ಕ್ರೈಮ್ ನ್ಯೂಸ್

ಟಿವಿ ಮಾರಾಟದ ವಿಚಾರದಲ್ಲಿ ದಂಪತಿ ಆತ್ಮಹತ್ಯೆ ➤ ತಂದೆ ತಾಯಿಯ ದುಡುಕಿನ ನಿರ್ಧಾರಕ್ಕೆ ತಬ್ಬಲಿಯಾದ ಮಕ್ಕಳು

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ.25. ಟಿವಿ ಮಾರಾಟದ ವಿಚಾರದಲ್ಲಿ ಆರಂಭವಾದ ಜಗಳ ದಂಪತಿಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ಭಾನುವಾರದಂದು ಕಾರ್ಕಳದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಾರ್ಕಳ ತಾಲೂಕಿನ ನಲ್ಲೂರು ಹುರ್ಲಾಡಿ ನಿವಾಸಿ ಮುಂಬಯಿ ಹೊಟೇಲ್ ಉದ್ಯಮಿಯ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ದಂಪತಿ ಇಮ್ಯಾನುಲ್ ಸಿದ್ಧಿ (40) ಹಾಗೂ ಯಶೋಧಾ (32) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ ದಂಪತಿಯ ನಡುವೆ ಟಿವಿ ಮಾರಾಟದ ವಿಚಾರದಲ್ಲಿ ಜಗಳ ಉಂಟಾಗಿದೆ. ಅನ್ಯೋನ್ಯತೆಯಿಂದಿದ್ದ ದಂಪತಿಗಳ ನಡುವೆ […]

ಟಿವಿ ಮಾರಾಟದ ವಿಚಾರದಲ್ಲಿ ದಂಪತಿ ಆತ್ಮಹತ್ಯೆ ➤ ತಂದೆ ತಾಯಿಯ ದುಡುಕಿನ ನಿರ್ಧಾರಕ್ಕೆ ತಬ್ಬಲಿಯಾದ ಮಕ್ಕಳು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಂಕ್​ಕಾಂಗ್​, ಜೂ. 25. ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಂಕ್​ಕಾಂಗ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.   ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಹಾಂಗ್​ಕಾಂಗ್​ನಿಂದ ಲಾಸ್​ ಏಂಜಲೀಸ್​ಗೆ ಹೊರಟಿದ್ದ ಈ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಚಾರಣೆಯ ವೇಳೆ ವಿಷಸೇವಿಸಿ ಕೈದಿ ಮೃತ್ಯು ➤ ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ಜೂ. 25. ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸಹಿತ ಐವರನ್ನು ಅಮಾನತು ಮಾಡಲಾಗಿರುವ ಕುರಿತು ವರದಿಯಾಗಿದೆ. ಬಿಹಾರ ಮೂಲದ ಕೈದಿಯೋರ್ವ ಠಾಣೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈಂ ಪಿಎಸ್​ಐ ಮಂಜೇಶ್ವರ್ ಚಂದಾವರ, ಸಿಬ್ಬಂದಿಗಳಾದ ಮಹಾವೀರ, ರಮೇಶ್ ಮತ್ತು ಸಂತೋಷ್ ಎಂಬವರನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಪಾಲೀಷ್ ಮಾಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ

ವಿಚಾರಣೆಯ ವೇಳೆ ವಿಷಸೇವಿಸಿ ಕೈದಿ ಮೃತ್ಯು ➤ ಐವರು ಪೊಲೀಸರ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಂಟೇನರ್ ಢಿಕ್ಕಿ ➤ ವೃದ್ದ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 25. ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ವೃದ್ದರೋರ್ವರು ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಬಂಬ್ರಾಣ ದ ಮೊಯಿದಿನ್ ಕುಂಞ (78) ಎಂದು ಗುರುತಿಸಲಾಗಿದೆ. ಇವರು ಝೀಬ್ರಾ ಲೈನ್ ಮೂಲಕ ರಸ್ತೆ ದಾಟಲೆಂದು ನಿಂತಿದ್ದಾಗ ಅತೀ ವೇಗದಿಂದ ಬಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಂಟೇನರ್ ಢಿಕ್ಕಿ ➤ ವೃದ್ದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯಲ್ಲೇ ಗಾಂಜಾ ಬೆಳೆದ ವಿದ್ಯಾರ್ಥಿಗಳು ➤ ಬೆಚ್ಚಿಬಿದ್ದ ಪೊಲೀಸರು

(ನ್ಯೂಸ್ ಕಡಬ) newskadaba.com. ಶಿವಮೊಗ್ಗ, ಜೂ. 25. ತಮಿಳುನಾಡು, ಕೇರಳದ ಮೂವರು ಮೆಡಿಕಲ್ ವಿದ್ಯಾರ್ಥಿಗಳು ಮನೆಯಲ್ಲೇ ಗಾಂಜಾ ಬೆಳೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.   ತಮಿಳುನಾಡು ಕೃಷ್ಣಗಿರಿಯ ವಿಘ್ನರಾಜ್ (28) ಎಂಬಾತ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದು ಶಿವಗಂಗಾ ಲೇಔಟ್‌ನಲ್ಲಿ ಮನೆ ಮಾಡಿಕೊಂಡಿದ್ದ. ಇಲ್ಲಿ ಮನೆ ಮಾಲಕರ ಗಮನಕ್ಕೆ ಬಾರದಂತೆ ಮನೆಯೊಳಗೆ ಕೃತಕ ವಾತಾವರಣ ಸೃಷ್ಟಿಸಿ ಪಾಟ್‌ ಗಳಲ್ಲಿ ಗಾಂಜಾ ಬೆಳೆದು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಮೂರುವರೆ ವರ್ಷದಿಂದ ಈ ದಂಧೆಯಲ್ಲಿ

ಮನೆಯಲ್ಲೇ ಗಾಂಜಾ ಬೆಳೆದ ವಿದ್ಯಾರ್ಥಿಗಳು ➤ ಬೆಚ್ಚಿಬಿದ್ದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗರ್ಭಧರಿಸಿದ 9ನೇ ತರಗತಿಯ ಬಾಲಕಿ ➤ ಪೊಲೀಸ್ ಅಧಿಕಾರಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕೊಚ್ಚಿ, ಜೂ. 24. ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಪೊಲೀಸ್​ ಅಧಿಕಾರಿಯೊಬ್ಬರನ್ನು ಅರ್ಯಾಂಕೋಡ್​ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಕೇರಳದ ವೆಲ್ಲರಾಡದಲ್ಲಿ ನಡೆದಿದೆ. ಬಂಧಿತರನ್ನು ಮರಯೂರ್​ ಠಾಣಾ​ ಸಿಪಿಒ ದಿಲೀಪ್​ (43) ಎಂದು ಗುರುತಿಸಲಾಗಿದೆ. ಬಂಧಿಸಿದ್ದಾರೆ. 9ನೇ ತರಗತಿಯ ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಅನುಭವಿಸುತ್ತಿದ್ದು, ಇತ್ತೀಚೆಗೆ ಹೊಟ್ಟೆನೋವು ಜಾಸ್ತಿಯಾಗಿದ್ದರಿಂದ ಪಾಲಕರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುವುದು ಬೆಳಕಿಗೆ

ಗರ್ಭಧರಿಸಿದ 9ನೇ ತರಗತಿಯ ಬಾಲಕಿ ➤ ಪೊಲೀಸ್ ಅಧಿಕಾರಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಯುವತಿ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ. 24. ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಆಕೆಯ ಸಹೋದರ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ.   ನಾಪತ್ತೆಯಾದವರನ್ನು ಹಾಸನ ಜಿಲ್ಲೆ ಬೇಲೂರು ತಾಲೂಕು ಹಗರೆ ಅಂಗಡಿಹಳ್ಳಿ ನಿವಾಸಿ ಪ್ರಸ್ತುತ ಕಡಬ ತಾಲೂಕಿನ ಕಡಬ ಗ್ರಾಮದ ಕಳಾರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರಕ್ಷಿತಾ (18) ಎಂದು ಗುರುತಿಸಲಾಗಿದೆ. ಕಳೆದ 6 ವರ್ಷಗಳಿಂದ ಕಡಬದ ಕಳಾರದ ಇಸ್ಮಾಯಿಲ್ ಎಂಬವರ ಬಾಡಿಗೆ ಮನೆಯಲ್ಲಿ ತಂದೆ, ತಾಯಿ ಅಕ್ಕ, ತಂಗಿಯೊಂದಿಗೆ ವಾಸವಾಗಿದ್ದ ಈಕೆ,

ಕಡಬ: ಯುವತಿ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸಕಲೇಶಪುರ ನಿವಾಸಿ ಕುಮಾರಧಾರಾ ನದಿಗೆ ಹಾರಿರುವ ಶಂಕೆ ➤ ನದಿಯಲ್ಲಿ ಹುಡುಕಾಟ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದಿರುವ ಶಂಕೆ ವ್ಯಕ್ತವಾಗಿದೆ. ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂಬವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ನದಿ ಬದಿಯಲ್ಲಿ ಶೂ ಪತ್ತೆಯಾಗಿದೆ. ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶೌರ್ಯ ತಂಡದ ಸದಸ್ಯರಿಂದ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.

ಕಡಬ: ಸಕಲೇಶಪುರ ನಿವಾಸಿ ಕುಮಾರಧಾರಾ ನದಿಗೆ ಹಾರಿರುವ ಶಂಕೆ ➤ ನದಿಯಲ್ಲಿ ಹುಡುಕಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತ ಮಾಹಿತಿಯನುಸಾರ ದಾಳಿ ನಡೆಸಿದ ಪೊಲೀಸರು ಇಬ್ಬರು ಮಹಿಳೆಯರನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಬಂಧಿಸಿರುವ ಕುರಿತು ಮಂಗಳೂರಿನ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಮಂಡ್ಯದ ಮಗ್ಗನ್ ಕೊಪ್ಪಲ್ ನಿವಾಸಿ ಲಕ್ಕಪ್ಪ ಎಂದು ಗುರುತಿಸಲಾಗಿದೆ. ಕೃಷ್ಣ ಎಂಬಾತನು ಫ್ಲ್ಯಾಟ್ ಬಾಡಿಗೆಗೆ ಪಡೆದು ಇದರಲ್ಲಿ ಲಕ್ಕಪ್ಪನ ಜೊತೆ ಸೇರಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಲಕ್ಕಪ್ಪನನ್ನು

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top