ಕ್ರೈಮ್ ನ್ಯೂಸ್

Death, deadbody, Waterfall

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಮರ್ಧಾಳದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ನಿವಾಸಿ ದಿವಂಗತ ಸಂಜೀವ ರೈ ಎಂಬವರ ಪುತ್ರ ರಘುನಾಥ ರೈ ಯಾಬೆ ಚುಮ್ಮ (38) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೆ ವೇಳೆಗೆ ತನ್ನ ಮನೆಯಲ್ಲಿದ್ದ ರಘುನಾಥ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಯನ್ನು […]

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ಕಡಬದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.29. ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಕಡಬದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬದ ಕೋಡಿಂಬಾಳ ನಿವಾಸಿ ಅನೀಶ್ ಎಂದು ಗುರುತಿಸಲಾಗಿದೆ. ಆರೋಪಿಯು ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಂಗಳೂರಿನ ಯುವತಿಯನ್ನು ಪ್ರೀತಿಸುವುದಾಗಿ ತಿಳಿಸಿ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದಲ್ಲದೆ ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುಮಾರು 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಗೆ ಈ ಮೊದಲೇ ಮದುವೆಯಾಗಿರುವ ವಿಚಾರ ತಡವಾಗಿ

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ಕಡಬದ ಯುವಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಆಟೋರಿಕ್ಷಾ ಪಲ್ಟಿ

➤ ಚಾಲಕ ಮೃತ್ಯು (ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆನ್ನಲಾಗಿದೆ. ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.ಈ

ವಿಟ್ಲ: ಆಟೋರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಟಪಾಡಿ, ಜೂ. 26. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ರಾ.ಹೆ.66ರ ಉದ್ಯಾವರ ಜೈಹಿಂದ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಉದ್ಯಾವರ ಬೊಲ್ಜೆ ಗರಡಿ ನಿವಾಸಿ ರಾಮ ದೇವಾಡಿಗ ಎಂದು ಗುರುತಿಸಲಾಗಿದೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಬಿದ್ದ ಮದುವೆ ಮನೆಯ ಪೆಂಡಲ್ ➤ 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜೂ. 26. ಭಾರೀ ಮಳೆ ಮತ್ತು ಬಿರುಸಿನ ಗಾಳಿಯಿಂದಾಗಿ ಪೆಂಡಾಲ್ ಕುಸಿದು ಬಿದ್ದು ಮದುವೆಯಲ್ಲಿ ಭಾಗವಹಿಸಿದ್ದ ಎಂಟು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಾಮೋಹ್‌ ನಲ್ಲಿ ನಡೆದಿದೆ. ಅಧಿಕಾರಿಗಳ ಪ್ರಕಾರ, ಭಾನುವಾರದಂದು ರಾತ್ರಿ ಭಾರೀ ಮಳೆ, ಗಾಳಿಯಿಂದಾಗಿ ದಾಮೋಹ್‌ ನಲ್ಲಿ ಪೆಂಡಾಲ್ ಕುಸಿದು  ಬಿದ್ದು ಸುಮಾರು 8 ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಜಬಲ್‌ ಪುರಕ್ಕೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಭಾರೀ ಮಳೆಗೆ ಬಿದ್ದ ಮದುವೆ ಮನೆಯ ಪೆಂಡಲ್ ➤ 8 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 26. ಮಹಿಳೆಯೊಬ್ಬರು ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ನಡೆದಿದೆ. ಇಳಕಲ್ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬವರು ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನ ಪಡೆಯಲು ಹೊಗಿದ್ದ ವೇಳೆ ಹುಲಿಗೆ ಕ್ರಾಸ್ ಬಳಿ ತುಂಬಾ ಹೊತ್ತಿನಿಂದ ಕಾದರೂ ಯಾವುದೇ ಬಸ್ ನಿಲ್ಲಿಸಿರಲಿಲ್ಲ. ಇದರಿಂದ ಕೋಪಗೊಂಡ ಅವರು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ಕೊಪ್ಪಳದಿಂದ-ಹೊಸಪೇಟೆಗೆ ಹೋಗುವ  ಬಸ್ ಗೆ

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಹೃದಯಾಘಾತ- ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 26. ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ ಭಾಸ್ಕರ ಗೌಡ ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ರಾತ್ರಿ10 ಗಂಟೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಹೃದಯಾಘಾತ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಮ್ಮ ಹೋರಾಟ ನ್ಯಾಯಾಲಯಕ್ಕೆ ಸ್ಥಳಾಂತರ ➤ ಪ್ರತಿಭಟನೆ ಹಿಂಪಡೆದ ಕುಸ್ತಿಪಟು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಕಳೆದ ಐದು ತಿಂಗಳಿಂದ ಮಹಿಳಾ ಕುಸ್ತಿಪಟುಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದುಕೊಳ್ಳುವುದಾಗಿ ಕುಸ್ತಿಪಟುಗಳು ತಿಳಿಸಿದ್ದಾರೆ. ಇನ್ನುಮುಂದೆ ನಾವು ರಸ್ತೆಯಲ್ಲಿ ಪ್ರತಿಭಟನೆ ಮಾಡುವುದಿಲ್ಲ, ಪ್ರತಿಭಟನೆಯನ್ನು ನ್ಯಾಯಾಲಯಕ್ಕೆ ಸ್ಥಳಾಂತರಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ. ಸರಕಾರವು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಸಲ್ಲಿಸುವ ಭರವಸೆಯನ್ನು ಈಡೇರಿಸಿದೆ ಎಂದು ವಿನೇಶ್ ಫೋಗಟ್, ಸಾಕ್ಷಿ ಮಲಿಕ್

ನಮ್ಮ ಹೋರಾಟ ನ್ಯಾಯಾಲಯಕ್ಕೆ ಸ್ಥಳಾಂತರ ➤ ಪ್ರತಿಭಟನೆ ಹಿಂಪಡೆದ ಕುಸ್ತಿಪಟು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 25. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯ ಮೇರೆಗೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೊಡಿಯಾಲದ ಚೇತನ್ ಕಾಯರ್ತಡ್ಕ ಹಾಗೂ ದರ್ಶನ್ ಕಾಯರ್ತಡ್ಕ ಎಂದು ಗುರುತಿಸಲಾಗಿದೆ. ಕೊಡಿಯಾಲ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಕಲ್ಮಡ್ಕದ ಚಿದಾನಂದ ಎಂಬಾತನನ್ನು ಬಂಧಿಸಿದ್ದರು. ಇದೀಗ ವಿಚಾರಣೆ ಮುಂದುವರಿಸಿದ ಪೊಲೀಸರು ಬಾಲಕಿಯಿಂದ ಹೇಳಿಕೆ

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top