ಕ್ರೈಮ್ ನ್ಯೂಸ್

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿ ನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಪು: ಅಡ್ಡಾದಿಡ್ಡಿ ಚಲಾವಣೆ     ➤ ನಾಲ್ವರ ವಿರುದ್ದ ಕೇಸು, ವಾಹನ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಮೇ.24. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಡ್ಡಾದಿಡ್ಡಿಯಾಗಿ‌ ವಾಹನ ಚಲಾಯಿಸಿ ಸಾರ್ವಜನಿಕ ಸಂಚಾರಕ್ಕೆ ತೊಡಕು ಉಂಟು ಮಾಡಿದ ನಾಲ್ವರು ಕಾರು ಚಾಲಕರ ಮೇಲೆ ಕಾಪು ಪೋಲಿಸರು ಕೇಸ್ ದಾಖಲಿಸಿದ್ದಾರೆ. ವಾಹನ ಚಾಲಕರಾದ ಗುಡ್ಡೆಯಂಗಡಿ ಉದ್ಯಾವರ ಗ್ರಾಮ ಅಯಾನ್ (24), ಕುಂಜಿಬೆಟ್ಟು ಮಿಶಾಲ್ವುದ್ದೀನ್ (23) ಉಡುಪಿಯ ಹೈಕ ಬಿಲ್ಡಿಂಗ್ ಶಾನೂನ್ ಡಿಸೋಜಾ (25), ಕೊಡಂತೂರು 10ನೇ ಕ್ರಾಸ್ ವಿವೇಕ್ (23) ಎಂಬ ನಾಲ್ವರ ವಿರುದ್ದ ಕೇಸು ದಾಖಲಿಸಿದ್ದಾರೆ.

ಕಾಪು: ಅಡ್ಡಾದಿಡ್ಡಿ ಚಲಾವಣೆ     ➤ ನಾಲ್ವರ ವಿರುದ್ದ ಕೇಸು, ವಾಹನ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮೇ. 23. ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಾಣಿ ಮೈಸೂರು ಹೆದ್ದಾರಿ ಸಮೀಪದ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮರ್ಕಂಜ ಗ್ರಾಮದ ನಿವಾಸಿ ನವೀನ್ ಸಂಕೇಶ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಸುಳ್ಯ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್‌ ಮತ್ತು ಬಸ್‌ ಭೀಕರ ಅಪಘಾತ ➤ 6 ಮಂದಿ ಮೃತ್ಯು, 13 ಜನರು ಗಂಭೀರ

 (ನ್ಯೂಸ್ ಕಡಬ) newskadaba.com. ಮುಂಬೈ, ಮೇ.23. ಟ್ರಕ್‌ ಮತ್ತು ಬಸ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಬೈ-ನಾಗ್ಪುರ ಹಳೆಯ ಹೆದ್ದಾರಿಯಲ್ಲಿ ನಡೆದಿದೆ. ಮುಂಬೈ-ನಾಗ್ಪುರ ಹಳೆಯ ಹೆದ್ದಾರಿಯ ಬುಲ್ದಾನದ ಸಿಂಧಖೇಡ್ ರಾಜದಲ್ಲಿ ರಾಜ್ಯ ಬಸ್‌ಗೆ ಟ್ರಕ್ ಢಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  ಇನ್ನು ಈ ಅಪಘಾತದಲ್ಲಿ 13 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇದರಲ್ಲಿ

ಟ್ರಕ್‌ ಮತ್ತು ಬಸ್‌ ಭೀಕರ ಅಪಘಾತ ➤ 6 ಮಂದಿ ಮೃತ್ಯು, 13 ಜನರು ಗಂಭೀರ Read More »

ಕ್ರೈಮ್ ನ್ಯೂಸ್

ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.23. ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಗುರುವಾಯನಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಾಲಾ ಬಸ್ ಬೆಳ್ತಂಗಡಿಯಿಂದ ಮದಡ್ಕ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ಯೋಗೀಶ್ ಪೂಜಾರಿ ಅವರಿಗೆ ಡಿಕ್ಕಿ ಹೊಡೆದು ಅವರ ಕಾಲಿನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಯೋಗೀಶ್ ರವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ. ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.  

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.22. ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಢಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಬೊಲೆರೋ ➤ ಆರು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com.ಕಾರ್ಕಳ, ಮೇ.22. ತೀರ್ಥಯಾತ್ರೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ಬೆಳಗಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ನಿನ್ನೆ

ಕಾರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಬೊಲೆರೋ ➤ ಆರು ಮಂದಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

8ನೇ ತರಗತಿಯ ಬಾಲಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ನೋಯ್ಡ, ಮೇ.22. ಗ್ರೇಟರ್ ನೋಯ್ಡಾದಿಂದ ವರದಿಯಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಶಾಲೆಯಿಂದ ಮನೆಗೆ ಹೋಗುವಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗೌತಂಬುದ್ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ರೋಹಿತ್ ಸಿಂಗ್ ಪ್ರಜ್ಞೆ ತಪ್ಪಿ ಬಿದ್ದಾಗ ಶಿಕ್ಷಕರು ಆತನಿಗೆ ಸಹಾಯ ಮಾಡಲು ಪ್ರಯತ್ನಿಸಿದರು. ಶಿಕ್ಷಕರು ಬಾಲಕನಿಗೆ ಆಸ್ಪತ್ರೆಗೆ ಕರೆದೊಯ್ದ ನಂತರ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.  

8ನೇ ತರಗತಿಯ ಬಾಲಕ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ

(ನ್ಯೂಸ್ ಕಡಬ)newskadaba.com ತುಮಕೂರು, ಮೇ.22. ಯುವಕನನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಹೊರವಲಯದಲ್ಲಿರುವ ಯಲ್ಲಾಪುರದ ಅಂಗಡಿಯೊಂದರಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಎಂಬವರು ಕೊಲೆಯಾಗಿದ್ದಾರೆ. ಜಾಕೀರ್ ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದರು.2 ತಿಂಗಳ ಹಿಂದೆ ನೂತನ ಟೈಲ್ಸ್‌ನ ಅಂಗಡಿಯನ್ನು ಯಲ್ಲಾಪುರದಲ್ಲಿ ತೆರೆದಿದ್ದನು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top