ಕ್ರೈಮ್ ನ್ಯೂಸ್

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.29. ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು ಎಂದು ಗುರುತಿಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.  

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ, 29. ನಸುಕಿನ ವೇಳೆ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ (ಎಇಸಿ) ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 01 ಜಿಸಿ 8829 ನೋಂದಣಿ ಸಂಖ್ಯೆಯ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕ್ಬರಿ ಫ್ಲೈಓವರ್ ರಸ್ತೆಯ ಎದುರು ಲೇನ್‌ನಲ್ಲಿ ಬೊಲೆರೋ ಡಿಐ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.  

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.29. ಗೂನಡ್ಕದ ಸಮೀಪ ಸರ್ಕಾರಿ ಬಸ್‌ಗೆ ಹಿಂದಿನಿಂದ ಬಂದು ಆಲ್ಟೋ ಕಾರು ಗುದ್ದಿದ ಘಟನೆ ಸಂಭವಿಸಿದೆ. ಘಟನೆಯ ರಭಸಕ್ಕೆ ಅಲ್ಟೋ ಕಾರು ಬಸ್ಸಿನೊಳಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ಘಟನೆಯಿಂದ ಯಾವುದೇ ಪ್ರಾಣ ಹಾನಿ, ಗಾಯ ಸಂಭವಿಸಿಲ್ಲ. ಬಸ್‌ ಸುಳ್ಯದಿಂದ ಕೊಯನಾಡಿಗೆ ಸಂಚರಿಸುತ್ತಿತ್ತು. ಅದೇ ಮಾರ್ಗವಾಗಿ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಹಿಂಬದಿಯಿಂದ ಢಿಕ್ಕಿಯಾಗಿದೆ.

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕುಷ್ಟಗಿ, ಮೇ.29. ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ‌ ನಡೆದಿದೆ‌. ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎಂದು ಗುರುತಿಸಲಾಗಿದೆ.  

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮೇ.29. ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ವಧು  ನಿದ್ರಿಸುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ. ಪೈಜ್ ರಡ್ಡಿ (19) ವರ್ಷದ ಯುವತಿ  ಈ ಘಟನೆಯಲ್ಲಿ ಮೃತಪಟ್ಟ ವಧು ಎಂದು ಗುರುತಿಸಲಾಗಿದೆ. ಈ ಘಟನೆ ಅಮೇರಿಕಾದ ವಿಸ್ಕಾನ್ಸಿನ್‌ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಎರಡನೇ ಮಹಡಿಯಲ್ಲಿ  ನಿದ್ರಿಸುತ್ತಿದ್ದ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಹೊಗೆಯಿಂದಾಗಿ ಉಸಿರುಗಟ್ಟಿ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫ‌ಲಕಾರಿಯಾಗದೆ ಯುವತಿ  ಸಾವನ್ನಪ್ಪಿದ್ದಾಳೆ

ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಸುಳ್ಯ, ಮೇ.29. ಬೈಕ್ ವೊಂದು ಪಾದಚಾರಿಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮಂಡೆಕೋಲು ಗ್ರಾಮದ ಭವಾನಿಶಂಕರ್, ಪತ್ನಿ ಲೀಲಾವತಿ ಹಾಗೂ ಇಬ್ಬರು ಮಕ್ಕಳು ಸುಳ್ಯದಿಂದ ಮಂಡೆಕೋಲು ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಗುದ್ದಿದ್ದು, ಬೈಕ್ ನಲ್ಲಿದ್ದ ನಾಲ್ವರೂ ಕೂಡಾ ರಸ್ತೆಗೆಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ.  

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.29. ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ. ಇದ್ದು ತಪಾಸಣೆಯ ವೇಳೆ ಮೂವರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೈಂದೂರು, ಮೇ.29. ಯುವತಿಯೋರ್ವಳು ನಿರುದ್ಯೋಗದಿಂದ ಮನನೊಂದು ಡೆತ್‌ ನೋಟ್‌ ಬರೆದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ಎಂಬಲ್ಲಿ ಸಂಭವಿಸಿದೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ – ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಭಾನುವಾರದಂದು ನಡೆದಿದೆ. ಇಚಿಲಂಪಾಡಿ ನಿವಾಸಿ ವಿಜುಕುಮಾರ್ ಎಂಬವರು ಭಾನುವಾರ ಮಧ್ಯಾಹ್ನ ವೇಳೆಗೆ ಕೆಲಸ ಬಿಟ್ಟು ತೆರಳುತ್ತಿದ್ದ ಸಮಯದಲ್ಲಿ ಕಾಡಾನೆಯು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ವಿಜುಕುಮಾರ್ ರನ್ನು ಕಡಬದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸರದಲ್ಲಿ 2 ಆನೆಗಳು ಇರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರೆತಿದ್ದು, ಸುಬ್ರಹ್ಮಣ್ಯ-ಧರ್ಮಸ್ಥಳ

ಕಡಬ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ – ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.27. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಮನದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಲ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top