲೆ ನಡೆಸಿ ಆತನಲ್ಲಿದ್ದ ಹಣ ಮತ್ತು ವಾಹನವನ್ನು ಕಿತ್ತುಕೊಳ್ಳಲು

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು

(ನ್ಯೂಸ್ ಕಡಬ)newskadaba.com  ಪುತ್ತೂರು, ಜು.25. ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೇಜ್ಜೇನು ಕಡಿದು ಗಂಭೀರ ಗಾಯಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಗುರುವ(55) ಎಂದು ಗುರುತಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಜು.25. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top