ಕ್ರೈಮ್ ನ್ಯೂಸ್

ಬೆಟ್ಟಿಂಗ್ ಆಪ್ ಪ್ರಕರಣ: ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನಲ್ಲಿ ಇಡಿ ಮುಂದೆ ಹಾಜರು

(ನ್ಯೂಸ್‌ ಕಡಬ) newskadaba.com, ಆ.11 : ತೆಲಂಗಾಣದಲ್ಲಿ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನ ಬಶೀರ್‌ಬಾಗ್ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ರಾಣಾ ವಿವಿಧ ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪಗಳ ಹಿನ್ನೆಲೆ ನೋಟೀಸ್ ನೀಡಿತ್ತು. ಈಗಾಗಲೇ ನಟರಾದ ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಇನ್ನೂ ನಟಿ ಮಂಚು ಲಕ್ಷ್ಮಿ […]

ಬೆಟ್ಟಿಂಗ್ ಆಪ್ ಪ್ರಕರಣ: ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನಲ್ಲಿ ಇಡಿ ಮುಂದೆ ಹಾಜರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಆ.11 : ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ನಡೆದಿದೆ. ಪ್ರಸ್ತುತ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದು, ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಆನೆ ಆತನನ್ನು ನೆಲಕ್ಕೆ ತಳ್ಳಿದ ಪರಿಣಾಮ ಆತ ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು:  ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲಿಸರು  12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಪಿಲ್‌ ಶರ್ಮಾ ಕೆಫೆ ಮೇಲೆ ಮತ್ತೆ ಅಟ್ಯಾಕ್‌

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಹಾಸ್ಯ ನಟ ಕಪಿಲ್ ಶರ್ಮಾ ಅವರ ಕೆಫೆ ಮೇಲೆ ಮತ್ತೆ ದಾಳಿ ನಡೆದಿದೆ. ಏಕಾಏಕಿ ಕೆಫೆಗೆ ನುಗ್ಗಿದ 25ಜನರ ತಂಡ ಗುಂಡಿನ ದಾಳಿ ನಡೆಸಿದೆ. ಇನ್ನು ದಾಳಿಯ ಹೊಣೆಯನ್ನು ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಲ್ಡಿ ಧಿಲ್ಲೋನ್ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗಳು ಹೊತ್ತುಕೊಂಡಿವೆ. ಇನ್ನು ದಾಳಿಯ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಗುಂಡಿನ ಸದ್ದಿನ ನಡುವೆ ಒಂದು ಧ್ವನಿ ಕೇಳಿಸುತ್ತಿದೆ. ನಾವು ಗುರಿಯಿಟ್ಟಿದ್ದ ವ್ಯಕ್ತಿಗೆ ಕರೆ ಮಾಡಿದ್ದೆವು, ಆತ

ಕಪಿಲ್‌ ಶರ್ಮಾ ಕೆಫೆ ಮೇಲೆ ಮತ್ತೆ ಅಟ್ಯಾಕ್‌ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

15 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ ಅತ್ಯಾಚಾರಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.08: ಒಡಿಶಾದ ಗಂಜಾಂ ಜಿಲ್ಲೆಯ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಮುಂಬೈನಲ್ಲಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ. ಬೆರ್ಹಾಂಪುರ ಪಟ್ಟಣದ ಬೈದ್ಯನಾಥಪುರ ಪೊಲೀಸ್‌‍ ಠಾಣೆಯಲ್ಲಿ ಇತ್ತೀಚೆಗೆ ದಾಖಲಾಗಿದ್ದ ಶೂನ್ಯ ಎಫ್‌ಐಆರ್‌ ಆಧರಿಸಿ ಮುಂಬೈನ ಪಾರ್ಕ್‌ಸೈಟ್‌ ಪೊಲೀಸರು 23 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಜುಲೈ 28 ರಂದು ಬೆರ್ಹಾಂಪುರ ಪೊಲೀಸ್‌‍ ವರಿಷ್ಠಾಧಿಕಾರಿ ಸರವಣ ವಿವೇಕ್‌ ಎಂ, ಬಲಿಪಶುವನ್ನು ದಾಖಲಿಸಲಾಗಿದ್ದ ಸ್ತ್ರೀರೋಗ ವಿಭಾಗದಿಂದ

15 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ ಅತ್ಯಾಚಾರಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವು

(ನ್ಯೂಸ್‌ ಕಡಬ) newskadaba.com, ಆ.08: ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ್ದು, ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದ ಕಾಂಡ್ವಾ ಬಳಿ ಗುರುವಾರ ಸಂಭವಿಸಿದೆ. ಬಸಂತ್ ಘರ್‌ನಲ್ಲಿ ನಡೆದ ಕಾರ್ಯಾಚರಣೆಯಿಂದ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ವಾಹನವು ಸೇನಾ ಪಡೆಯ

ಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಅನುಮಾನಾಸ್ಪದ ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಇಂದು 13ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸಲಿದ್ದಾರೆ.ಈ ಮೊದಲು ಬಂಗ್ಲಗುಡ್ಡದಲ್ಲಿ ತಾನು ತೋರಿಸಿದ್ದ ಜಾಗ ಹೊರತುಪಡಿಸಿ ಮತ್ತೊಂದು ಸ್ಥಳಕ್ಕೆ ಎಸ್‌‍ಐಟಿ ಅಧಿಕಾರಿಗಳನ್ನು ಅನಾಮಧೇಯ ವ್ಯಕ್ತಿ ಕರೆದುಕೊಂಡು ಹೋಗಿದ್ದರು. ಅಲ್ಲಿ ಭೂಮಿಯ ಮೇಲ್ಭಾಗದಲ್ಲೇ ಹಲವಾರು ಅಸ್ಥಿಗಳು ದೊರೆತ್ತಿದ್ದವು ಅವುಗಳನ್ನು ಜಪ್ತಿ ಮಾಡಿರುವ ಎಸ್‌‍ಐಟಿ ಅಧಿಕಾರಿಗಳು ಬಹುಶಃ ಬಂಗ್ಲಗುಡ್ಡದ ಮೇಲೆ ಆತಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿರಬಹುದು, ಹೀಗಾಗಿ ಭೂಮಿಯ ಮೇಲ್ಭಾಗದಲ್ಲಿ ಸಿಕ್ಕಿರುವ ಅಸ್ತಿಗಳ ಕುರಿತು

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯ ರಾತ್ರಿಯೇ ವಧು ಆತ್ಮಹತ್ಯೆಗೆ ಶರಣು

(ನ್ಯೂಸ್‌ ಕಡಬ) newskadaba.com, ಆ.07: ಹೈದರಾಬಾದ್ ನ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿ ಮಂಡಲದ ಕುಟುಂಬವೊಂದರಲ್ಲಿ 22 ವರ್ಷದ ವಧು ಹರ್ಷಿತಾ ತನ್ನ ಮದುವೆಯ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅದ್ಧೂರಿ ವಿವಾಹ ಸಮಾರಂಭ ನಡೆದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ. ದಂಪತಿಗಳು ವಧುವಿನ ಮನೆಯಲ್ಲಿದ್ದರು, ಅಲ್ಲಿ “ಮೊದಲ ರಾತ್ರಿ” ಸಮಾರಂಭದ ವ್ಯವಸ್ಥೆಗಳು ನಡೆಯುತ್ತಿದ್ದವು. ನಾಗೇಂದ್ರ ಸಿಹಿತಿಂಡಿಗಳನ್ನು ತರಲು ಹೊರಗೆ ಹೋಗಿದ್ದರು ಎಂದು ವರದಿಯಾಗಿದೆ, ಮತ್ತು ಅವರು ಹಿಂತಿರುಗಿದಾಗ, ಕೋಣೆ ಲಾಕ್ ಆಗಿರುವುದನ್ನು

ಮದುವೆಯ ರಾತ್ರಿಯೇ ವಧು ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಆರು ತಿಂಗಳಲ್ಲಿ 2.3 ಲಕ್ಷ ನಾಯಿ ಕಡಿತ ಪ್ರಕರಣಗಳು – 19 ರೇಬೀಸ್ ಸಾವುಗಳು ವರದಿ

(ನ್ಯೂಸ್‌ ಕಡಬ) newskadaba.com, ಆ.07: 2025 ರ ಮೊದಲ ಆರು ತಿಂಗಳಲ್ಲಿ ಕರ್ನಾಟಕದಲ್ಲಿ 2.31 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 19 ರೇಬೀಸ್ ಸಂಬಂಧಿತ ಸಾವುಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳು ತಿಳಿಸಿವೆ. 2024 ರಲ್ಲಿ ಇದೇ ಅವಧಿಗೆ ಹೋಲಿಸಿದರೆ ಈ ಸಂಖ್ಯೆಗಳು ಗಮನಾರ್ಹ ಏರಿಕೆಯನ್ನು ಸೂಚಿಸುತ್ತವೆ. ಆಗ 1.69 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 18 ರೇಬೀಸ್ ಸಾವುಗಳು ದಾಖಲಾಗಿದ್ದವು. ಇದೀಗ 36.20% ಹೆಚ್ಚಳವನ್ನು ಸೂಚಿಸುತ್ತಿದೆ.

ಕರ್ನಾಟಕದಲ್ಲಿ ಆರು ತಿಂಗಳಲ್ಲಿ 2.3 ಲಕ್ಷ ನಾಯಿ ಕಡಿತ ಪ್ರಕರಣಗಳು – 19 ರೇಬೀಸ್ ಸಾವುಗಳು ವರದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top