ಕ್ರೈಮ್ ನ್ಯೂಸ್

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ಗೆಲ್ಲನ್ನು ತೆರವು ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್‌ ಉಂಟಾಗಿ ವ್ಯಕ್ತಿಯೋರ್ವರು ಗಾಯಗೊಂಡಿರುವ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ಮೂಲದ ರವೀಂದ್ರ(30) ಎಂದು ಗುತುತಿಸಲಾಗಿದೆ. ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಮರದ ಗೆಲ್ಲೊಂದು ಬಿದ್ದ ಪರಿಣಾಮ ಟ್ರಿಪ್ ಆಗಿದ್ದರಿಂದ ಸ್ಥಳಕ್ಕೆ ತೆರಳಿದ್ದ ರವೀಂದ್ರ ಅವರು ಕೊಕ್ಕೆಯ ಸಹಾಯದಿಂದ ವಿದ್ಯುತ್ ತಂತಿ ಮೇಲಿದ್ದ ಗೆಲ್ಲು ತೆರವುಗೊಳಿಸುತ್ತಿದ್ದ ವೇಳೆ […]

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 04. ಸ್ಕೂಟರ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅಣ್ಣು ಯಾನೆ ಅಶೋಕ ಎಂದು ಗುರುತಿಸಲಾಗಿದೆ. ಅಶೋಕ್ ರವರು ಹಳೆನೇರೆಂಕಿ ಕಡೆಯಿಂದ ಸ್ಕೂಟರ್ ನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಪಿಕಪ್

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 04. ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಲ್ಲಿನ ಬೀಡಿನಗುಡ್ಡೆಯ ನಾಗಬನ ಸಮೀಪ ನಡೆದಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಸೇರಿ ಮೃತದೇಹವನ್ನು ಹೊರತೆಗೆದಿದ್ದು, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಕಾಲೇಜು ವಿದ್ಯಾರ್ಥಿಯೋರ್ವನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಸವೇಶ್ವರನಗರದ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಕೊಲೆಯಾದ ವಿದ್ಯಾರ್ಥಿಯನ್ನು ಸುಹೇಲ್ (17) ಎಂದು ಗುರುತಿಸಲಾಗಿದೆ. ಡ್ಯಾನ್ಸ್‌ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಜಗಳ ಉಂಟಾಗಿ ಈ ಕೊಲೆ ನಡೆದಿದೆ ಎಂದೆನ್ನಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಸುಹೇಲ್‌ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿಯಿತಾದರೂ, ಆತ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 03. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೂಡಿನಬಳಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಜಾಫರ್ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ಯುವಕ ತಂದೆ, ತಾಯಿ ಹಾಗೂ 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ. ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 03. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಸಾವಿರಾರು ರೂ. ನಗದು ಕದ್ದೊಯ್ದ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿಂದ ವರದಿಯಾಗಿದೆ. ಅಡ್ಕಾರು ನಿವಾಸಿ ಮುಹಮ್ಮದ್ ನಜೀಬ್ ಅವರು ಜು. 01ರಂದು ಸಂಜೆ ತಮ್ಮ ಹೆಂಡತಿಯ ತವರು ಮನೆಗೆ ಬೀಗ ಹಾಕಿ ಕುಟುಂಬ ಸಮೇತ ತೆರಳಿದ್ದರೆನ್ನಲಾಗಿದೆ. ಮರುದಿನ ಜು. 02ರಂದು ಬೆಳಿಗ್ಗೆ ಪುತ್ತೂರಿನಿಂದ ಮರಳಿ ಮನೆಗೆ ಬಂದಾಗ ಮನೆಯ ಬಾಗಿಲಿನ ಲಾಕ್ ಮುರಿದಿದ್ದು,

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

➤ ಚಾಲಕ ಪವಾಡಸದೃಶ ಪಾರು (ನ್ಯೂಸ್ ಕಡಬ) newskadaba.com ವಿಟ್ಲ, ಜು. 03. ವಿದ್ಯುತ್ ಕಂಬವೊಂದಕ್ಕೆ ಕಾರು ಢಿಕ್ಕಿ ಹೊಡೆದು, ಚಾಲಕ ಪವಾಡಸದೃಶ ಪಾರಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಲ್ಲಿದ್ದ ವಿದ್ಯುತ್ ಕಂಬ ಮೇಲಕ್ಕೆದ್ದು, ಕಾರಿನ ಮೇಲೆಯೇ ಮುರಿದು ಬಿದ್ದಿದೆ. ಚಾಲಕ ಯಾವುದೇ ಅಪಾಯವಿಲ್ಲದೇ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ.

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು

➤ ಫೈಲಟ್ ಗಳಿಬ್ಬರ ದುರ್ಮರಣ (ನ್ಯೂಸ್ ಕಡಬ) newskadaba.com ಬೊಗೋಟಾ, ಜೂ. 03. ಕೊಲಂಬಿಯ ವಾಯುಪಡೆಯ 2 ಯುದ್ಧ ವಿಮಾನಗಳು ಹಾರಾಟದ ಸಂದರ್ಭದಲ್ಲಿ ಆಕಾಶದಲ್ಲೇ ಒಂದಕ್ಕೊಂದು ಡಿಕ್ಕಿ ಹೊಡೆದು ಹೊತ್ತಿ ಉರಿದು ಪತನಗೊಂಡಿದ್ದು, ಪರಿಣಾಮ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಿಯಾಯ್‌ ವಾಯುನೆಲೆಯಲ್ಲಿ ನಡೆಯುತ್ತಿದ್ದ ತರಬೇತಿಯಲ್ಲಿ ಈ ಯುದ್ಧ ವಿಮಾನಗಳು ಭಾಗವಹಿಸಿದ್ದು, ವೃತ್ತಾಕಾರದಲ್ಲಿ ಹಾರಾಟ ನಡೆಸುತ್ತಿದ್ದವು. ಈ ವೇಳೆ ಟುಕಾನೋ ಟಿ-27ನ ಎರಡು ಯುದ್ಧ ವಿಮಾನಗಳು ಒಂದಕ್ಕೊಂದು ಡಿಕ್ಕಿಯಾಗಿ, ಬಳಿಕ ಕೆಲವೇ ಸೆಕೆಂಡ್ ಗಳಲ್ಲೇ ಆಕಾಶದಲ್ಲಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಯುವತಿಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಯುವಕ

➤ ದೂರು ದಾಖಲು (ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 03. ಬೈಕಿನಲ್ಲಿ ಬಂದ ಅನ್ಯಕೋಮಿನ ಯುವಕನೋರ್ವ ಯುವತಿಯೋರ್ವಳನ್ನು ರಸ್ತೆ ಮಧ್ಯೆ ಅಡ್ಡಗಟ್ಟಿ ಚುಡಾಯಿಸಿ ಕಿರುಕುಳ ನೀಡಿ, ಹಣದ ಆಮಿಷ ತೋರಿಸಿ ನನ್ನ ಜತೆ ಬಾ ಎಂದು ಹೇಳಿ ಅನುಚಿತವಾಗಿ ವರ್ತಿಸಿದ ಘಟನೆ ಕೃಷ್ಣಾಪುರ 8 ಎ ಬ್ಲಾಕ್ ನಲ್ಲಿ ನಡೆದಿದೆ. ಘಟನೆಯಿಂದ ಭಯಭೀತಳಾದ ಯುವತಿ ಕಿರುಚಿದಾಗ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಇದನ್ನು ಕಂಡ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ ಎನ್ನಲಾಗಿದೆ. ಈ ಕುರಿತು ಯುವತಿಯ ಮನೆಯವರು ಸುರತ್ಕಲ್

ಯುವತಿಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜು.01. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶನಿವಾರದಂದು ಕಡಬ ಪೇಟೆಯಲ್ಲಿ ನಡೆದಿದೆ. ಕಡಬದ ಫೆಡರಲ್ ಬ್ಯಾಂಕ್ ಮುಂಭಾಗ ಶನಿವಾರದಂದು ಶಾಲಾ ಬಾಲಾಕಿಯೋರ್ವಳು ಹಠಾತ್ ರಸ್ತೆ ದಾಟಿದಾಗ ಬಾಲಕಿಗೆ ಢಿಕ್ಕಿಯಾಗುವುದನ್ನು ಬೈಕ್ ಸವಾರ ತಪ್ಪಿಸಿದ ವೇಳೆ ವಿರುದ್ಧ ದಿಕ್ಕಿನಿಂದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಲ್ಲುಗುಡ್ಡೆ ನಿವಾಸಿ ಪವನ್ ಗಂಭೀರವಾಗಿ ಗಾಯಗೊಂಡಿದ್ದು, ಕೋಡಿಂಬಾಳ ನಿವಾಸಿ ಹರ್ಷಿತ್ ಹಾಗೂ ಎಡಮಂಗಲ ನಿವಾಸಿ ಮೋಹನ್ ಸಣ್ಣಪುಟ್ಟ ಗಾಯಗಳೊಂದಿಗೆ

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top