ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.15. ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ  ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಮೇಲೆ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್ಐಆರ್ ದಾಖಲಾಗಿದೆ.  ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಸೂಪರ್ ಮಾರ್ಕೇಟ್​ನ ಬಿಲ್ಲಿಂಗ್ […]

ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು

(ನ್ಯೂಸ್ ಕಡಬ) newskadaba.com.ಮಂಗಳೂರು,  ಮೇ.15. ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನ

 (ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.13. ಕಾಂಗ್ರೆಸ್ ಗೆಲುವಿನ ನಡುವೆಯೂ ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಪತಿ ಸಾವನ್ನಪ್ಪಿದ್ದು, ರಾಮೇಗೌಡ (69) ವರ್ಷ ಮೃತ ವ್ಯಕ್ತಿ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ರಾಮೇಗೌಡ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಮಗನನ್ನು ಅಗಲಿದ್ದಾರೆ. ಸಂಜೆ ವೇಳೆಗೆ ಸಿದ್ದರಾಮನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಸರಣಿ ಅಪಘಾತ ➤ ವಾಹನಗಳಿಗೆ ಹಾನಿ

 (ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.13. ನಗರದ ಬಾವುಟ ಗುಡ್ಡೆಯ ಬಳಿ ಸರಣಿ ಅಪಘಾತ ಸಂಭವಿಸಿದ್ದು,10ಕ್ಕೂ ಅಧಿಕ ವಾಹನಗಳು ಜಖಂಗೊಂಡಿವೆ. ಬಾವುಟಗುಡ್ಡೆ ಕಡೆಯಿಂದ ಜ್ಯೋತಿ ವೃತ್ತದ ಕಡೆಗೆ ತೆರಳುತ್ತಿದ್ದ ಬಸ್ ಅಕ್ಕಪಕ್ಕದಲ್ಲಿದ್ದ ಕಾರು, ಬೈಕ್ ಗಳಿಗೆ ಢಿಕ್ಕಿ ಹೊಡೆದಿದ್ದು,ಅಪಘಾತದಲ್ಲಿ ಒಂದು ಬೈಕ್ ಬಸ್ ನಡಿಗೆ ಬಿದ್ದು ಸವಾರ ಅಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನಿಗೆ ತಲೆ ಸುತ್ತು ಬಂದು ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮಂಗಳೂರು ಸರಣಿ ಅಪಘಾತ ➤ ವಾಹನಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಾರ್ಟ್‌ಮೆಂಟ್‌ಗೆ ಪೇಂಟಿಂಗ್‌ ಮಾಡುವ ವೇಳೆ ಕೆಳಗೆ ಬಿದ್ದು ಪೇಂಟರ್‌ ಮೃತ್ಯು

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.12. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಒಂದಕ್ಕೆ ಪೇಂಟಿಂಗ್‌ ಮಾಡುವಾಗ ತಾನು ಕಟ್ಟಿಕೊಟ್ಟಿಂಡಿದ್ದ ಹಗ್ಗ ತುಂಡಾಗಿ ಮೂರನೇ ಮಹಡಿಯಿಂದ ಪೇಂಟರ್‌ ಬಿದ್ದು ಸಾವನಪ್ಪಿರುವ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರದ ಮಹಾರಾಜ ಪ್ಯಾಲೇಸ್ ಫೇಸ್ ನಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ಪೇಂಟಿಂಗ್‌ ಕಾರ್ಯವನ್ನು ಮಾಡಲಾಗುತ್ತಿತ್ತು. ಇನ್ನು ಪೇಂಟಿಂಗ್‌ ಮಾಡುವವರು ಸುರಕ್ಷತೆಗಾಗಿ ರೋಪ್‌, ಹೆಲ್ಮೆಟ್‌ ಸೇರಿದಂತೆ ಹಲವು ಸುರಕ್ಷತಾ ಸಾಧನಗಳನ್ನು ಬಳಸಬೇಕು. ಆದರೆ, ಇಲ್ಲಿ ಸುರಕ್ಷತೆಗಾಗಿ ಬಳಕೆ ಮಾಡಲಾದ ಹಗ್ಗವೇ ಕಳಪೆಯಾಗಿದ್ದ, ಪೇಂಟಿಂಗ್‌

ಅಪಾರ್ಟ್‌ಮೆಂಟ್‌ಗೆ ಪೇಂಟಿಂಗ್‌ ಮಾಡುವ ವೇಳೆ ಕೆಳಗೆ ಬಿದ್ದು ಪೇಂಟರ್‌ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆತ್ತತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪಾಪಿ ಮಗ

 (ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ.12.ಮಗನೊಬ್ಬ ತನ್ನ ತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿ, ತಂದೆಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಡೆದಿದೆ. ಈ ದುರ್ಘಟನೆಯಿಂದ, ಮೃತಪಟ್ಟ ಮಹಿಳೆಯನ್ನು ವಿನಿತಾ ಭಟ್ಕರ್(66) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಮೃತ ಮಹಿಳೆ ವಿನಿತಾ ತನ್ನ ಪತಿಯೊಂದಿಗೆ ಕೊಪ್ರಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಗುರುವಾರ ಜಗಳವಾಡುವ ಸಂದರ್ಭದಲ್ಲಿ ಸಿಟ್ಟಿಗೆದ್ದ ಆರೋಪಿಯು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯ ಚಾಕುವಿನಿಂದ ಪೋಷಕರ ಮೇಲೆ ಹಲ್ಲೆ

ಹೆತ್ತತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪಾಪಿ ಮಗ Read More »

ಕ್ರೈಮ್ ನ್ಯೂಸ್

ಮೂಡುಶೆಡ್ಡೆ ಘರ್ಷಣೆ ➤ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com.ಕಾವೂರು, ಮೇ.12. ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಗೆ ಸಂಬಂಧಿಸಿ ಐದು ಎಫ್ ಐ ಆರ್ ದಾಖಲಿಸಿದ್ದು, ಕೃತ್ಯದಲ್ಲಿ ಭಾಘಿಯಾದ ಇತರ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ. ಮತದಾನದ

ಮೂಡುಶೆಡ್ಡೆ ಘರ್ಷಣೆ ➤ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಯಾದ ಹತ್ಯೆ ➤ಅನ್ಯ ಜಾತಿಯ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ!

(ನ್ಯೂಸ್ ಕಡಬ) newskadaba.com. ಉತ್ತರಪ್ರದೇಶ, ಮೇ.12. ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಕ್ಕೆ ಜೋಡಿಯನ್ನು ಯುವತಿಯ ಕಡೆಯವರು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ವರದಿಯಾಗಿದೆ. ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಠಾಕೂರ್​ ಸಮುದಾಯಕ್ಕೆ ಸೇರಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯೂ ದಲಿತ ಸಮುದಾಯಕ್ಕೆ ಸೇರಿದ್ದ 19ವರ್ಷ ಪ್ರಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ತಮ್ಮ ಮಗಳು ಕೆಳಜಾತಿಯ ಯುವಕನನ್ನು ಮದುವೆಯಾಗಿರುವ ವಿಚಾರ ತಿಳಿದ ಪೋಷಕರು ಜೋಡಿಗೆ

ಮರ್ಯಾದ ಹತ್ಯೆ ➤ಅನ್ಯ ಜಾತಿಯ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ! Read More »

ಕ್ರೈಮ್ ನ್ಯೂಸ್

ವ್ಯಕ್ತಿಗೆ‌ ಮಾರು ಹೋಗಿ‌ ಹಣ ಚಿನ್ನ ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.12. ಮ್ಯಾಟ್ರಿಮೋನಿಯಲ್​​ ವೆಬ್‌ಸೈಟ್‌ ಮೂಲಕ ಪರಿಚಯವಾಗಿದ್ದ ವ್ಯಕ್ತಿಯ ಮಾತಿಗೆ ಮರುಳಾದ ಬೆಂಗಳೂರು ಮೂಲದ ಮಹಿಳೆಯು ಲಕ್ಷಾಂತರ ನಗದು ಚಿನ್ನಾಭರಣಗಳನ್ನು ಕಳೆದುಕೊಂಡು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಏರ್‌ ಲೈನ್ ಉದ್ಯೋಗಿಯಾಗಿದ್ದ 39 ವರ್ಷ ವಯಸ್ಸಿನ ಬೆಂಗಳೂರಿನ ಮಹಿಳೆ, 15 ದಿನಗಳ ಹಿಂದೆ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ಮೂಲಕ ಅನ್ಶುಲ್ ಜೈನ್ ನನ್ನು ಸಂಪರ್ಕಿಸಿದ್ದಾರೆ. ಅನ್ಶುಲ್ ಜೈನ್ ತನ್ನನ್ನು ಎನ್‌ಸಿಆರ್ ಪ್ರದೇಶದಲ್ಲಿ ಉದ್ಯಮಿ ಎಂದು ಪರಿಚಯಿಸಿಕೊಂಡು ಆಕೆಯನ್ನು ದೆಹಲಿಗೆ ಬರುವಂತೆ ತಿಳಿಸಿದ್ದಾನೆ. ಜತೆಗೆ ತನ್ನ ಮನೆಯವರ

ವ್ಯಕ್ತಿಗೆ‌ ಮಾರು ಹೋಗಿ‌ ಹಣ ಚಿನ್ನ ಕಳೆದುಕೊಂಡ ಮಹಿಳೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ, ಮೇ.12. ಬೈಕ್‌ ನಲ್ಲಿ ಪತ್ನಿಯೊಂದಿಗೆ ಮೊಬೈಲ್‌ ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರಿನ ವೈದ್ಯನಾಥಪುರ ನಿವಾಸಿ ನವವಿವಾಹಿತ ಮಧು(35) ಮೃತರು ಎಂದು ಗುರುತಿಸಲಾಗಿದೆ.

ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top