ಕ್ರೈಮ್ ನ್ಯೂಸ್

ಕಾಸರಗೋಡು: ಕಣಜದ ಹುಳು ದಾಳಿ ➤ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.13. ಕಣಜದ ಹುಳುಗಳ ದಾಳಿಯಿಂದ ಪೈಂಟಿಂಗ್ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಚಿತ್ತಾರಿಕಾಲ್ ನಲ್ಲಿ ನಡೆದಿದೆ. ಚಿತ್ತಾರಿಕಾಲ್ ಕಂಬಲ್ಲೂರಿನ ಬಿಟೋ ಜೋಸೆಫ್ (35) ಮೃತಪಟ್ಟವರು. ಸಂಬಂಧಿಕ ರೋರ್ವರ ಮನೆಯಲ್ಲಿ ಈ ಘಟನೆ ನಡೆದಿದೆ. ಪೈಂಟಿಂಗ್ ಕೆಲಸದ ಸಂದರ್ಭದಲ್ಲಿ ಜೋಸೆ ಫ್ ರವರ ಮೇಲೆ ಕಣಜದ ಹುಳುಗಳು ದಾಳಿ ನಡೆಸಿದ್ದು, ಮನೆಯವರು ಹಾಗೂ ಪರಿಸರವಾಸಿಗಳು ಪರಿಯಾರಂ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಕಾಸರಗೋಡು: ಕಣಜದ ಹುಳು ದಾಳಿ ➤ ಕಾರ್ಮಿಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಡುಗೆ ಅನಿಲ ಸ್ಫೋಟ..! ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ತೆಲಂಗಾಣ, ಏ.12.  ಖಮ್ಮಂ ಜಿಲ್ಲೆಯಲ್ಲಿ ಬಿಆರ್‌ಎಸ್ ಸಭೆಯ ವೇಳೆ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಹೊತ್ತಿಕೊಂಡು ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ವೈರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರೇಪಲ್ಲಿ ಮಂಡಲದ ಚೀಮಲಪಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಅಡುಗೆ ಅನಿಲ ಸ್ಫೋಟ..! ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್

ಆಸ್ತಿಗಾಗಿ ಅತ್ತೆ ಮಾವನನ್ನೇ ಹತ್ಯೆ ಮಾಡಿದ ಪಾಪಿ ಸೊಸೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.12. ಅತ್ತೆ – ಮಾವ ಎಂದರೆ ಸೊಸೆಗೆ ಎರಡನೇ ತಾಯಿ ಹಾಗೂ ತಂದೆ, ಆದರೆ ಆಸ್ತಿಯಾಸೆಗಾಗಿ ಸ್ವಂತ ಅತ್ತೆ – ಮಾವನನ್ನೇ ಸೊಸೆ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗಿದೆ. ಇಬ್ಬರು ಸಹಚರರ ನೆರವಿನೊಂದಿಗೆ ವೃದ್ಧ ದಂಪತಿಯನ್ನು ಅವರ ಸೊಸೆ ಮೋನಿಕಾ ದೆಹಲಿಯಲ್ಲಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 70 ರ ಹರೆಯದ ಇಬ್ಬರು ಹಿರಿಯ ನಾಗರಿಕರು ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ತಮ್ಮ ಮಗ, ಸೊಸೆ ಮತ್ತು

ಆಸ್ತಿಗಾಗಿ ಅತ್ತೆ ಮಾವನನ್ನೇ ಹತ್ಯೆ ಮಾಡಿದ ಪಾಪಿ ಸೊಸೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com. ಸೌದಿ ಅರೇಬಿಯಾ, ಏ.12. ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ ನಾಸರ್ ಮತ್ತು ಖದೀಜಾ ದಂಪತಿಯ ಪುತ್ರ ಅಬ್ದುಲ್ ರಹಮಾನ್ (9) ಮೃತರು.  ಅಬ್ದುಲ್ರಹ್ಮಾನ್ ತನ್ನ ತಾಯಿ, ಸಹೋದರ ಮತ್ತು ಸಹೋದರಿಯೊಂದಿಗೆ ಉಮ್ರಾ ಮಾಡಲು ತೆರಳಿದ್ದರು. ಬಾಲಕನ ತಂದೆ ಮಕ್ಕಾದಲ್ಲಿದ್ದರು. ಉಮ್ರಾ ಮುಗಿಸಿ ತನ್ನ ಕೊಠಡಿಯಲ್ಲಿ

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com  ಕಡಬ, ಏ.11. ಕಡಬ ತಾಲೂಕಿನ ಮರ್ಧಾಳ ನಿವಾಸಿ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು  ಕಡಬ ಮರ್ಧಾಳ ನಿವಾಸಿ ಶಫೀಕ್ (40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.  

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com.ಕಡಬ, ಏ.11. ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ಯುವಕನೋರ್ವ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಹರೀಶ (29) ಮೃತಪಟ್ಟ  ವ್ಯಕ್ತಿ. ಹರೀಶ್ ಇಂದು ಬೆಳಿಗ್ಗೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿಯ ಕಂದೂರು  ಸಮೀಪದ ವ್ಯಕ್ತಿಯೊಬ್ಬರ ಜಾಗದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಹರೀಶರವರು ಸ್ಮೃತಿ ತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ. ಕೂಡಲೇ ಅಲ್ಲಿ ಇದ್ದವರು ಅಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರೆನ್ನಲಾಗಿದೆ‌. ಮೃತರು

ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿ ವಿಚಾರಕ್ಕೆ ಗಲಾಟೆ ➤ಬ್ಯಾಟ್ ನಿಂದ ಹೊಡೆದು ವೃದ್ಧನ ಹತ್ಯೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.11. ಮನೆ ಮುಂದೆ ನಾಯಿ ಕರೆದುಕೊಂಡು ಗಲೀಜು ಮಾಡಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಬ್ಯಾಟ್​ನಿಂದ ಹೊಡೆದು ಹಿರಿಯ ನಾಗರಿರೊಬ್ಬರ ಹತ್ಯೆ ಮಾಡಲಾಗಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಲದೇವನಹಳ್ಳಿಯ ಗಣಪತಿನಗರ ನಿವಾಸಿ 67 ವರ್ಷದ ಮುನಿರಾಜು ಕೊಲೆಯಾದ ವೃದ್ಧ. ಘಟನೆಯಲ್ಲಿ ಮುರುಳಿ ಎಂಬಾತ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಕೃತ್ಯವೆಸಗಿದ ಸಂಬಂಧ ಪ್ರಮೋದ್, ರವಿಕುಮಾರ್ ಹಾಗೂ ಈತನ ಪತ್ನಿ ಪಲ್ಲವಿ

ನಾಯಿ ವಿಚಾರಕ್ಕೆ ಗಲಾಟೆ ➤ಬ್ಯಾಟ್ ನಿಂದ ಹೊಡೆದು ವೃದ್ಧನ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು ➤ ಇಬ್ಬರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಏ.11. ಕಾರ್‌ ಗೆ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಮಧ್ಯಪ್ರದೇಶದ ಇಂದೋರ್‌ನ ಶೆರಾಟನ್ ಗ್ಯಾಂಡ್ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಶಾತ್ ಕಾರೊಳಗಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ಯಾರೇಜ್ ನಡೆಸುತ್ತಿರುವ ಇರ್ಷಾದ್ ಖಾನ್ ಮತ್ತು ಅವರ ಸಹೋದ್ಯೋಗಿ ಹಲೀಂ ಖಾನ್ ಅವರು ಮಹೀಂದ್ರ ಸ್ಕಾರ್ಪಿಯೊವನ್ನು ಟೆಸ್ಟ್ ಡ್ರೈವ್ ಮಾಡಲು ಹೊರಟಿದ್ದು, ಡ್ಯಾಶ್‌ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ, ಟೆಸ್ಟ್ ಡ್ರೈವ್‌ನಲ್ಲಿ ಕಾರಿನಿಂದ ಹೊಗೆ ಬರಲಾರಂಭಿಸಿತು. ಸ್ವಲ್ಪ ಹೊತ್ತಿನಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.  

ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು ➤ ಇಬ್ಬರು ಪ್ರಾಣಾಪಾಯದಿಂದ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಪೋಷಕರು ಮೊಬೈಲ್ ಕಸಿದು ಕೊಂಡರೆಂಬ ಕ್ಷುಲಕ ಕಾರಣಕ್ಕೆ 15 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯ ಪಶ್ಚಿಮ ಉಪನಗರದ ಅಲ್ವಾನಿ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಹೆಚ್ಚು ಮೊಬೈಲ್‌ ಬಳಸುತ್ತಿದ್ದು, ಇದರಿಂದ ಬಾಲಕಿಗೆ ಪೋಷಕರು ಬುದ್ದಿ ಮಾತನ್ನು ಹೇಳಿದ್ದರು. ಆದರೂ, ಬಾಲಕಿ ಇದನ್ನು ಕೇಳದ ಕಾರಣ ಪೋಷಕರು ಬಾಲಕಿಯಿಂದ ಮೊಬೈಲ್‌ ಕಸಿದುಕೊಂಡಿದ್ದಾರೆ. ಇದೇ ಕಾರಣದಿಂದ ಬಾಲಕಿ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಹದಿಹರೆಯದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ವರದಿ ತಿಳಿಸಿದೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ

ಉಡುಪಿ: ಹದಿಹರೆಯದ ಯುವತಿ ನಾಪತ್ತೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top