ಕ್ರೈಮ್ ನ್ಯೂಸ್

Theft, crime, Robbery

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಏ. 04. ಕಳ್ಳನೋರ್ವ ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ವರದಿಯಾಗಿದೆ. ವ್ಯಾಪಾರಿಯು ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದ ವೇಳೆ, ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನು ಈ ಬ್ಯಾಗ್ ನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಕಳ್ಳನ ಪತ್ತೆಗೆ ಹುಡುಕಾಟ ಮುಂದುವರಿಸಿದ್ದಾರೆ.  

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಏ. 04. ಶಂಕಿತ ರೇಬಿಸ್‌ ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಎಂದು ಗುರುತಿಸಲಾಗಿದೆ. ಈತನಿಗೆ ಮೂರು ತಿಂಗಳ ಹಿಂದೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು, ಬಳಿಕ ನಾಯಿ ಮೃತಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಬಳಿಕ ತೀವ್ರ ಜ್ವರದಿಂದ ಬಳಲುತ್ತಿದ್ದ ಈತ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ..! ➤ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕೊಣಾಜೆ, ಏ.04. ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕೊಣಾಜೆ ಎಂಬಲ್ಲಿ ಸಂಭವಿಸಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ, ಆದರೆ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ

ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ..! ➤ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾರ್ಜ್‌ ಮಾರ್ಟಿಸ್‌ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿಶಿರ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ ಒಂದು ಪಿಸ್ತೂಲ್‌ ಮತ್ತು ಬುಲೆಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ತನ್ನ ಮನೆಯ ಒಂದು ಮಹಡಿಯಲ್ಲಿ ಸುಮಾರು ಐದು ತಿಂಗಳಿಂದ ಬಾಡಿಗೆ ಇದ್ದ ಶಿಶಿರ್‌ ಬಳಿ ಪಿಸ್ತೂಲ್‌ ಇರುವ ಬಗ್ಗೆ ಮನೆಯ ಮಾಲಕರು ಪೊಲೀಸರಿಗೆ ದೂರು ನೀಡಿದ್ದರು.

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಏ.03. ಬೆಂಗಳೂರಿನ‌ ಮೂವರು ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಇಮ್ರಾನ್ ಖಾನ್ (20), ರಾಧಿಕಾ(19) ಮತ್ತು ಪೂಜಾ(19)ಮೃತರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದು ಮೂವರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.03. ಕಾರು ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿ ಮೃತಪಟ್ಟ ಘಟನೆ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಳೆದ 10 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇಂದ್ರಜಿತ್​ ಮೋಹನ್ ಡಮ್ಮಣಗಿ(27) ಹಾಗೂ ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ(24) ಮೃತರು ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಮೂಲದ ದಂಪತಿ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ಧ ಬಾದಾಮಿ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ !

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.03. 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದು, ಈ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.03. ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ಹಣ ವರ್ಗಾವಣೆ ಮಾಡಿ ನಿಲ್ಲಿಸಿದ್ದ ವಾಹನವನ್ನು ಕದ್ದು ಪರಾರಿಯಾದ ಬೆಳ್ತಂಗಡಿಯಲ್ಲಿ ನಡೆದಿದೆ. ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಹಣ ಎಗರಿಸಿದ ಆರೋಪಿಗಳು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top