ಕ್ರೈಮ್ ನ್ಯೂಸ್

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಮಣಿಪಾಲ, ಜು.21. ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.  

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಗುದ್ದಿ ಜಖಂಗೊಂಡ ಘಟನೆ ಗುರುವಾರದಂದು ನಗರದ ಪಿವಿಎಸ್‌ ಬಳಿಯ ಎಂ.ಜಿ. ರೋಡ್‌ನ‌ಲ್ಲಿ ನಡೆದಿದೆ. ಕಾಸರಗೋಡು- ಮಂಗಳೂರು ನಡುವೆ ಸಂಚರಿಸುತ್ತಿದ್ದ ಬಸ್‌, ಇನ್ನೊಂದು ಕೆಎಸ್‌ಆರ್‌ಟಿಸಿಯ ಬಸ್ ನ್ನು ಹಿಂದಿಕ್ಕುವ ಭರದಲ್ಲಿ ಕಾಂಪಿಟೀಶನ್‌ ಮಾಡಿಕೊಂಡು ಪಿವಿಎಸ್‌ ಜಂಕ್ಷನ್‌ ನಿಂದ ಎಂ.ಜಿ ರಸ್ತೆಗೆ ನಿರ್ಲಕ್ಷ್ಯ ಮತ್ತು ಅತೀ ವೇಗದಿಂದ ಬಂದಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಢಿಕ್ಕಿಯಾಗಿದೆ. ಈ ಸಂದರ್ಭ

ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.21. ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಓರ್ವನಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ‌. ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಮಾರಕಾಯುಧದಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಮಣಿಪುರ, ಜು. 21. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ಬಳಿಕ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ. 4ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಅಲ್ಲದೇ ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡಾ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.21. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಪಟ್ಟವರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು ಎನ್ನಲಾಗಿದೆ. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ

(ನ್ಯೂಸ್ ಕಡಬ) newskadaba.com ರಾಮನಗರ. ಜು. 20. ಪುತ್ರಿಯೋರ್ವಳು ಕ್ಷುಲ್ಲಕ ಕಾರಣಕ್ಕೆ  ಗುದ್ದಲಿಯಿಂದ ತನ್ನ ತಂದೆಯನ್ನೇ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆಕೆ ಸ್ಥಳದಿಂದ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಆರೋಪಿ ಪುಷ್ಪಾ ಗೃಹಿಣಿಯಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ಪತಿಯೊಂದಿಗೆ ಜಗಳವಾಡಿಕೊಂಡು ಬಂದು ಪೋಷಕರ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿದ್ದಳು.

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಣಾಜೆ: ಶಾಲೆಯಲ್ಲಿ ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಸಹಪಾಠಿಯ ಎದೆಗೆ ಚೂರಿ ಎಸೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 20. ಇಲ್ಲಿನ ನರಿಂಗಾನ ಗ್ರಾಮದ ಶಾಲೆಯೊಂದರಲ್ಲಿ ಮಧ್ಯಾಹ್ನದ ಊಟ ಮಾಡುತ್ತಿದ್ದ ಸಂದರ್ಭ ಬಟ್ಟೆಗೆ ಸಾಂಬಾರು ಚೆಲ್ಲಿದ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಜಗಳ ನಡೆದಿದ್ದು, ಓರ್ವ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಯ ಎದೆಗೆ ಚಾಕುವಿನಿಂದ ಇರಿದ ಘಟನೆ ವರದಿಯಾಗಿದೆ. ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದು, ಬಟ್ಟೆಯಲ್ಲಿ ಕಲೆ ಆಗಿತ್ತು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೇ, ಆತನ ನೋಟ್

ಕೊಣಾಜೆ: ಶಾಲೆಯಲ್ಲಿ ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಸಹಪಾಠಿಯ ಎದೆಗೆ ಚೂರಿ ಎಸೆದ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಚಿನ್ನಾಭರಣ ಅಂಗಡಿ ಮಾಲೀಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ನೊಂದಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರೂ ಆಗಿದ್ದ  ಅವರು ಪತ್ನಿಯನ್ನು ಅಗಲಿದ್ದಾರೆ.

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಬೆಂಗಳೂರಿಗೆ ಬಾಡಿಗೆಗೆ ಗೊತ್ತುಪಡಿಸಿ, ಚಾಲಕರಿಂದಲೇ ಹಣ ಪಡೆದು ವಂಚಿಸಿ ಅಪರಿಚಿತ ವ್ಯಕ್ತಿ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಗಾಂಧಿನಗರ ಪಾರ್ಕಿಂಗ್‌ನಲ್ಲಿರುವ ಗೂಡ್ಸ್‌ ಟೆಂಪೋ ಚಾಲಕರೊಬ್ಬರಲ್ಲಿ ಅಪರಿಚಿತನೋರ್ವ ಬೆಂಗಳೂರಿನ ಕನಕಪುರಕ್ಕೆ ಬಾಡಿಗೆ ಇದೆ. ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ವಿದ್ಯುತ್ ಉಪಕರಣಗಳನ್ನು ಸಾಗಿಸಲು ಮೂರು ಗೂಡ್ಸ್‌ ಗಾಡಿ ಬೇಕು. ಅಲ್ಲದೇ ಕನಕಪುರದಿಂದ ಹಿಂದಿರುಗುವಾಗ ವಿದ್ಯುತ್‌ ಟ್ರಾನ್ಸ್‌ಫ‌ರ್‌ ಕೂಡಾ ತರಲಿಕ್ಕಿದೆ. ಅದಕ್ಕೆ (407) ಗೂಡ್ಸ್‌ ಟೆಂಪೋ ಬೇಕು. ನನ್ನಲ್ಲಿ ಕೇಂದ್ರ ಸರಕಾರದ

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.   ಮನೆ ಮಾಲಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top