ಕ್ರೈಮ್ ನ್ಯೂಸ್

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಈತ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ, ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.17. ಮರವಂತೆ ಬೀಚ್ ನಲ್ಲಿ ಯುವಕನೋರ್ವ ಸಮುದ್ರಪಾಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಮುದ್ರಪಾಲಾದ ಯುವಕನನ್ನು ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಬೀಚ್‌ ನಲ್ಲಿ ಈಜಲು ಹೋದಾಗ ಘಟನೆ ಸಂಭವಿಸಿದೆ. ನೀರಿಗೆ ಈಜಲು ಇಳಿದಿದ್ದು, ಈ ವೇಳೆ ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳೀಯರ ತಂಡ ಹಾಗೂ ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 19. ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ಸಂಭವಿಸಿದೆ. ಮೃತರನ್ನು ದಾಮೋದರ ಪುತ್ರಿ ಅಶ್ವತಿ(25) ಎಂದು ಗುರುತಿಸಲಾಗಿದೆ. ಅಶ್ವಥಿಯವರ ಮೃತದೇಹ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಕೃತ್ಯ ನಡೆದಿದೆ. ತಾಯಿ ಸುಜಾತರವರು ಮನೆ ಸಮೀಪದ ಬೀಡಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಧ್ಯಾಹ್ನ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಬಾಗಿಲು ಬಡಿದರೂ ತೆರೆಯದಿದ್ದುದರಿಂದ

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧ್ವಂಸಕ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದು, ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಬೆಂಗಳೂರು ಕಮಿಷನರ್ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಸಿಬಿ ಪೊಲೀಸರು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಹಾಗೂ ಜಾಹಿದ್ ಎಂಬ ಶಂಕಿತ ಉಗ್ರರನ್ನು ಇಂದು ಬಂಧಿಸಿದ್ದು, ಇವರ ಹಿಂದೆ ಉಗ್ರ ಸಂಘಟನೆಯ ಕೈವಾಡವಿರುವ ಶಂಕೆಯಿದೆ ಎಂದು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಐವರು

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಘಟನೆ ನಡೆದಿದೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಸೈಯ್ಯದ್, ಸುಹೇಲ್ ಉಮೇರ್, ಜುನೇದ್, ಮುದಾಸಿನ್, ಜಾಹೀದ್ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಉಗ್ರರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.    

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯೂಟ್ಯೂಬರ್‌ ಮೇಲೆ ಐಟಿ ದಾಳಿ- 24 ಲಕ್ಷ ರೂ. ನಗದು ಪತ್ತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 18. ಯೂಟ್ಯೂಬ್‌ ಚಾನೆಲ್‌ಗಳಿಂದ ಜನಪ್ರಿಯ ಯೂಟ್ಯೂಬರ್‌ಗಳು ಕೋಟಿಗಟ್ಟಲೆ ಆದಾಯ ಗಳಿಸುತ್ತಿರುವ ಬೆನ್ನಲ್ಲೇ ಇದೀಗ ಯುಟ್ಯೂಬ್‌ ಚಾನೆಲ್‌ ಮಾಲೀಕರ ಮನೆ ಮೇಲೆ ಐಟಿ ದಾಳಿಗಳೂ ನಡೆಯುತ್ತಿವೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಯೂಟ್ಯೂಬ್‌ ಚಾನೆಲ್‌ ಒಂದನ್ನು ನಡೆಸುವ ಉತ್ತರ ಪ್ರದೇಶದ ಯೂಟ್ಯೂಬರ್ ಒಬ್ಬರ ಮನೆಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ 24 ಲಕ್ಷ ರೂ. ನಗದು ಪತ್ತೆಯಾಗಿದೆ. ತಸ್ಲೀಮ್‌ ಎಂಬ ವ್ಯಕ್ತಿ ಹಲವು ವರ್ಷಗಳಿಂದ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಸುಮಾರು

ಯೂಟ್ಯೂಬರ್‌ ಮೇಲೆ ಐಟಿ ದಾಳಿ- 24 ಲಕ್ಷ ರೂ. ನಗದು ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊದಲ ಪೋಸ್ಟಿಂಗ್‌ ನಲ್ಲಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಅಧಿಕಾರಿ ➤ ರೆಡ್ ಹ್ಯಾಂಡ್ ಆಗಿ ACB ಬಲೆಗೆ

(ನ್ಯೂಸ್ ಕಡಬ)newskadaba.com  ಹಜಾರಿಬಾಗ್, ಜು.18. ವ್ಯಕ್ತಿಯೊಬ್ಬರಿಂದ ಲಂಚ ಪಡೆದುಕೊಳ್ಳುತ್ತಿದ್ದ ಸರ್ಕಾರಿ ಅಧಿಕಾರಿಣಿಯೊಬ್ಬರನ್ನು ಜಾರ್ಖಂಡ್‌ ನ ಹಜಾರಿಬಾಗ್ ಭ್ರಷ್ಟಾಚಾರ ನಿಯಂತ್ರಣ ದಳ (ಎಸಿಬಿ) ರೆಡ್ ಹ್ಯಾಂಡ್ ಆಗಿ ಹಿಡಿದಿದೆ ಎಂದು ವರದಿಯಾಗಿದೆ. ಬಂಧಿತ ಮಹಿಳಾ ಅಧಿಕಾರಿಯನ್ನು ಮಿಥಾಲಿ ಶರ್ಮಾ ಎಂದು ಗುರುತಿಸಲಾಗಿದ್ದು, ಎಂಟು ತಿಂಗಳ ಹಿಂದೆ ಜಾರ್ಖಂಡ್‌ನ ಕೊಡೆರ್ಮಾದಲ್ಲಿ ಸಹಕಾರ ಇಲಾಖೆಯ ಸಹಾಯಕ ರಿಜಿಸ್ಟ್ರಾರ್ ಆಗಿ ನಿಯೋಜನೆಗೊಂಡಿದ್ದರು. ಇದು ಅವರ ವೃತ್ತಿ ಜೀವನದ ಮೊದಲ ಪೋಸ್ಟಿಂಗ್ ಆಗಿದೆ ಎಂದು ತಿಳಿದುಬಂದಿದೆ.  

ಮೊದಲ ಪೋಸ್ಟಿಂಗ್‌ ನಲ್ಲಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಅಧಿಕಾರಿ ➤ ರೆಡ್ ಹ್ಯಾಂಡ್ ಆಗಿ ACB ಬಲೆಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top