ಕ್ರೈಮ್ ನ್ಯೂಸ್

ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ➤ 31 ಮಂದಿ ಸಜೀವದಹನ ಹಲವರು ನಾಪತ್ತೆ..!

ನ್ಯೂಸ್ ಕಡಬ) newskadaba.com. ದಕ್ಷಿಣ ಫಿಲಿಪ್ಪೀನ್ಸ್, ಮಾ.31.  ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 31 ಮಂದಿ ಸಜೀವದಹನಗೊಂಡ, ಹಲವರು ಗಾಯಗೊಂಡಿರುವ ಹಾಗೂ ನಾಪತ್ತೆಯಾಗಿರುವ ಘಟನೆ ದಕ್ಷಿಣ ಫಿಲಿಪ್ಪೀನ್ಸ್’ನಲ್ಲಿ ನಡೆದಿದೆ. ಎಂವಿ ಲೇಡಿ ಮೇರಿ ಜಾಯ್ 3 ಎಂಬ ಈ ಹಡಗಿನಲ್ಲಿ ಸುಮಾರು 250ಕ್ಕೂ ಅಧಿಕ ಪ್ರಯಾಣಿಕರು ಹಾಗೂ ಸಿಬ್ಬಂದಿ ಎಂದು ತಿಳಿದುಬಂದಿದೆ. 200ಕ್ಕೂ ಹೆಚ್ಚು ಜನರು ಜೀವ ಉಳಿಸಿಕೊಳ್ಳಲು ನೀರಿಗೆ ಜಿಗಿದಿದ್ದಾರೆ. ದಟ್ಟವಾದ ಕತ್ತಲಿನಲ್ಲಿಯೂ ಕರಾವಳಿ ಕಾವಲು ಪಡೆ, ನೌಕಾ ಪಡೆ, ಸಮೀಪದಲ್ಲಿದ್ದ ದೋಣಿ […]

ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ➤ 31 ಮಂದಿ ಸಜೀವದಹನ ಹಲವರು ನಾಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಮಾ.31. ಇಂದೋರ್‌ನ ದೇವಾಲಯವೊಂದರಲ್ಲಿ ಕಡಿದಾದ ಬಾವಿಗೆ ಬಿದ್ದು ಕನಿಷ್ಠ 13 ಜನರು ಮೃತಪಟ್ಟು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಅಲ್ಲದೆ ಓರ್ವ ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. 13 ಮಂದಿಯಲ್ಲಿ 10 ಮಂದಿ ಮಹಿಳೆಯರು, ಇನ್ನೂ ಕೆಲವರು ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಎನ್‌ಡಿಆರ್‌ಎಫ್ ತಂಡ 13 ಮೃತ ದೇಹಗಳನ್ನು ಬಾವಿಯಿಂದ ಹೊರತೆಗೆದಿದೆ.  

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಜಾಬ್‌ ತೆಗೆಯುವಂತೆ ಒತ್ತಾಯ ➤ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com. ವೆಲ್ಲೂರು, ಮಾ.31. ಐತಿಹಾಸಿಕ ವೆಲ್ಲೂರು ಕೋಟೆಗೆ ಭೇಟಿ ನೀಡುತ್ತಿದ್ದ ವೇಳೆ ಮಹಿಳೆಯೊಬ್ಬರಿಗೆ ಒತ್ತಾಯಪೂರ್ವಕವಾಗಿ ಹಿಜಾಬ್‌ ತೆಗೆಯುವಂತೆ ಹೇಳಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ‘ಮಹಿಳೆಗೆ ತೊಂದರೆ ನೀಡಿದ ಗುಂಪಿನಲ್ಲಿ ಒಟ್ಟು ಏಳು ಮಂದಿ ಇದ್ದರು. ಇದರಲ್ಲಿ 17 ವರ್ಷದ ಬಾಲಕನನ್ನು ಸರ್ಕಾರಿ ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಉಳಿದ ಆರು ಮಂದಿಯನ್ನು ಬಂಧಿಸಲಾಗಿದೆ. ಇಮ್ರಾನ್‌ ಬಾಷಾ (22), ಅಶ್ರಫ್‌ ಬಾಷಾ (20), ಮೊಹಮ್ಮದ್‌ ಫೈಜಲ್‌ (23), ಸಂತೋಷ್‌ (23), ಇಬ್ರಾಹಿಂ ಬಾಷಾ (24) ಹಾಗೂ ಪ್ರಶಾಂತ್

ಹಿಜಾಬ್‌ ತೆಗೆಯುವಂತೆ ಒತ್ತಾಯ ➤ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್

➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ

(ನ್ಯೂಸ್ ಕಡಬ) newskadaba.com. ಮಂಗಳೂರು,ಮಾ.31.  ಮಂಡ್ಯ ಕೌಟುಂಬಿಕ ಕಲಹಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ  ಪತಿ ಕೂಡ ಸಾವಿಗೆ ಶರಣಾದ ಘಟನೆ ಶ್ರೀರಂಗ ಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದು. ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು

(ನ್ಯೂಸ್ ಕಡಬ)newskadaba.com  ಕಾಸರಗೋಡು, ಮಾ.31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.  

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ 

(ನ್ಯೂಸ್ ಕಡಬ)newskadaba.com  ಕಡಬ, ಮಾ.31. ಯುವಕನೋರ್ವ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬದಲ್ಲಿ ವರದಿಯಾಗಿದೆ. ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಈ ಘಟನೆ ನಡೆದಿದ್ದು ಮೃತ ಯುವಕ  ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.  

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ  Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸನ 2 ಗುಂಪುಗಳ ನಡುವೆ ಮಾರಾಮಾರಿ ➤ ಬಾಲಕರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com. ಹಾಸನ, ಮಾ.31. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ರಾಮನವಮಿ‌ ಹಿನ್ನೆಲೆ ಮೆರವಣೆಗೆ ನಡೆಯುತ್ತಿದ್ದ ವೇಳೆ  ಎರಡು ಗುಂಪುಗಳ ನಡುವೆ ಮಾರಾಮಾರಿ ಶುರುವಾಗಿದೆ. ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರ ಗುಂಪೊಂದು ಇಬ್ಬರು ಅಪ್ರಾಪ್ತ ಬಾಲಕರಿಗೆ ಚಾಕುವಿನಿಂದ ಇರಿದಿರುವ ಘಟನೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ಮುರಳಿ, ಹರ್ಷ ಎಂಬ ಬಾಲಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಹಾಸನ 2 ಗುಂಪುಗಳ ನಡುವೆ ಮಾರಾಮಾರಿ ➤ ಬಾಲಕರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.31. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ. ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ(42) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು. ಕಣ್ಣೂರು ಸೆಂಟ್ರಲ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ ಸಿಸಿಟಿವಿಯಲ್ಲಿ ಸೆಎರಯಾಗಿದ್ದು, ಕಳ್ಳನ ಚಹರೆಯೂ ಸರಿಯಾಗಿ ಗೋಚರಿಸಿತ್ತು. ಅದೇ

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top