ಕ್ರೈಮ್ ನ್ಯೂಸ್

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ […]

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಪುತ್ರಿ- ವಶಕ್ಕೆ ಪಡೆದ ಖಾಕಿಪಡೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 13. ಹೊರರಾಜ್ಯದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಪತ್ನಿಯ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೊಪಿಯನ್ನು ಬೈಂದೂರು ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ದೂರು ದಾಖಲಾದ ಹಿನ್ನೆಲೆ ಪ್ರಕರಣ ತನಿಖೆ ಚುರುಕುಗೊಳಿಸಿದ ಕುಂದಾಪುರ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮೊದಲ ಪತಿಯನ್ನು ತ್ಯಜಿಸಿದ್ದ ಹೊರರಾಜ್ಯದ ಮಹಿಳೆಯೋರ್ವಳು ಆರೋಪಿ

ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಪುತ್ರಿ- ವಶಕ್ಕೆ ಪಡೆದ ಖಾಕಿಪಡೆ Read More »

ಕ್ರೈಮ್ ನ್ಯೂಸ್
crime, arrest, suspected

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ಮಟ್ಕಾ ಆಟವಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಗರದ ಬರ್ಕೆ ಕಂಬಳದ ಬಳಿ ನಡೆದಿದೆ. ಬಂಧಿತರನ್ನು ಮಣ್ಣಗುಡ್ಡದ ಪ್ರಶಾಂತ್, ಅಶೋಕನಗರದ ದಿನೇಶ್ ಕುಮಾರ್, ಉರ್ವ ಹೊಯ್ಗೆಬೈಲ್‌ನ ಅನಿಲ್ ಹಾಗೂ ಮಡಿಕೇರಿಯ ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು ಸಹಿತ 12,480 ರೂಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ- ಓರ್ವ ಅಂದರ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಕೊರಗಕಲ್ಲು

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ- ಓರ್ವ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿಯನ್ನಿ ಬಂಟ್ವಾಳ ತಾಲೂಕಿನ ಗೋಳ್ತಮಜಲುವಿನ ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ. ಈತ 2019ರ ಆ. 30ರಂದು ಸಂಜೆ ಬಾಲಕಿಯು ವಿಟ್ಲದಿಂದ ಬಸ್‌ನಲ್ಲಿ ತೆರಳಿ ಕೆದುವಾರು ಬಸ್ ತಂಗುದಾಣದ ಬಳಿ ಇಳಿದು

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕುಂಬಳೆ, ಜು. 13. ಸಾಯುವುದಾಗಿ ಗೆಳೆಯರಿಗೆ ಹೇಳಿ ಬಳಿಕ ಮೊಬೈಲ್ ಸ್ವಿಚ್ಢ್ ಆಫ್ ಮಾಡಿದ್ದ ಬಂಬ್ರಾಣ ನಿವಾಸಿ ಯುವಕ‌ನ ಮೃತದೇಹ ಮಂಗಳೂರಿನ‌ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬಂಬ್ರಾಣ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಶ್‌ ಕುಮಾರ್‌(28) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಮನೆಯವರು ಆಸ್ಪತ್ರೆಗೆ ತೆರಳಿ ಗುರುತು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಮೃತರು ತಂದೆ, ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಜು. 13. ಆನೆ ದಾಳಿಯಿಂದಾಗಿ ಬೃಹತ್ ಮರವೊಂದು ವಿದ್ಯುತ್ ತಂತಿಯ ಮೇಲೆ ಉರುಳಿಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಹಾನಿಗೊಂಡಿರುವ ಘಟನೆ ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕ ಬಾಂತಾಜೆ ಸಂಪರ್ಕ ರಸ್ತೆಯ ಬಾಂತಾಜೆ ಸಮೀಪ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿನ ಬೃಹತ್ ಈನ್ದ್ ಮರವನ್ನು ಕಾಡಾನೆ ಉರುಳಿಸಿ ಹಾಕಿ ಪುಡಿಗೈದಿದೆ. ಮರವು ವಿದ್ಯುತ್ ತಂತಿಯ ಮೇಲೆಯೇ ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮೂಡುಶೆಡ್ಡೆ ಎಂಬಲ್ಲಿ ವರದಿಯಾಗಿದೆ. ಬಂಧಿತರನ್ನು ಪಿಲಿಕುಳ ಸಮೀಪದ ನಿವಾಸಿ ಶಾರೂಕ್ ಮತ್ತು ತೋಕೂರಿನ ಜಗದೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕಾಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 12. ಅನಾರೋಗ್ಯದಿಂದಾಗಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜೆ ರವರು ಬುಧವಾರದಂದು ನಿಧನರಾದರು.   ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಅನಾರೋಗ್ಯದಿಂದಾಗಿ ಕಳೆದ ಒಂದು ವರ್ಷದಿಂದ ರಜೆಯಲ್ಲಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಕೃಷ್ಣಪ್ಪ

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಹಾಗೂ ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಲೆಕ್ಸ್​, ವಿನಯ್​ ರೆಡ್ಡಿ, ಸಂತೋಷ್ ಎಂದು ಗುರುತಿಸಲಾಗಿದೆ. ಏರೋನಿಕ್ಸ್ ಮೀಡಿಯಾ ಪ್ರೈ. ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಅದೇ ಕಂಪೆನಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ವಿನು ಕುಮಾರ್ ಅವರನ್ನು ಮಂಗಳವಾರದಂದು ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರಗಳೊಂದಿಗೆ ಅಮೃತಹಳ್ಳಿಯಲ್ಲಿರುವ ಕಂಪೆನಿ ಕಚೇರಿಗೆ ನುಗ್ಗಿದ ಆರೋಪಿಗಳು ಹಲ್ಲೆ

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top