ಕ್ರೈಮ್ ನ್ಯೂಸ್

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ

(ನ್ಯೂಸ್ ಕಡಬ)newskadaba.com  ರಾಮನಗರ, ಜೂ .19 . ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಅಕ್ಕ ತಂಗಿಯರ ಮೇಲೆ ದಾಳಿ ನಡೆಸಿದ ಪರಿಣಾಮ ಅಕ್ಕ ಸ್ಥಳದಲ್ಲೇ ಮೃತಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಜಯಮ್ಮ (50) ಎಂದು ಗುರುತಿಸಲಾಗಿದೆ ಹಾಗೂ ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಸಹೋದರಿಯರು ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ […]

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಅಡ್ಡಿ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 19.  ಚಾರ್ಮಾಡಿಯಲ್ಲಿ ಸರಕಾರಿ ಬಸ್ ನ್ನು ತಡೆಹಿಡಿದು ಗಲಾಟೆ ಎಬ್ಬಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಬಸ್ ನಿರ್ವಾಹಕ ದೂರು ನೀಡಿದ ದೂರಿನಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾರ್ಮಾಡಿ ಗ್ರಾಮದ ಮುಹಮ್ಮದ್ ಶಬೀರ್, ಮುಹಮ್ಮದ್ ಮಹ್ರೂಫ್ ಹಾಗೂ ಮುಹಮ್ಮದ್ ಮುಬಶ್ಶಿರ್ ಎಂದು ಗುರುತಿಸಲಾಗಿದೆ. ಶನಿವಾರದಂದು ಸಂಜೆ ಮಂಗಳೂರಿನಿಂದ ಮೂಡಿಗೆರೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ಹತ್ತಿದ ಚಾರ್ಮಾಡಿ ಕಡೆಯ ವಿದ್ಯಾರ್ಥಿಗಳು ಬಾಗಿಲಲ್ಲಿ ನೇತಾಡುತ್ತಿದ್ದರೆನ್ನಲಾಗಿದೆ. ಈ ವೇಳೆ

ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಅಡ್ಡಿ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನಲ್ಲಿ ಅಕ್ರಮ ಗೋ ಸಾಗಾಟ

(ನ್ಯೂಸ್ ಕಡಬ)newskadaba  ಮೂಡುಬಿದಿರೆ, ಜೂ . 19 . ಅಕ್ರಮವಾಗಿ  ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದ ಘಟನೆ ಸೋಮವಾರದಂದು ನಡೆದಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು

ಕಾರಿನಲ್ಲಿ ಅಕ್ರಮ ಗೋ ಸಾಗಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 17. ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂ. 15ರ ಗುರುವಾರದಂದು ಮನೆಯೊಡತಿ ಗುಣವತಿ ಎಂಬವರು ಬೆಳಗ್ಗೆ 8-30 ರ ವೇಳೆಗೆ ಮನೆಯ ಹಿಂಬಾಗಿಲನ್ನು ಮುಚ್ಚಿ ಎದುರು ಬಾಗಿಲಿಗೆ ಬೀಗ ಹಾಕಿ ತೋಟದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮಧ್ಯಾಹ್ನ ಸುಮಾರು 1-30ರ ವೇಳೆಗೆ ಊಟಕ್ಕೆಂದು ಮನೆಗೆ ಬಂದಾಗ ಹಿಂಬಾಗಿಲು

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೊಹಮ್ಮದ್‌ ನೂಹ್ಮನ್‌ (19) ಎಂದು ಗುರುತಿಸಲಾಗಿದೆ. ಈತ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ.17. ಪೊಲೀಸರ ಕಿರುಕುಳ ತಾಳಲಾರದೇ ಯುವಕನೊಬ್ಬ ನೇಣಿಗೆ ಶರಣಾದ ‍ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ನಡೆದಿದೆ. ಯಾವುದೇ ದೂರು ಇಲ್ಲದಿದ್ದರೂ ಯುವಕನನ್ನು ಠಾಣೆಗೆ ಕರೆದೊಯ್ದು ಪೊಲೀಸರು ಥಳಿಸಿದ್ದು, ಇದರಿಂದ ಮನನೊಂದು ಆತ್ಮಹತ್ಯೆಯ ಹಾದಿ ಹಿಡಿದ್ದಾನೆ ಎಂದು ಪೊಲೀಸರ ವಿರುದ್ಧ ಆರೋಪಿಸಲಾಗಿದೆ. ಇದೀಗ ಯುವಕನ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ಹೊಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳಾದ ಬಿಲಾಲ್, ಲಿಂಗೇಗೌಡ, ಸುದರ್ಶನ್ ಹಾಗೂ ವಿಶ್ವನಾಥ್ ವಿರುದ್ಧ ಕೇಸು

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17.  ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಧ್ಯಾನ್ ಹಾಗೂ ರಮೇಶ್ ಎಂದು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17. ಖಾಸಗಿ ಬಸ್ ಚಾಲಕರೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ನಾಪತ್ತೆ- ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಮುಕ್ಕ ಮಿತ್ರಪಟ್ನ ಮಾತೃ ಛಾಯಾ ನಿವಾಸದ ಸ್ಪೂರ್ತಿ(17) ಜೂ. 08ರಿಂದ ಕಾಣೆಯಾಗಿರುವ ಬಗ್ಗೆ ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ ಇಂತಿವೆ: ಎತ್ತರ: 5 ಅಡಿ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಬಿಳಿ ಬಣ್ಣದ ಟೀಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಬಲಕುತ್ತಿಗೆಯಲ್ಲಿ ಬಿಳಿ ಬಣ್ಣದ 3 ಇಂಚಿನ ಮಚ್ಚೆ ಇದೆ ಹಾಗೂ ಕುತ್ತಿಗೆಯಲ್ಲಿ ಚಿನ್ನದ

ಯುವತಿ ನಾಪತ್ತೆ- ಪತ್ತೆಗೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 17. ಇಲ್ಲಿನ ನೆರಿಯಕಾಡು ಎಂಬಲ್ಲಿ ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿಳಿಸಿದೆ. ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನೆರಿಯ ಕಾಡು ಕೊಟ್ಟಕ್ಕರ ನಿವಾಸಿ, ತೋಟದ ಕೆಲಸಗಾರ ಜಾನ್ಸನ್ ಕೆ.ಎಂ. ಎಂಬಾತ 2021ರ ಜನವರಿ 21ರಂದು ಸೌಮ್ಯಾ ಫ್ರಾನ್ಸಿಸ್ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಹಲ್ಲೆಗೈದಿದ್ದ. ಗಂಭೀರ ಗಾಯಗೊಂಡು ಅಸ್ವಸ್ಥಳಾಗಿದ್ದ ಆಕೆಯನ್ನು

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top