ಕ್ರೈಮ್ ನ್ಯೂಸ್

ಹಾವನ್ನು ಹಿಡಿದು ಹಿಂಸಿಸಿ ಕೊಂದ ಯುವಕರು ಅರೆಸ್ಟ್

(ನ್ಯೂಸ್ ಕಡಬ)newskadaba.com ಚೆನ್ನೈ, ಏ.06. ತಮಿಳುನಾಡಿನ ಕೈನೂರುನಲ್ಲಿ ಹಾವಿಗೆ ಹಿಂಸೆ ನೀಡಿದ ಆರೋಪದ ಮೇಲೆ ಮೂವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೋಹನ್, ಸೂರ್ಯ ಮತ್ತು ಸಂತೋಷ್ ಬಂಧಿತ ಆರೋಪಿಗಳಗಿದ್ದು, ಅವರು ಹಾವೊಂದನ್ನು ಹಿಡಿದು ಅದನ್ನು ಹಿಂಸಿಸಿ ಅದರ ಸಾವಿಗೆ ಕಾರಣರಾಗಿದ್ದಾರೆ. ಮೋಹನ್‌ ಎಂಬಾತ ಕೈಯಲ್ಲಿ ಹಾವು ಹಿಡಿದುಕೊಂಡಿದ್ದು, ಹಾವು ಮೋಹನ್‌ ಕೈಗೆ ಕಚ್ಚಿದೆ. ಇದಕ್ಕೆ ಮೋಹನ್‌ ಹಾವು ನನ್ನ ಕೈಗೆ ಕಚ್ಚಿದೆ. ನಾನು ಅದರ ಸೇಡು ತೀರಿಸಿಕೊಳ್ಳಬೇಕೆಂದು ಹಾವಿನ ತಲೆ ಕಚ್ಚಿದ್ದಾನೆ ಎನ್ನಲಾಗಿದೆ. ಇತರರು […]

ಹಾವನ್ನು ಹಿಡಿದು ಹಿಂಸಿಸಿ ಕೊಂದ ಯುವಕರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುಣ್ಯಸ್ನಾನಕ್ಕೆ ಕಲ್ಯಾಣಿಗಿಳಿದ ಐವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಏ.06. ದಾರುಣ ಘಟನೆಯೊಂದರಲ್ಲಿ ಐವರು ಚೆನ್ನೈನ ದೇವಸ್ಥಾನದ ಬಳಿಯ ಸಾರ್ವಜನಿಕ ಕಲ್ಯಾಣಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಭಕ್ತರು ಪಂಗುನಿ ಆಚರಣೆಯ ಅಂಗವಾಗಿ ಧಾರ್ಮಿಕ ಕ್ರಿಯೆಗಳಿಗಾಗಿ ತೊಟ್ಟಿಯಲ್ಲಿ ಜಮಾಯಿಸಿದಾಗ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ‘ಮೊದಲಿಗೆ ಒಬ್ಬರು ಜಾರಿಬಿದ್ದರು, ಮತ್ತು ನಂತರ ಅವರನ್ನು ರಕ್ಷಿಸಲು ಪ್ರಯತ್ನಿಸಿದವರೂ ನೀರಿನಲ್ಲಿ ಮುಳುಗಿದರು. ಪೊಲೀಸರ ಪ್ರಕಾರ, ಎಲ್ಲಾ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವಿಷಯದ ಬಗ್ಗೆ

ಪುಣ್ಯಸ್ನಾನಕ್ಕೆ ಕಲ್ಯಾಣಿಗಿಳಿದ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ

 (ನ್ಯೂಸ್ ಕಡಬ)newskadaba.com ಕೇರಳ, ಏ.05. 5 ವರ್ಷಗಳ ಹಿಂದೆ ಕೇರಳದಲ್ಲಿ ನಡೆದಿದ್ದ ಬುಡಕಟ್ಟು ಯುವಕನೊಬ್ಬನ ಕೊಲೆಗೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಕೇರಳದ ಪಾಲಕ್ಕಾಡ್‌ನ ಮನ್ನಾರ್‌ಕಾಡ್‌ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಧು ಎಂಬ ಬುಡಕಟ್ಟು ಯುವಕನನ್ನು ಫೆ. 22, 2018 ರಂದು ಕೊಲೆಗೈದ ಕಾರಣಕ್ಕೆ ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯ 14 ಮಂದಿಯನ್ನು ದೋಷಿಗಳೆಂದು ಹೇಳಿದೆ.

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ

(ನ್ಯೂಸ್ ಕಡಬ)newskadaba.com  ಛತ್ತೀಸ್ ಗಢ, ಏ.05. ಮದುವೆಗೆ ನಾನಾ ರೀತಿಯ ಉಡುಗೊರೆಗಳು ಬರೋದು ಸಾಮಾನ್ಯವಾಗಿದ್ದು, ಸಂತಸದ ಸಮಾರಂಭದಲ್ಲಿ ಸೂತಕದ ವಾತಾವರಣ ಏರ್ಪಟ್ಟಿದೆ. ಛತ್ತೀಸ್‌ಗಢದಲ್ಲಿ ದುರಂತ ಘಟನೆ ನಡೆದಿದೆ. ಮದುವೆ ಉಡುಗೊರೆಯಾಗಿ ಪಡೆದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಮನೆಯಲ್ಲೇ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com ಸುಳ್ಯ, ಏ.05. ಕೋಳಿ ಪದಾರ್ಥಕ್ಕೆ ನಡೆದ ಜಗಳ‌ಕೊಲೆಯಲ್ಲಿ ಅಂತ್ಯವಾದ ಶಾಕಿಂಗ್ ಘಟನೆ ಕರಾವಳಿಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಶಿವರಾಮ(32) ಮೃತರು ಎಂದು ಗುರುತಿಸಲಾಗಿದೆ. ಮೊಗ್ರ ಏರಣಗುಡ್ಡೆಯ ಮಾತೃಮಜಲು ನಿವಾಸಿ ಶೀನ ಅವರ ಮನೆಯಲ್ಲಿ ಕೋಳಿ ಪದಾರ್ಥ ಮಾಡಲಾಗಿತ್ತು. ‌ಮಗ ಶಿವರಾಮ ರಾತ್ರಿ ತಡವಾಗಿ ಬಂದಾಗ ಪದಾರ್ಥ ಖಾಲಿಯಾಗಿತ್ತು.‌ ಈ ಹಿನ್ನೆಲೆ‌ ಶಿವರಾಮ ಮನೆಯಲ್ಲಿ ಗಲಾಟೆ ಮಾಡಿದ್ದಾರೆ. ಇದಕ್ಕೆ ಕೋಪಗೊಂಡ ಶೀನ ಮಗನಿಗೆ ದೊಣ್ಣೆಯಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಿವರಾಮ ಅವತ ತಲೆಗೆ

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಸಹ ಪ್ರಯಾಣಿಕೆಯೊಂದಿಗೆ ಮಾತನಾಡಿದ್ದನ್ನೇ ನೆಪವಾಗಿರಿಸಿ ಯುವಕರ ಗುಂಪೊಂದು ಯುವತಿಗೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಉಜಿರೆಯಲ್ಲಿ ವರದಿಯಾಗಿದೆ. ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಮಗಳನ್ನು ಶಾಲೆಗೆ ಬಿಡಲು ಬೈಕ್’ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿಯ ಸಾಬರಪಾಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಾಗಡಿಯ ಕಲ್ಯಾ ಗ್ರಾಮದ ಯೋಗೇಶ್ (47) ಮಗಳು ಹರ್ಷಿತಾ(14) ಮೃತಪಟ್ಟವರು. ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್’ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

(ನ್ಯೂಸ್ ಕಡಬ)newskadaba.com  ಹಾಸನ, ಏ.04. ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆ, ರೇಗಿಸಿದ ಯುವಕನಿಗೆ ಧರ್ಮದೇಟು ನೀಡಿ ಯುವತಿಯೊಬ್ಬಳು ತಕ್ಕಶಾಸ್ತಿ ಮಾಡಿದ್ದಾಳೆ. ಹಾಸನ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಮುಂಭಾಗ ಯುವಕ ಚುಡಾಯಿಸಿದ್ದಾನೆ. ಇದರಿಂದ ಸಿಟ್ಟಾದ ಯುವತಿ, ಚಪ್ಪಲಿಯಿಂದ ಹೊಡೆದಿದ್ದಾಳೆ. ಯುವಕ ರೇಗಿಸಿದ್ದಲ್ಲದೆ, ಯುವತಿಯ ಮೇಲೆ ಕೈ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಯುವಕನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೊಗಳನ್ನು ಕ್ಲಿಕ್ಕಿಸಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ‘ಆಂಧ್ರಪ್ರದೇಶದ 40 ವರ್ಷ ವಯಸ್ಸಿನ ಮಹಿಳೆ ದೂರು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು. ಶಾರ್ಟ್‌ ಧರಿಸಿದ್ದ ಅವರ ಫೋಟೊವನ್ನು ಆರೋಪಿ ತನ್ನ ಮೊಬೈಲ್‌ ನಲ್ಲಿ ಕ್ಲಿಕ್ಕಿಸಿದ್ದ. ಅದನ್ನು ನೋಡಿದ್ದ ಮಹಿಳೆ, ಆತನನ್ನು ಪ್ರಶ್ನಿಸಿದ್ದರು. ಇಬ್ಬರ ನಡುವೆ ವಾಗ್ವಾದ ನಡೆದಿತ್ತು.’  

ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಟರಿಯಲ್ಲಿ 80 ಲಕ್ಷ ಗೆದ್ದ ಮರುದಿನ ಯುವಕ ನಿಗೂಢವಾಗಿ ಮೃತ್ಯು

(ನ್ಯೂಸ್ ಕಡಬ)newskadaba.com ಪಾಂಗೋಡು, ಏ.04. ಕೇರಳ ರಾಜ್ಯ ಲಾಟರಿ ಡ್ರಾದಲ್ಲಿ 80 ಲಕ್ಷ ರೂ. ಗೆದ್ದಿದ್ದ ವ್ಯಕ್ತಿಯೋರ್ವ ಸ್ನೇಹಿತನ ಮನೆಯಲ್ಲಿ ಮದ್ಯದ ಪಾರ್ಟಿಯ ಮಧ್ಯೆ ಆಳವಾದ ಹೊಂಡಕ್ಕೆ ಬಿದ್ದು ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತಿರುವನಂತಪುರಂನ ಪಂಗೋಡು ಮೂಲದ ಸಜೀವ್ (35) ಎಂದು ಗುರುತಿಸಲಾಗಿದೆ. ಸಜೀವ್ ಕಳೆದ ತಿಂಗಳು ಲಾಟರಿ ಗೆದ್ದಿದ್ದರು. ಕೆಲ ದಿನಗಳ ಹಿಂದಷ್ಟೇ ಅವರ ಬ್ಯಾಂಕ್ ಖಾತೆಗೆ ಬಹುಮಾನದ ಹಣ ಜಮೆಯಾಗಿದೆ. ಇದರ ಬೆನ್ನಲ್ಲೇ ಏಪ್ರಿಲ್ 1ರಂದು ರಾತ್ರಿ 9 ಗಂಟೆ ಸುಮಾರಿಗೆ

ಲಾಟರಿಯಲ್ಲಿ 80 ಲಕ್ಷ ಗೆದ್ದ ಮರುದಿನ ಯುವಕ ನಿಗೂಢವಾಗಿ ಮೃತ್ಯು Read More »

ಕ್ರೈಮ್ ನ್ಯೂಸ್
Scroll to Top