ಕ್ರೈಮ್ ನ್ಯೂಸ್

ಬೈಕ್​ ಗೆ KSRTC ಬಸ್ ಢಿಕ್ಕಿ ➤ ಸ್ಥಳದಲ್ಲೇ ನವವಿವಾಹಿತೆ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಮೇ.08. ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಬಳಿ ನಡೆದಿದೆ. ಹಲ್ಲರೆ ಗ್ರಾಮದ ಪೂಜಾ(19) ಮೃತ ದುರ್ದೈವಿಯಾಗಿದ್ದಾರೆ. ಪತಿ ಮದನ್ ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಡಿಯಾಲ ಗ್ರಾಮದಿಂದ ಸಾರಿಗೆ ಬಸ್ ನಂಜನಗೂಡು ಕಡೆಗೆ ಬರುತ್ತಿದ್ದ ವೇಳೆ ಬೈಕ್ ​ನಲ್ಲಿ ನವದಂಪತಿಗಳು ತೆರಳುತ್ತಿದ್ದಾಗ ಈ ಸಂಭವಿಸಿದೆ.  

ಬೈಕ್​ ಗೆ KSRTC ಬಸ್ ಢಿಕ್ಕಿ ➤ ಸ್ಥಳದಲ್ಲೇ ನವವಿವಾಹಿತೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com  ತ್ರಿಶೂರು, ಏ. 08. ಯುವತಿಯನ್ನು ಬರ್ಬರವಾಗಿ ಕೊಲೆ‌ ಮಾಡಿ ಮೃತದೇಹವನ್ನು ಕಾಡಿನಲ್ಲಿ ಎಸೆದಿರುವ ಘಟನೆ ಕೇರಳದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಅಥಿರಾಗೆ ಕೊಲೆ‌ ಮಾಡಿ ತ್ರಿಸ್ಸೂರ್ ಜಿಲ್ಲೆಯ ಚಾಲಾಕುಡಿಯ ತುಂಬುರ್ ಮೂಜಿ ಕಾಡಿನಲ್ಲಿ ಎಸೆಯಲಾಗಿದೆ ಎಂದು ವರದಿ ತಿಳಿಸಿದೆ.  

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಜಯಪುರ ರೌಡಿಶೀಟರ್ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com.ವಿಜಯಪುರ , ಮೇ.6. ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿಯಲ್ಲಿ ರೌಡಿಶೀಟರ್​ ಸಾವನ್ನಪ್ಪಿದ್ದಾನೆ. ನಗರದ ಚಾಂದಪುರ ಕಾಲೋನಿಯಲ್ಲಿ ಘಟನೆ ನಡೆದಿದೆ. ರೌಡಿಶೀಟರ್​ ಹೈದರ್ ಅಲಿ ನದಾಫ್ಮೇ ಲೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹತ್ಯೆ ಮಾಡಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿ ಆಗಿದ್ದಾರೆ. ಮೃತ ಹೈದರ್​ ಅಲಿ ನಧಾಪ್ ಪತ್ನಿ ನಿಶಾತ್ ನದಾಫ್ ಅವರು ಪಾಲಿಕೆ ಸದಸ್ಯೆ ಆಗಿದ್ದಾರೆ.

ವಿಜಯಪುರ ರೌಡಿಶೀಟರ್ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ

(ನ್ಯೂಸ್ ಕಡಬ) newskadaba.com. ಜಮ್ಮುಕಾಶ್ಮೀರ,ಮೇ.6.  ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಾಳಿ ನಡೆಯುತ್ತಿದೆ. ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಶನಿವಾರ ಮುಂಜಾನೆ ಆರಂಭವಾದ ಬಾರಾಮುಲ್ಲಾ ದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ದಾಳಿ ಮುಂದುವರಿದಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಮತ್ತು ಭದ್ರತಾ ಪಡೆಗಳು ಒಟ್ಟಾಗಿ ಕಾರ್ಯಾಚರಣೆ ನಡೆಸುತ್ತಿವೆ. ಕಾಶ್ಮೀರ ವಲಯ ಪೊಲೀಸರು ನೀಡಿದ ಮಾಹಿತಿಯಂತೆ ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಚರ್ಚ್ ನಲ್ಲಿ ಕಳ್ಳತನ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ,ಮೇ.6. ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಒಡೆದು ಒಳ  ಬೀರುವಿನಲ್ಲಿಟ್ಟಿದ್ದ 12 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಹಾಗೂ 15,880 ರೂ.ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೇ  ಜನರೇಟರ್ ಶೆಡ್ ನ ಲಾಕರ್ ಒಡೆದು 35 ಲೀಟರ್ ಡೀಸೆಲ್ ಕಳ್ಳತನ ಮಾಡಿದ್ದಾರೆ. ಉಪ್ಪಿನಂಗಡಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಚರ್ಚ್ ನಲ್ಲಿ ಕಳ್ಳತನ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

➤ ರಾಜ್ಯಸ್ಥಾನ ವಿಷಾನಿಲದಿಂದ ಮೂವರು ಮೃತ್ಯು..

(ನ್ಯೂಸ್ ಕಡಬ) newskadaba.com. ರಾಜಸ್ಥಾನ, ಮೇ.6. ಮದುವೆ ಹಾಲ್​ವೊಂದರ ಒಳಚರಂಡಿ ಚೇಂಬರ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಯುವಕರು ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಪಾಲಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.ಸ್ವಚ್ಛ ಮಾಡುತ್ತಿದ್ದ ವೇಳೆ ವಿಷಾನಿಲದಿಂದ ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸ​ರು ತಿಳಿಸಿದ್ದಾರೆ. ಇದೇ ವೇಳೆ ಯುವಕನೊಬ್ಬ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಮೇರೆಗೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಂಗಾರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮೂವರು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಲಿ ನಗರದ ಸೆಂಚುರಿಯನ್ ಮ್ಯಾರೇಜ್ ಗಾರ್ಡನ್‌ನಲ್ಲಿ

➤ ರಾಜ್ಯಸ್ಥಾನ ವಿಷಾನಿಲದಿಂದ ಮೂವರು ಮೃತ್ಯು.. Read More »

ಕ್ರೈಮ್ ನ್ಯೂಸ್

ಪಾಕ್‌ಗೆ ಗುಪ್ತ ಮಾಹಿತಿ ರವಾನೆ ➤ ರಕ್ಷಣಾ ಸಂಸ್ಥೆಯ ವಿಜ್ಞಾನಿಯ ಬಂಧನ

(ನ್ಯೂಸ್ ಕಡಬ) newskadaba.com. ಮುಂಬೈ, ಮೇ.5. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬ ತನ್ನ ಎಲ್ಲಾ ಮಾಹಿತಿಯನ್ನು ಪಾಕಿಸ್ತಾನಿ ಏಜೆಂಟ್‍ಗೆ ನೀಡಿರುವ ಆರೋಪದ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದ್ದಾರೆ. ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದು ಹನಿಟ್ರ್ಯಾಪ್ ಮೂಲಕ ಆರೋಪಿಯನ್ನು ಬೆದರಿಸಿ ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಈ ಎಲ್ಲಾ ಮಾಹಿತಿಗಳು ತನಿಖೆಯ ನಂತರ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪಾಕಿಸ್ತಾನಿ ದೇಶಗಳಿಗೆ ತನ್ನ

ಪಾಕ್‌ಗೆ ಗುಪ್ತ ಮಾಹಿತಿ ರವಾನೆ ➤ ರಕ್ಷಣಾ ಸಂಸ್ಥೆಯ ವಿಜ್ಞಾನಿಯ ಬಂಧನ Read More »

ಕ್ರೈಮ್ ನ್ಯೂಸ್

ಸುಳ್ಯದಲ್ಲಿ ಕಳ್ಳರ ಕೈಚಳಕ ➤20 ಲಕ್ಷ ಮೌಲ್ಯದ ಸೊತ್ತು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com. ಸುಳ್ಯ, ಮೇ.5. ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಶಂಶುದ್ದೀನ್ ಅವರ ಮನೆಗೆ ನುಗ್ಗಿದ ಕಳ್ಳರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಶಂಶುದ್ದೀನ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕುಟುಂಬ ಸಮೇತ ಮಂಗಳೂರಿಗೆ ಹೋಗಿ ರಾತ್ರಿ 9.45ರ ಸುಮಾರಿಗೆ ಮನೆಗೆ ಮರಳಿದ್ದರು. ಮನೆಯ ಮುಂಬಾಗಿಲು ಮುರಿದಿರುವುದನ್ನು ಕುಟುಂಬದವರು ಗಮನಿಸಿ ಒಳಗೆ ಹೋಗಿ ಪರಿಶೀಲಿಸಿದಾಗ ಕಪಾಟುಗಳೂ ಒಡೆದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು14 ಬ್ರಾಂಡ್ ವಾಚ್‌ಗಳು, 20 ಚಿನ್ನದ ಉಂಗುರಗಳು, ಮೂರು ಪೆಂಡೆಂಟ್‌ಗಳು,

ಸುಳ್ಯದಲ್ಲಿ ಕಳ್ಳರ ಕೈಚಳಕ ➤20 ಲಕ್ಷ ಮೌಲ್ಯದ ಸೊತ್ತು ದೋಚಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ➤ ಆಫೀಸರ್ ಸೇರಿ ಮೂವರು ಗಂಭೀರ!

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ 04. ಜಮ್ಮು ಮತ್ತು ಕಾಶ್ಮೀರದ ಕಿಶ್​ತ್ವಾರ್ ಜಿಲ್ಲೆಯ ಮರ್ವಾಹ್ ತೆಹಸಿಲ್‌ನ ಮಚ್ನಾ ಗ್ರಾಮದ ಬಳಿ ಸೇನಾ ಕಾಪ್ಟರ್ ಎಎಲ್​ಎಚ್​ ಧ್ರುವ​ ಪತನಗೊಂಡ ಪರಿಣಾಮ ಕಾಪ್ಟರ್​ನಲ್ಲಿ ಕಮಾಂಡಿಂಗ್ ಆಫೀಸರ್ ​ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದು ಬೆಳಗ್ಗೆ ಕಾಪ್ಟರ್​ ಮರ್ವಾ ಕಡೆಗೆ ತೆರಳುತ್ತಿದ್ದಾಗ ಇಂದು ಬೆಳಗ್ಗೆ 9.40 ಕ್ಕೆ ಪತನಗೊಂಡಿದೆ. ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದ್ದು, ಪತನಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ➤ ಆಫೀಸರ್ ಸೇರಿ ಮೂವರು ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ 1.37 ಲಕ್ಷ.ರೂ ವಂಚನೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ 04. ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ ಲಿಂಕ್ ಕಳುಹಿಸಿ ವ್ಯಕ್ತಿಯೋರ್ವರಿಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ದೂರುದಾರರ ಇಮೇಲ್ ಐಡಿಗೆ ಮೇ 1ರಂದು lyall-nalda@xtra.co.nz ಇ-ಮೇಲ್ ಐಡಿಯಿಂದ Netflix Order Failed-action needed ಎಂಬ ಸಂದೇಶ ಬಂದಿತ್ತು. ಅದನ್ನು ತೆರೆದಾಗ ಅದರಲ್ಲಿ ‘ನಿಮ್ಮ ಕ್ರೆಡಿಟ್ ಕಾರ್ಡ್ ವಿಫಲವಾಗಿದೆ. ಅದನ್ನು ರಿ ರಿಜಿಸ್ಟರ್ ಮಾಡಬೇಕು’ಎಂದು ಬರೆಯಲಾಗಿತ್ತು. ಅದರ ಜತೆಗೆ ಲಿಂಕ್ ಕಳುಹಿಸಲಾಗಿತ್ತು. ದೂರುದಾರ ಆ ಲಿಂಕ್ ತೆರೆದು ನೋಡಿದಾಗ ಅದರಲ್ಲಿ

ಮಂಗಳೂರು : ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ 1.37 ಲಕ್ಷ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top