ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಟೇಕ್ ಆಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 8:30ಕ್ಕೆ ಹೊರಟಿತ್ತು, ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೇಯಲ್ಲಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ಬಳಿಕ ಯಾಣಿಕರನ್ನು ಇಳಿಸಿ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ […]

ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಪು, ಮೇ.26. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಸಂಬಂಧ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ‌ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್( 24)

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ಗಾಂಜಾ ಪೂರೈಕೆ ಪಕರಣ ➤ಕಾರಾಗೃಹದ ಸಿಬ್ಬಂದಿ ಅಮಾನತು

(ನ್ಯೂಸ್ ಕಡಬ) newskadaba.com.ಮಂಗಳೂರು, ಮೇ.25. ಕೈದಿಗೆ ಗಾಂಜಾ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ ಸಿಬ್ಬಂದಿ ಪ್ರಕಾಶ್ ಗಾವಡೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೈದಿಗಳ ಭೇಟಿಗೆ ಆಗಮಿಸುವ ಸಂಬಂಧಿಕರು ಮಾತ್ರವಲ್ಲದೇ, ಅಧಿಕಾರಿಗಳು, ಸಿಬ್ಬಂದಿಯನ್ನು ಕೆಐಎಸ್ಎಫ್ ಸಿಬ್ಬಂದಿ ನಿರಂತರ ತಪಾಸಣೆಗೆ ಒಳಪಡಿಸುತ್ತಿದ್ದು, ಅದರಂತೆ ತಪಾಸಣೆ ವೇಳೇ ಪ್ರಕಾಶ್ ಬಳಿ ಗಾಂಜಾ ಪತ್ತೆಯಾಗಿತ್ತು. ಈ ಬಗ್ಗೆ ಮೇ.11 ರಂದು ಬರ್ಕೆ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಈಗ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಮಂಗಳೂರು ಗಾಂಜಾ ಪೂರೈಕೆ ಪಕರಣ ➤ಕಾರಾಗೃಹದ ಸಿಬ್ಬಂದಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಾರು-ಬೈಕ್‌ ಅಪಘಾತ ➤ ಕೆಎಸ್ಸಾರ್ಟಿಸಿ ಚಾಲಕ ಮೃತ್ಯು

 (ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.25. ಕರ್ತವ್ಯ ಮುಗಿಸಿ ಮನೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಚಾಲಕರೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೇ 18 ರಂದು ಬೆಳಗ್ಗೆ ಕರ್ತವ್ಯ ಮುಗಿಸಿ ಬೈಕಿನಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಕೊಕ್ಕಡ ಸಮೀಪದ ಕುಡಲ್‌ ಎಂಬಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರನ್ನು

ಬೆಳ್ತಂಗಡಿ: ಕಾರು-ಬೈಕ್‌ ಅಪಘಾತ ➤ ಕೆಎಸ್ಸಾರ್ಟಿಸಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಜಾತ್ರೆಯಲ್ಲಿ ಆಡುತ್ತಿದ್ದ ಬಾಲಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com. ದೊಡ್ಡಬಳ್ಳಾಪುರ, ಮೇ.25. ಮುತ್ಯಾಲಮ್ಮ ಜಾತ್ರೆಯಲ್ಲಿ ಏರ್​ ಬಲೂನ್​ ಜಂಪಿಂಗ್​​ ಆಟವಾಡುತ್ತಿದ್ದ ಬಾಲಕ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆಯಿತು.  ಬಾಲಕನ ಸಾವಿನಿಂದಾಗಿ ಜಾತ್ರೆಯ ಆಯೋಜಕರ ಮೇಲೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಮಂಜುನಾಥ್ ಎಂಬವರ ಪುತ್ರ 11 ವರ್ಷದ ಶ್ರೇಯಸ್​ ಮೃತ ಬಾಲಕ. ಮಂಜುನಾಥ್​ ಅವರು ಚಿಕ್ಕ ಕುರುಕಲು ಅಂಗಡಿ ನಡೆಸುತ್ತಿದ್ದಾರೆ. ಶ್ರೇಯಸ್​ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ರಾತ್ರಿ ತನ್ನ ತಾಯಿ ಜೊತೆಗೆ

ಜಾತ್ರೆಯಲ್ಲಿ ಆಡುತ್ತಿದ್ದ ಬಾಲಕ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್

ಮಂಗಳೂರು: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.24. ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಅಡ್ಯಾರ್ ಬಳಿಯ ನಿವಾಸಿ ನವಾಝ್ ಶರೀಫ್ ಎಂಬುವವರ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ನೋಂದಣಿ ಸಂಖ್ಯೆ 46/2020 ಕಲಂ 143, 147, 323, 504, 427, 307 ಆರ್/ಡಬ್ಲ್ಯು 149 ಐಪಿಸಿ ಮತ್ತು ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.  

ಮಂಗಳೂರು: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.24. 200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ !

(ನ್ಯೂಸ್ ಕಡಬ)newskadaba.com ಕಡಬ, ಮೇ.24. ಕಡಬ ಸಮೀಪದ  ಇಚ್ಲಂಪಾಡಿಯಲ್ಲಿ ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ ಎಂದು ವರದಿ ತಿಳಿಸಿದೆ. ಅನುಮತಿ ಪಡೆದು ಮರಳುಗಾರಿಕೆ ನಡೆಸುತ್ತಿದ್ದೇವೆ ಎಂದು ಮರಳು  ಸಂಗ್ರಹಕಾರರು ಮಾಹಿತಿಯನ್ನು ನೀಡುತ್ತಿದ್ದರಾದರೂ ಕೂಡಾ, ಅನುಮತಿ ಪತ್ರ ಒಂದು ಕಡೆಯ ಪ್ರದೇಶದದ್ದಾರೆ ಬೇರೊಂದು ಕಡೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.  ಅಲ್ಲದೆ, ಅನುಮತಿ ಒಂದು ಕಡೆ, ಮರಳು ಸಂಗ್ರಹ ಇನ್ನೊಂದು ಕಡೆ ಎಂಬ ಆರೋಪಕ್ಕೆ ಸಾಕ್ಷಿಯೆಂಬಂತೆ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.24. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ.  ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ. ಯುವಕ  ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಬಾಲಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ  ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.24. ವಿಷ್ಣು ಸರ್ಕಲ್ ಬಳಿ ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಅತಿ ವೇಗದಿಂದ ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದ್ದು, ಚಾಲಕ ಗಾಬರಿಗೊಂಡು ಲಾರಿಯನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಳ್ಯದಿಂದ ಕೊಯನಾಡಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ನ ಹಿಂಭಾಗ ಜಖಂಗೊಂಡಿದೆ. ಘಟನೆಯಿಂದ ಓರ್ವ ಪ್ರಯಾಣಿಕನಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭಿಸಿದೆ. ಸುಳ್ಯ ಪೊಲೀಸರು ಘಟನಾ

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top