ಕ್ರೈಮ್ ನ್ಯೂಸ್

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ . 17.  ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ, ಕಮಿಷನ್ ನೀಡುವುದಾಗಿ ನಂಬಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜೂ.7 ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಸಂದೇಶ ಮತ್ತು ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದು ಈ ಮೂಲಕ ಟಾಸ್ಕ್ ಪೂರೈಸಿದರೆ ಕಮಿಷನ್ ನೀಡುವುದಾಗಿ ಹೇಳಿ ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು 2.59 ಲ.ರೂ ಗಳನ್ನು ವರ್ಗಾಯಿಸಿದ್ದಾರೆ,ಆದರೆ ಅವರಿಗೆ ಹಣ ನೀಡದೆ ವಂಚನೆ ಮಾಡಲಾಗಿದೆ ಎಂದು ನಗರದ ಸೆನ್ ಠಾಣೆಯಲ್ಲಿ  […]

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೆಂಡಾಲ್ ಕುಸಿದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗಾವತಿ, ಜೂ. 16. ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲೆಂದು ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಪೆಂಡಾಲ್ ಬಿರುಗಾಳಿಗೆ ಹಾರಿ ಕೆಳಗೆ ಬಿದ್ದ ಪರಿಣಾಮ ಅಡುಗೆ ಕಾರ್ಯದಲ್ಲಿ ನಿರತರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಶಾಮೀದಾಬೀ(48)

ಪೆಂಡಾಲ್ ಕುಸಿದು ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆನ್-ಲೈನ್ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಆನ್-ಲೈನ್ ಗೂಗಲ್ ರಿವೀವ್ ಟಾಸ್ಕ್ ಕೆಲಸ ಮಾಡಿದಲ್ಲಿ ಕಮಿಷನ್ ನೀಡುವುದ಻ಗಿ ನಂಬಿಸಿ ಸುಮಾರು 1,15,180ರೂ. ವಂಚಿಸಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಗೆ ಜೂ. 06ರಂದು ಅಪರಿಚಿತನೋರ್ವ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಗೂಗಲ್ ರಿವೀವ್ ಟಾಸ್ಕ್ ಕೆಲಸ ಮಾಡಿದರೆ ಕಮಿಷನ್ ಕೊಡುವುದಾಗಿ ತಿಳಿಸಿ ಲಿಂಕ್ ಕಳಿಸಿದ್ದ. ಇದನ್ನು ನಂಬಿದ ದೂರುದಾರ ವ್ಯಕ್ತಿ ಮೂರು ಟಾಸ್ಕ್ ಗಳನ್ನು ಪೂರ್ಣಗೊಳಿಸಿದ್ದರು. ನಂತರ ಒಂಧು ಟಾಸ್ಕ್ ಗೆ 50

ಮಂಗಳೂರು: ಆನ್-ಲೈನ್ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 16. ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಕಿರೇಸೂರ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ (9) ಎಂದು ಗುರುತಿಸಲಾಗಿದೆ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗವಿ ಎಂಬಾತ ಗಾಯಗೊಂಡಿದ್ದು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು ನಿರ್ಮಾಣ ಹಂತದ ಶಾಲಾ ಕೊಠಡಿ ಬಳಿ ಆಟವಾಡುತ್ತಿದ್ದರು. ಈ

ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 16. ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್ 15ರ ಗುರುವಾರದಂದು ರಾತ್ರಿ 10.30ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ತೆರಳುತ್ತಿದ್ದ ವೇಳೆ, ದಿವ್ಯಾಳ ಗಂಡ ಆರೋಪಿ ಕುಮಾರ ಎಂಬಾತ ಆಟೋವನ್ನು

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ . 16 . ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತಾ  ಕಾಲೋನಿ ಮಸೀದಿ ಬಳಿ ನಡೆದಿದೆ. ಆರೋಪಿ ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ)newskadaba.com ಉಡುಪಿ,  ಜೂ  . 16 .  ಎರಡು ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆ ಹಾಗೂ ಮಗನಿಗೆ ಉಡುಪಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ದಾವಣಗೆರೆಯ  ಶಿವಶಂಕರ್ ಹಾಗೂ ಆತನ ಮಗ ಸಚಿನ್ ಎಂದು ಗುರುತಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ 2020ರ ಎಪ್ರಿಲ್ ನಿಂದ ಅಕ್ಟೋಬರ್ ವರೆಗೆ ಬೆಳಗಿನ ಜಾವ 5 ಗಂಟೆಗೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಹಾಸನ, ಜೂ. 15. ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಬೆತ್ತಲೆ ನೃತ್ಯ ಮಾಡುತ್ತಿದ್ದ ಆರೋಪದಡಿ ಮೂವರು ಯುವಕರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಂಧಿತನನ್ನು ದಯ, ರಂಜಿತ್ ಹಾಗೂ ಆನಂದ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಸ್ನೇಹಿತರಾಗಿದ್ದು, ಮದ್ಯ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿದ್ದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಕೋಟ, ಜೂ. 15. ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66ರ ಸಾಸ್ತಾನದ ಮಧುರಾ ಹೋಟಲ್ ಸಮೀಪ ನಡೆದಿದೆ. ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಇವರು ಸಾಸ್ತಾನ ಕೋಡಿ ರಸ್ತೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಹೋಟೆಲ್ ನಿಂದ ಊಟ ಪಾರ್ಸೆಲ್ ಪಡೆದು ರಸ್ತೆಬದಿ ನಡೆದುಕೊಂಡು ಬರುತ್ತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಜೀಪು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಮೇಶ್ ರನ್ನು ಆಸ್ಪತ್ರೆಗೆ ದಾಖಲಿಸುವ

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಚನ್ನಪಟ್ಟಣ ಜೂ.15. ಟಿಂಬರ್‌ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು,  ಮೂವರು ಗಾಯಗೊಂಡಿರುವ ಘಟನೆ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದೆ. ಮೃತರನ್ನು ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್‌.ಡಿ.ಕೋಟೆಗೆ ತೆರಳಿ, ಮದುವೆ ಮುಗಿಸಿಕೊಂಡು ವಾಪಸ್‌ ಬೆಂಗಳೂರಿಗೆ ಹಿಂದಿರುಗುತಿದ್ದ ವೇಳೆ ಈ ದುರ್ಘಟನೆ ನಡೆದಿದೆ. .    

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top