ಕ್ರೈಮ್ ನ್ಯೂಸ್

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹಾವೇರಿ, ಜೂ. 07. ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಸ್ಲೀಪರ್ ಕೋಚ್ ಬಸ್‌‌ನಲ್ಲಿ ವಿಷ ಸೇವಿಸಿದ್ದು, ಈ ಪೈಕಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಎಂದು ಗುರುತಿಸಲಾಗಿದೆ. ಮುಂಬೈಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. […]

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 03ರಂದು ಅಪರಿಚಿತನೋರ್ವ ಕರೆ ಮಾಡಿ ‘ನೀವು ಐಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ವ್ಯಕ್ತಿ ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದು, ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಕಾಲಾಪು ಎಂಬಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್, ಜಾಫರ್ ಸಾದಿಕ್, ಫಯಾಝ್ ಹಾಗೂ ಮಂಜೇಶ್ವರದ ಖಾಲಿದ್ ಬಿಎಂ ಎಂದು ಗುರುತಿಸಲಾಗಿದೆ. ಆರೋಪಿಗಳು ಅಮಲಮೊಗರು ಎಂಬಲ್ಲಿ ವೃದ್ಧೆಯೊಬ್ಬರಿಂದ ನಾಲ್ಕು ಹಸುಗಳನ್ನು ಖರೀದಿಸಿ ಕೇರಳ ನೋಂದಾಯಿತ ಸಂಖ್ಯೆಯ ಮಿನಿ ಗೂಡ್ಸ್ ವಾಹನದಲ್ಲಿ ಉಳ್ಳಾಲದ ಅಲೇಕಲಕ್ಕೆ ಸಾಗಿಸುತ್ತಿದ್ದ ವೇಳೆ, ಗೂಡ್ಸ್ ವಾಹನವು ಕೆಟ್ಟುನಿಂತು ಮುಂದೆ ಸಾಗಲು ಸಾಧ್ಯವಾಗದಿದ್ದಾಗ

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪತ್ನಿಯ ಜೊತೆ ಅಕ್ರಮ ಸಂಬಂಧ ಶಂಕೆ ➤ ಪ.ಬಂಗಾಳದ ಯುವಕನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 05. ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಇರಿಸಿಕೊಂಡಿರುವುದಾಗಿ ಸಂಶಯಿಸಿದ ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್‌ನಿಂದ ಹೊಡೆದು ಕೊಲೆಗೈದ ಘಟನೆ ಕೂಳೂರಿನಿಂದ ವರದಿಯಾಗಿದೆ. ಕೊಲೆಯಾದ ಯುವಕನನ್ನು ಮೂಲತಃ ಪಶ್ಚಿಮ ಬಂಗಾಳದ ಪ್ರಸ್ತುತ ಕುಳೂರಿನಲ್ಲಿ ವಾಸವಾಗಿರುವ ಬಿಕಾಸ್ ಗುನಿಯಾ (22) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಎಂದು ‌ಪೊಲೀಸರು ತಿಳಿಸಿದ್ದು, ಆತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮೃತ ಬಿಕಾಸ್ ಗುನಿಯಾ ಮತ್ತು ಆರೋಪಿ ವಾಸುದೇವ ಗುನಿಯಾ

ಮಂಗಳೂರು: ಪತ್ನಿಯ ಜೊತೆ ಅಕ್ರಮ ಸಂಬಂಧ ಶಂಕೆ ➤ ಪ.ಬಂಗಾಳದ ಯುವಕನ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 05. ಕ್ಷುಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಬಾರ್‌ ವೊಂದರಲ್ಲಿ ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ಬಾರ್‌ ಕ್ಯಾಶಿಯರ್‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಈತ ಬಾರ್‌ ಬಂದ್‌ ಮಾಡುವ ಸಮಯವಾದರೂ, ಆಯನೂರಿನ ಮೂವರು ಮದ್ಯ ಸೇವಿಸುತ್ತಿದ್ದು, ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದು ಹೇಳಿದರೂ, ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆಗ ಬಾರ್‌ನ ಅಸಿಸ್ಟೆಂಟ್‌ ಕ್ಯಾಶಿಯರ್‌ ಪೊಲೀಸರಿಗೆ ಕರೆ ಮಾಡಿದ್ದು,

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜೂ. 05. ಭೀಕರ ಕಾರು ಅಪಘಾತದಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರಾಗಿದ್ದ ಮಲಯಾಳಂ ನಟ ಕೊಲ್ಲಂ ಸುಧಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ.   ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು ಅಡಿಮಾಲಿ ಮತ್ತು ಉಲ್ಲಾಸ್ ಅರೂರ್ ಎಂಬವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕಾರು ತ್ರಿಶೂರ್ ಕಯ್ಪಮಂಗಲಂ ಪಣಾಂಬಿಕುನ್‌ ಎಂಬಲ್ಲಿ ಮುಂಜಾನೆ 4:30 ಕ್ಕೆ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ತಕ್ಷಣವೇ ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಸುಧಿ ಅವರು ಅದಾಗಲೇ

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಬಳಿ ಇಂದು ಮುಂಜಾನೆ ನಡೆದಿದೆ. ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಹುಣಸೂರಿನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಂಬವೇರಿದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ➤ ಗಂಭೀರ ಗಾಯಗೊಂಡಿದ್ದ ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.01. ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ಗುರುವಾರದಂದು ಕಡಬದಲ್ಲಿ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ದ್ಯಾಮಣ್ಣ ಎಂದು ಗುರುತಿಸಲಾಗಿದೆ. ಕಡಬದ ಮುಳಿಮಜಲು ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ದ್ಯಾಮಣ್ಣರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಕಂಬದಲ್ಲೇ ಕೆಲಕಾಲ ಬಾಕಿಯಾಗಿದ್ದ ಅವರಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟ

ಕಡಬ: ಕಂಬವೇರಿದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ➤ ಗಂಭೀರ ಗಾಯಗೊಂಡಿದ್ದ ಲೈನ್ ಮ್ಯಾನ್ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top